AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ugadi 2023: ಈ ಯುಗಾದಿಗೆ ವರಕವಿ ದ.ರಾ ಬೇಂದ್ರೆಯವರ ಯುಗಾದಿ ಮೆಲಕು ಹಾಕೋಣ

ಯುಗಾದಿ ಸಮಯದಲ್ಲಿ ಕವಿತೆ ಎಂದರೇ ನೆನಪಾಗೋದು ವರಕವಿ ದ.ರಾ ಬೇಂದ್ರೆ ಅವರ ಯುಗಾದಿ ಕವಿತೆ. ನಾಡಿನ ಪ್ರತಿಯೊಬ್ಬ ಕನ್ನಡಿಗನ ಬಾಯಲ್ಲಿ ಕವಿತೆ ಹಾದು ಹೋಗದೆ ಇರದು. ಇಲ್ಲಿದೆ ಬೇಂದ್ರೆಯವರ ಯುಗಾದಿ ಕವಿತೆ.

Ugadi 2023: ಈ ಯುಗಾದಿಗೆ ವರಕವಿ ದ.ರಾ ಬೇಂದ್ರೆಯವರ ಯುಗಾದಿ ಮೆಲಕು ಹಾಕೋಣ
ದ. ರಾ ಬೇಂದ್ರೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 21, 2023 | 7:00 AM

Share

ಯುಗಾದಿ (Ugadi) ಹೊಸ ಯುಗದ ಆದಿ. ವಸಂತ ಕಾಲದಲ್ಲಿ ಬರುವ ಹಬ್ಬಕ್ಕೆ ಹಸಿರಿನಿಂದ ಕೂಡಿದ ಪ್ರಕೃತಿ ಸ್ವಾಗತ ಕೋರುತ್ತದೆ. ಈ ಹಬ್ಬದ ವಿಶೇಷತೆ ಬೇವು ಬೆಲ್ಲ ಸವಿಯೋದು. ಜೀವನದ ಕಹಿ ಮತ್ತು ಸಿಹಿ ದಿನಗಳನ್ನು ಸಮಾನವಾಗಿ ಸ್ವೀಕರಿಸುವುದು. ಯುಗಾದಿ ಸಮಯದಲ್ಲಿ ಕವಿತೆ ಎಂದರೇ ನೆನಪಾಗೋದು ವರಕವಿ ದ.ರಾ ಬೇಂದ್ರೆ ಅವರ ಯುಗಾದಿ ಕವಿತೆ. ನಾಡಿನ ಪ್ರತಿಯೊಬ್ಬ ಕನ್ನಡಿಗನ ಬಾಯಲ್ಲಿ ಕವಿತೆ ಹಾದು ಹೋಗದೆ ಇರದು.

ವರಕವಿ ದ.ರಾ. ಬೇಂದ್ರೆಯವರ ‘ಯುಗಾದಿ’

1. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ.

2. ಹೊಂಗೆಹೂವ ತೊಂಗಲಲ್ಲಿ ಭೃಂಗದ ಸಂಗೀತಕೇಲಿ ಮತ್ತೆ ಕೇಳಿಬರುತಿದೆ. ಬೇವಿನ ಕಹಿ ಬಾಳಿನಲ್ಲಿ ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ.

3. ಕಮ್ಮನೆ ಬಾಣಕ್ಕೆ ಸೋತು ಜುಮ್ಮನೆ ಮಾಮರವು ಹೂತು ಕಾಮಗಾಗಿ ಕಾದಿದೆ. ಸುಗ್ಗಿ ಸುಗ್ಗಿ ಸುಗ್ಗಿ ಎಂದು ಹಿಗ್ಗಿ ಗಿಳಿಯ ಸಾಲು ಸಾಲು ತೋರಣದೊಲು ಕೋದಿದೆ.

4. ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು ಅಖಿಲ ಜೀವಜಾತಕೆ! ಒಂದೆ ಒಂದು ಜನ್ಮದಲ್ಲಿ ಒಂದೆ ಬಾಲ್ಯ ಒಂದೆ ಹರಯ ನಮಗದಷ್ಟೆ ಏತಕೆ?

5. ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ ನವೀನ ಜನನ ನಮಗೆ ಏಕೆ ಬಾರದೋ? ಎಲೆ ಸನತ್ಕುಮಾರದೇವ! ಸಲೆ ಸಾಹಸಿ ಚಿರಂಜೀವ! ನಿನಗೆ ಲೀಲೆ ಸೇರದೋ?

6. ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಹೊಸವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ನಮ್ಮನಷ್ಟೆ ಮರೆತಿದೆ!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ