AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ವ್ಯಂಗ್ಯವಾಡಿದ ಅಲ್ಲು ಅರ್ಜುನ್​; ಹಿಗ್ಗಾಮುಗ್ಗಾ​ ತರಾಟೆ

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ.

ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಚಿತ್ರರಂಗದ ಬಗ್ಗೆ ವ್ಯಂಗ್ಯವಾಡಿದ ಅಲ್ಲು ಅರ್ಜುನ್​; ಹಿಗ್ಗಾಮುಗ್ಗಾ​ ತರಾಟೆ
ಅಲ್ಲು ಅರ್ಜುನ್
TV9 Web
| Edited By: |

Updated on:Feb 04, 2022 | 7:38 PM

Share

ದಕ್ಷಿಣ ಭಾರತದ ಚಿತ್ರರಂಗಕ್ಕೂ (South India Film Industry) ಹಾಗೂ ಬಾಲಿವುಡ್​ಗೂ (Bollywood) ಸಾಕಷ್ಟು ವ್ಯತ್ಯಾಸವಿದೆ. ಎರಡೂ ಚಿತ್ರರಂಗದವರು ಒಂದಕ್ಕಿಂತ ಒಂದು ಅದ್ಭುತ ಸಿನಿಮಾಗಳನ್ನು ನೀಡುವುದರಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಇಬ್ಬರಲ್ಲಿ ಯಾರು ಗ್ರೇಟ್​ ಎನ್ನುವ ವಿಚಾರದ ಬಗ್ಗೆಯೂ ಚರ್ಚೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಬಾಲಿವುಡ್​ಅನ್ನು ದಕ್ಷಿಣ ಭಾರತದ ಫ್ಯಾನ್ಸ್​ ಟ್ರೋಲ್​ ಮಾಡಿದರೆ, ಸೌತ್​ ಇಂಡಿಯಾ ಇಂಡಸ್ಟ್ರಿಯನ್ನು ಬಾಲಿವುಡ್​ ಅಭಿಮಾನಿಗಳು ಟೀಕೆ ಮಾಡುತ್ತಾರೆ. ಈಗ ಟಾಲಿವುಡ್​ನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun)​ ಟೀಕೆಗೆ ಗುರಿಯಾಗಿದ್ದಾರೆ. ಇಲ್ಲಿಯೇ ಇದ್ದುಕೊಂಡು, ಇಲ್ಲಿನ ಚಿತ್ರರಂಗದ ಬಗ್ಗೆ ಅವರು ವ್ಯಂಗ್ಯವಾಡಿದ್ದಾರೆ.

ಸಿನಿಮಾ ಹಿಟ್​ ಆದ ನಂತರದಲ್ಲಿ ಅದೇ ಥೀಮ್​ಅನ್ನು ಜಾಹೀರಾತಿನವರೂ ಬಳಕೆ ಮಾಡಿಕೊಳ್ಳುತ್ತಾರೆ. ‘ಪುಷ್ಪ’ ಸಿನಿಮಾ ಹಿಟ್​ ಆಗಿದೆ. ಈಗ ಅನೇಕ ಬ್ರ್ಯಾಂಡ್​ಗಳು ಅಲ್ಲು ಅರ್ಜುನ್​ ಹಿಂದೆ ಬಿದ್ದಿವೆ. ‘ಪುಷ್ಪ’ ಸಿನಿಮಾದ ಥೀಮ್​ ಇಟ್ಟುಕೊಂಡು ಜಾಹೀರಾತುಗಳನ್ನು ಮಾಡಲಾಗುತ್ತಿದೆ. ಸೂಪರ್ ಹಿಟ್​ ‘ಪುಷ್ಪ’ ಸಿನಿಮಾದಲ್ಲಿ ಫೈಟಿಂಗ್​ ವೇಳೆ ಕೆಲ ಸ್ಲೋ ಮೋಷನ್​ ದೃಶ್ಯಗಳು ಬಂದಿದ್ದವು. ಇದು ಕೇವಲ ‘ಪುಷ್ಪ’ ಸಿನಿಮಾಗೆ ಮಾತ್ರ ಸೀಮಿತವಾಗಿಲ್ಲ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನ ಸಾಕಷ್ಟು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ಮಾದರಿಯ ತಂತ್ರ ಬಳಕೆ ಮಾಡಿಕೊಳ್ಳಾಗಿದೆ. ಈಗ ಬಂದಿರುವ ಜೊಮ್ಯಾಟೋ ಜಾಹೀರಾತಿನಲ್ಲಿ ದಕ್ಷಿಣ ಭಾರತದ ಸಿನಿಮಾಗಳ ಬಗ್ಗೆ ವ್ಯಂಗ್ಯವಾಡಲಾಗಿದೆ.

ಜೊಮ್ಯಾಟೋ ಜಾಹೀರಾತಿನಲ್ಲಿ ಅಲ್ಲು ಅರ್ಜುನ್​ ಹಾಗೂ ತೆಲುಗು ನಟ ಸುಬ್ಬರಾಜು ನಡುವೆ ಫೈಟ್​ ನಡೆಯುತ್ತಿರುತ್ತದೆ. ಈ ಫೈಟ್​ನಲ್ಲಿ ಸುಬ್ಬರಾಜುಗೆ ಅಲ್ಲು ಅರ್ಜುನ್​ ಹೊಡೆಯುತ್ತಾರೆ. ಆಗ ಸುಬ್ಬರಾಜು ಅವರು ಸ್ಲೋಮೋಷನ್​ನಲ್ಲಿ ಕೆಳಗೆ ಬಿದ್ದಂತೆ ತೋರಿಸಲಾಗಿದೆ. ‘ಬನ್ನಿ ನನ್ನನ್ನು ಬೇಗ ಬೀಳಿಸು. ನನಗೆ ಮಟನ್​ ಕರ್ರಿ ತಿನ್ನಬೇಕು. ನಾನು ಬೀಳುವ ವೇಳೆಗೆ ರೆಸ್ಟೋರೆಂಟ್​ ಕ್ಲೋಸ್​ ಮಾಡುತ್ತಾರೆ’ ಎಂದಿದ್ದಾರೆ ಸುಬ್ಬರಾಜು. ಇದಕ್ಕೆ ಉತ್ತರಿಸಿರುವ ಅಲ್ಲು ಅರ್ಜುನ್​, ‘ಇದು ದಕ್ಷಿಣ ಭಾರತ ಸಿನಿಮಾ. ನಾವು ಮಾಡೋದೆ ಹೀಗೆ’ ಎಂದಿದ್ದಾರೆ.

ಇದು ಅನೇಕರ ಕೋಪಕ್ಕೆ ಕಾರಣವಾಗಿದೆ. ಬಾಲಿವುಡ್​ನ ಹಲವು ಸಿನಿಮಾಗಳಲ್ಲಿ ಫೈಟಿಂಗ್​ ವೇಳೆ ಇದೇ ರೀತಿಯ ಸ್ಲೋ ಮೋಷನ್​ ಬಳಕೆ ಮಾಡಿಕೊಳ್ಳಲಾಗುತ್ತದೆ. ಅದನ್ನು ಇಲ್ಲೇಕೆ ಉಲ್ಲೇಖ ಮಾಡಿಲ್ಲ ಎನ್ನುವ ಪ್ರಶ್ನೆ ಎದುರಾಗಿದೆ. ಸದ್ಯ, ಈ ಜಾಹೀರಾತಿನಿಂದ ಜೊಮ್ಯಾಟೋ ಸಂಸ್ಥೆ ಸಂಕಷ್ಟಕ್ಕೆ ಸಿಲುಕುವ ಎಲ್ಲಾ ಸಾಧ್ಯತೆ ಗೋಚರವಾಗಿದೆ.

ಇದನ್ನೂ ಓದಿ: Pushpa: ಕಾರಿನಲ್ಲಿ ನಡೆವ ರಶ್ಮಿಕಾ-ಅಲ್ಲು ಅರ್ಜುನ್ ಇಂಟಿಮೇಟ್ ದೃಶ್ಯಕ್ಕೆ ಕತ್ತರಿ 

ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

Published On - 5:50 pm, Fri, 4 February 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು