AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಕಂದಮ್ಮನಿಗೆ ಮರುಜೀವ ನೀಡಿದ ಆ್ಯಂಬುಲೆನ್ಸ್ ಸಿಬ್ಬಂದಿ

ಆಂಬುಲೆನ್ಸ್ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಮಾನವೀಯತೆ ನವಜಾತ ಶಿಶುವಿನ ಜೀವ ಉಳಿಸಿದೆ. ಉಸಿರಾಟದ ತೊಂದರೆಯಿಂದ ಜೀವನ್ಮರಣದ ನಡುವೆ ನಡೆಸುತ್ತಿದ್ದ ಕೇವಲ ಮೂರು ದಿನಗಳ ಮಗುವಿಗೆ ತುರ್ತು ಚಿಕಿತ್ಸೆ ನೀಡಿ 108ರ ಸಿಬ್ಬಂದಿ ಮರುಜೀವ ನೀಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಯ ಸಮಯಪ್ರಜ್ಞೆ, ಸೇವಾ ಮನೋಭಾವ ಮತ್ತು ವೃತ್ತಿಪರತೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಕಂದಮ್ಮನಿಗೆ ಮರುಜೀವ ನೀಡಿದ ಆ್ಯಂಬುಲೆನ್ಸ್ ಸಿಬ್ಬಂದಿ
Ambulance Staff Save Newborns Life
ಪ್ರೀತಿ ಭಟ್​, ಗುಣವಂತೆ
|

Updated on: Jun 01, 2026 | 8:41 PM

Share

ಹೈದರಾಬಾದ್, ಜೂನ್ 01: ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮೂರು ದಿನದ ಮಗುವಿಗೆ ತುರ್ತು ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್ ಸಿಬ್ಬಂದಿ ಜೀವ ಉಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗುವಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನಲೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್‌ನ ಆಸ್ಪತ್ರೆಗೆ ರೆಫರ್ ಮಾಡಿದ್ದರು ಅದಕ್ಕಾಗಿ ಮಗುವನ್ನು ಕರೆದೊಯ್ಯುವಾಗ ಶಿಶು ಚಿಂತಾಜನಕ ಸ್ಥಿತಿಗೆ ತಲುಪಿತ್ತು ಕೂಡಲೇ ಎಚ್ಚೆತ್ತ ಆ್ಯಂಬುಲೆನ್ಸ್ ಸಿಬ್ಬಂದಿ ಸಿಪಿಆರ್ (CPR) ನೀಡಿ ಜೀವ ಉಳಿಸಿದ್ದಾರೆ.

ಘಟನೆ ಏನು?

ವಿಕಾರಾಬಾದ್ ಜಿಲ್ಲೆಯ ಕೊಡಂಗಲ್ ಕ್ಷೇತ್ರದ ತುಂಕಿಮೆಟ್ಲ ಗ್ರಾಮದ ಭುವನೇಶ್ವರಿ ಅವರು ಮೂರು ದಿನಗಳ ಹಿಂದೆ ತಾಂಡೂರಿನ ಮಾತಾ- ಶಿಶು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ನವಜಾತ ಶಿಶು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಹೈದರಾಬಾದ್‌ ನಲ್ಲಿರುವ ನೀಲೋಫರ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಮಗುವಿನ ಆರೋಗ್ಯ ಏಕಾಏಕಿ ಹದಗೆಟ್ಟಿತು, ಉಸಿರಾಟದಲ್ಲಿ ತೀವ್ರ ತೊಂದರೆ ಕಾಣಿಸಿಕೊಂಡು, ಮಗು ಪ್ರಾಣಾಪಾಯದ ಸ್ಥಿತಿಗೆ ತಲುಪಿತ್ತು. ಆಗ ಆ್ಯಂಬುಲೆನ್ಸ್‌ನಲ್ಲಿದ್ದ ಶಾಂತ್ ಕುಮಾರ್ ಹಾಗೂ ಆಯೂಬ್ ಪಾಷಾ ಪರಿಸ್ಥಿತಿಯನ್ನು ತಕ್ಷಣ ಅರಿತು ಕಾರ್ಯಪ್ರವೃತ್ತರಾದರು. ಕ್ಷಣವೂ ವಿಳಂಬ ಮಾಡದೆ ಮಗುವಿಗೆ ಸಿಪಿಆರ್ (Cardio Pulmonary Resuscitation) ನೀಡಿದರು. ಮಗುವಿನ ಹೃದಯ ಬಡಿತ ಮತ್ತು ಉಸಿರಾಟವನ್ನು ಪುನಃ ಚೇತರಿಸಲು ಅವರು ನಿರಂತರವಾಗಿ ಪ್ರಯತ್ನಿಸಿದರು.

ಆ್ಯಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ನೆಟ್ಟಿಗರ ಮೆಚ್ಚುಗೆ

ಅವರ ತ್ವರಿತ ಕ್ರಮ ಫಲಕಾರಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಗುವಿನ ಸ್ಥಿತಿ ಸುಧಾರಿಸಿದ್ದು ನಂತರ ಮಗುವನ್ನು ಸುರಕ್ಷಿತವಾಗಿ ಹೈದರಾಬಾದ್‌ನ ನೀಲೋಫರ್ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿದೆ. ತಮ್ಮ ಕಣ್ಣೆದುರೇ ಜೀವ ಕಳೆದುಕೊಳ್ಳುತ್ತಿದ್ದ ಮಗುವನ್ನು ಉಳಿಸಿದ ಆ್ಯಂಬುಲೆನ್ಸ್ ಸಿಬ್ಬಂದಿಗೆ ಮಗುವಿನ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಿಬ್ಬಂದಿಯ ಸಮಯಪ್ರಜ್ಞೆ, ಸೇವಾ ಮನೋಭಾವ ಮತ್ತು ವೃತ್ತಿಪರತೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?