Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ವ್ಯಂಗ್ಯವಾಡಿದ ಅಲ್ಲು ಅರ್ಜುನ್​; ಹಿಗ್ಗಾಮುಗ್ಗಾ​ ತರಾಟೆ

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ.

ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ವ್ಯಂಗ್ಯವಾಡಿದ ಅಲ್ಲು ಅರ್ಜುನ್​; ಹಿಗ್ಗಾಮುಗ್ಗಾ​ ತರಾಟೆ
ಅಲ್ಲು ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 04, 2022 | 7:38 PM

ದಕ್ಷಿಣ ಭಾರತದ ಚಿತ್ರರಂಗಕ್ಕೂ (South India Film Industry) ಹಾಗೂ ಬಾಲಿವುಡ್​ಗೂ (Bollywood) ಸಾಕಷ್ಟು ವ್ಯತ್ಯಾಸವಿದೆ. ಎರಡೂ ಚಿತ್ರರಂಗದವರು ಒಂದಕ್ಕಿಂತ ಒಂದು ಅದ್ಭುತ ಸಿನಿಮಾಗಳನ್ನು ನೀಡುವುದರಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಇಬ್ಬರಲ್ಲಿ ಯಾರು ಗ್ರೇಟ್​ ಎನ್ನುವ ವಿಚಾರದ ಬಗ್ಗೆಯೂ ಚರ್ಚೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಬಾಲಿವುಡ್​ಅನ್ನು ದಕ್ಷಿಣ ಭಾರತದ ಫ್ಯಾನ್ಸ್​ ಟ್ರೋಲ್​ ಮಾಡಿದರೆ, ಸೌತ್​ ಇಂಡಿಯಾ ಇಂಡಸ್ಟ್ರಿಯನ್ನು ಬಾಲಿವುಡ್​ ಅಭಿಮಾನಿಗಳು ಟೀಕೆ ಮಾಡುತ್ತಾರೆ. ಈಗ ಟಾಲಿವುಡ್​ನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun)​ ಟೀಕೆಗೆ ಗುರಿಯಾಗಿದ್ದಾರೆ. ಇಲ್ಲಿಯೇ ಇದ್ದುಕೊಂಡು, ಇಲ್ಲಿನ ಚಿತ್ರರಂಗದ ಬಗ್ಗೆ ಅವರು ವ್ಯಂಗ್ಯವಾಡಿದ್ದಾರೆ.

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ. ‘ಪುಷ್ಪ’ ಸಿನಿಮಾದ ಥೀಮ್​ ಇಟ್ಟುಕೊಂಡು ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಸೂಪರ್ ಹಿಟ್​ ‘ಪುಷ್ಪ’ ಸಿನಿಮಾದಲ್ಲಿ ಫೈಟಿಂಗ್​ ವೇಳೆ ಕೆಲ ಸ್ಲೋ ಮೋಷನ್​ ದೃಶ್ಯಗಳು ಬಂದಿದ್ದವು. ಇದು ಕೇವಲ ‘ಪುಷ್ಪ’ ಸಿನಿಮಾಗೆ ಮಾತ್ರ ಸೀಮಿತವಾಗಿಲ್ಲ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನ ಸಾಕಷ್ಟು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ಮಾದರಿಯ ತಂತ್ರ ಬಳಕೆ ಮಾಡಿಕೊಳ್ಳಾಗಿದೆ. ಈಗ ಬಂದಿರುವ ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ವ್ಯಂಗ್ಯವಾಡಲಾಗಿದೆ.

ಜೊಮ್ಯಾಟೋ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ತೆಲುಗು ನಟ ಸುಬ್ಬರಾಜು ನಡುವೆ ಫೈಟ್​ ನಡೆಯುತ್ತಿರುತ್ತದೆ. ಈ ಫೈಟ್​ನಲ್ಲಿ ಸುಬ್ಬರಾಜುಗೆ ಅಲ್ಲು ಅರ್ಜುನ್​ ಹೊಡೆಯುತ್ತಾರೆ. ಆಗ ಸುಬ್ಬರಾಜು ಅವರು ಸ್ಲೋಮೋಷನ್​ನಲ್ಲಿ ಕೆಳಗೆ ಬಿದ್ದಂತೆ ತೋರಿಸಲಾಗಿದೆ. ‘ಬನ್ನಿ ನನ್ನನ್ನು ಬೇಗ ಬೀಳಿಸು. ನನಗೆ ಮಟನ್​ ಕರ್ರಿ ತಿನ್ನಬೇಕು. ನಾನು ಬೀಳುವ ವೇಳೆಗೆ ರೆಸ್ಟೋರೆಂಟ್​ ಕ್ಲೋಸ್​ ಮಾಡುತ್ತಾರೆ’ ಎಂದಿದ್ದಾರೆ ಸುಬ್ಬರಾಜು. ಇದಕ್ಕೆ ಉತ್ತರಿಸಿರುವ ಅಲ್ಲು ಅರ್ಜುನ್​, ‘ಇದು ದಕ್ಷಿಣ ಭಾರತ ಸಿನಿಮಾ. ನಾವು ಮಾಡೋದೆ ಹೀಗೆ’ ಎಂದಿದ್ದಾರೆ.

ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ರೀತಿಯ ಸ್ಲೋ ಮೋಷನ್​ ಬಳಕೆ ಮಾಡಿಕೊಳ್ಳಲಾಗುತ್ತದೆ. ಅದನ್ನು ಇಲ್ಲೇಕೆ ಉಲ್ಲೇಖ ಮಾಡಿಲ್ಲ ಎನ್ನುವ ಪ್ರಶ್ನೆ ಎದುರಾಗಿದೆ. ಸದ್ಯ, ಈ ಜಾಹೀರಾತಿನಿಂದ ಜೊಮ್ಯಾಟೋ ಸಂಸ್ಥೆ ಸಂಕಷ್ಟಕ್ಕೆ ಸಿಲುಕುವ ಎಲ್ಲಾ ಸಾಧ್ಯತೆ ಗೋಚರವಾಗಿದೆ.

ಇದನ್ನೂ ಓದಿ: Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ 

ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

Published On - 5:50 pm, Fri, 4 February 22

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ