Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನವೂ ಬಾದಾಮಿ ಹಾಲು ಕುಡಿಯುವುದರಿಂದ ಏನು ಉಪಯೋಗ?

ಬಾದಾಮಿ ಹಾಲು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಬಾದಾಮಿ ಹಾಲಿನಲ್ಲಿ ಸ್ಯಾಚುರೇಟೆಡ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಕಡಿಮೆಯಿದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ದಿನವೂ ಬಾದಾಮಿ ಹಾಲು ಕುಡಿಯುವುದರಿಂದ ಏನು ಉಪಯೋಗ?
ಬಾದಾಮಿ ಹಾಲು Image Credit source: iStock
Follow us
ಸುಷ್ಮಾ ಚಕ್ರೆ
|

Updated on: Oct 17, 2023 | 3:34 PM

ಬಾದಾಮಿ ಹಾಲು ಬಹುತೇಕರಿಗೆ ಇಷ್ಟ. ಆದರೆ, ಕೆಲವರು ಹಸುವಿನ ಹಾಲಿಗೆ ಬಾದಾಮಿ ಪುಡಿಯನ್ನು ಹಾಕಿಕೊಂಡು ಕುಡಿಯುತ್ತಾರೆ. ಇನ್ನು ಕೆಲವರು ಬಾದಾಮಿಯನ್ನು ನೆನೆಸಿಟ್ಟು, ಅದನ್ನು ರುಬ್ಬಿ, ಆ ಮಿಶ್ರಣವನ್ನು ಸೋಸುವ ಮೂಲಕ ಬಾದಾಮಿ ಹಾಲನ್ನು ತಯಾರಿಸುತ್ತಾರೆ. ಬಾದಾಮಿ ಹಾಲನ್ನು ಸುಲಭವಾಗಿ ಮನೆಯಲ್ಲಿಯೇ ತಯಾರಿಸಬಹುದು. ಬಾದಾಮಿ ಹಾಲು ಬಹಳ ಆರೋಗ್ಯಕರವಾದುದು. ಇದು ನೈಸರ್ಗಿಕವಾಗಿ ಲ್ಯಾಕ್ಟೋಸ್-ಮುಕ್ತವಾಗಿದೆ. ಬಾದಾಮಿ ಹಾಲು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಇದರಲ್ಲಿ ಹೆಚ್ಚಿನ ಕೊಲೆಸ್ಟ್ರಾಲ್ ಇರುವುದಿಲ್ಲ.

ಬಾದಾಮಿ ಹಾಲಲ್ಲಿ ವಿಟಮಿನ್ ಇ ಹೇರಳವಾಗಿರುತ್ತದೆ. ಮನೆಯಲ್ಲಿ ತಯಾರಿಸಿದ ಬಾದಾಮಿ ಹಾಲು ವಾಣಿಜ್ಯಿಕವಾಗಿ ಉತ್ಪಾದಿಸುವ ಬಾದಾಮಿ ಹಾಲಿನಲ್ಲಿರುವ ಪೋಷಕಾಂಶಗಳನ್ನು ಹೊಂದಿರುವುದಿಲ್ಲ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಬಾದಾಮಿ ಹಾಲನ್ನು ಸೇವಿಸುವುದರಿಂದ ಆಗುವ ಕೆಲವು ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ.

ಬಾದಾಮಿ ಹಾಲಿನ ಸೇವನೆಯಿಂದಾಗುವ 10 ಪ್ರಯೋಜನಗಳು:

1. ಬಾದಾಮಿ ಹಾಲು ಕ್ಯಾಲ್ಸಿಯಂ, ವಿಟಮಿನ್ ಇ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಂತಹ ಅಗತ್ಯ ಪೋಷಕಾಂಶಗಳ ಉತ್ತಮ ಮೂಲವಾಗಿದೆ.

ಇದನ್ನೂ ಓದಿ: ನೈಟ್​ ಶಿಫ್ಟ್​ನಲ್ಲಿ ಕೆಲಸ ಮಾಡುವವರು ಉತ್ತಮ ತೂಕ ಕಾಯ್ದುಕೊಳ್ಳಲು 5 ಟಿಪ್ಸ್​ ಇಲ್ಲಿವೆ

2. ಬಾದಾಮಿ ಹಾಲು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ಬಾದಾಮಿ ಹಾಲಿನಲ್ಲಿ ಸ್ಯಾಚುರೇಟೆಡ್ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಕಡಿಮೆಯಿದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3. ಬಾದಾಮಿ ಹಾಲು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತದೆ. ಇದನ್ನು ಸೇವಿಸಿದರೆ ಬೇಗ ಹೊಟ್ಟೆ ತುಂಬಿದಂತೆ ಭಾಸವಾಗುವುದರಿಂದ ತೂಕ ಹೆಚ್ಚಾಗದಂತೆ ತಡೆಯಬಹುದಾಗಿದೆ.

4. ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ. ಬಾದಾಮಿ ಹಾಲಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಯಥೇಚ್ಛವಾಗಿದೆ. ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಅವಶ್ಯಕವಾಗಿದೆ.

5. ಬಾದಾಮಿ ಹಾಲಿನಲ್ಲಿರುವ ವಿಟಮಿನ್ ಇ ಅಂಶವು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುವ ಮೂಲಕ ಮತ್ತು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಚರ್ಮದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

6. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಬಾದಾಮಿ ಹಾಲು ನೈಸರ್ಗಿಕವಾಗಿ ಲ್ಯಾಕ್ಟೋಸ್ ಮುಕ್ತವಾಗಿದೆ. ಇದು ಜೀರ್ಣಿಸಿಕೊಳ್ಳಲು ಸುಲಭವಾಗಿದೆ. ಇದು ಲ್ಯಾಕ್ಟೋಸ್ ಅಥವಾ ಜೀರ್ಣಕಾರಿ ಸಮಸ್ಯೆಗಳಿರುವವರಿಗೆ ಸೂಕ್ತವಾದ ಹಾಲಾಗಿದೆ.

7. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಬಾದಾಮಿ ಹಾಲು ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿ ತ್ವರಿತ ಏರಿಕೆಯನ್ನು ಕಡಿಮೆ ಮಾಡುತ್ತದೆ. ಇದು ಮಧುಮೇಹದ ಸಮಸ್ಯೆ ಹೊಂದಿರುವ ವ್ಯಕ್ತಿಗಳಿಗೆ ಸೂಕ್ತವಾದುದಾಗಿದೆ.

ಇದನ್ನೂ ಓದಿ: ದಿನಕ್ಕೆ ಐದಾರು ಎಸಳು ಪುದೀನಾ ಸೊಪ್ಪು ತಿಂದರೆ ಏನೇನೆಲ್ಲ ಆಗುತ್ತೆ ನೋಡಿ!

8. ಸ್ನಾಯುವಿನ ಬಲವನ್ನು ಹೆಚ್ಚಿಸುತ್ತದೆ. ಬಾದಾಮಿ ಹಾಲು ಪ್ರೋಟೀನ್ ಅನ್ನು ಹೊಂದಿರುತ್ತದೆ. ಇದು ಸ್ನಾಯುವಿನ ಬೆಳವಣಿಗೆಗೆ ಅವಶ್ಯಕವಾಗಿದೆ.

9. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬಾದಾಮಿಯು ಹೆಚ್ಚಿನ ವಿಟಮಿನ್ ಇ ಅಂಶದಿಂದಾಗಿ ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುವ ಗುಣಗಳನ್ನು ಹೊಂದಿದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

10. ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಬಾದಾಮಿ ಹಾಲಿನಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಮೆದುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ನೆನಪಿನ ಶಕ್ತಿ ಮತ್ತು ಏಕಾಗ್ರತೆಯನ್ನು ಸುಧಾರಿಸುತ್ತದೆ.

ಪ್ರತಿದಿನ ಬಾದಾಮಿ ಹಾಲನ್ನು ಸೇವಿಸುವುದರಿಂದ ಹೃದಯದ ಆರೋಗ್ಯ, ತೂಕ ನಿಯಂತ್ರಣ, ಮೂಳೆಯ ಆರೋಗ್ಯ, ಉತ್ತಮ ಚರ್ಮ ಮತ್ತು ಜೀರ್ಣಕ್ರಿಯೆ ಸೇರಿದಂತೆ ಹಲವಾರು ಆರೋಗ್ಯ ಪ್ರಯೋಜನಗಳಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್