AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿಯ ಹೊಟ್ಟೆಯೊಳಗೆ 12 ಇಂಚಿನ ಜೀವಂತ ಮೀನು, ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರಿಗೆ ಶಾಕ್

ಇತ್ತೀಚೆಗಿನ ದಿನಗಳಲ್ಲಿ ಅಚ್ಚರಿ ಮೂಡಿಸುವಂತಹ ಪ್ರಕರಣಗಳು ಬೆಳಕಿಗೆ ಬರುತ್ತವೆ. ವಿಯೆಟ್ನಾಂನ ಉತ್ತರದ ಕ್ವಾಂಗ್ ನಿನ್ಹ್ ಪ್ರಾಂತ್ಯದಲ್ಲಿ ವ್ಯಕ್ತಿಯೊಬ್ಬನ ಗುದನಾಳದ ಮೂಲಕ 30 ಸೆಂ ಮೀ ಜೀವಂತ ಮೀನೊಂದು ಹೊಟ್ಟೆ ಸೇರಿ ಕರುಳಿನಲ್ಲಿ ರಂಧ್ರಗಳನ್ನು ಕೊರೆದ ಪ್ರಕರಣವೊಂದು ವೈದ್ಯರನ್ನೇ ಬೆಚ್ಚಿ ಬೀಳಿಸಿದೆ. ಕೊನೆಗೆ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಆ ಮೀನನ್ನು ಹೊರ ತೆಗೆದಿದ್ದು, ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವ್ಯಕ್ತಿಯ ಹೊಟ್ಟೆಯೊಳಗೆ 12 ಇಂಚಿನ ಜೀವಂತ ಮೀನು, ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರಿಗೆ ಶಾಕ್
ಸಾಯಿನಂದಾ
| Edited By: |

Updated on: Mar 26, 2024 | 12:11 PM

Share

ನಮ್ಮ ಸುತ್ತ ಮುತ್ತಲಿನಲ್ಲಿ ನಡೆಯುವ ಕೆಲವು ಘಟನೆಗಳು ನಮ್ಮನ್ನು ಬೆಚ್ಚಿ ಬೀಳಿಸುವುದರ ಜೊತೆಗೆ ನಂಬುವುದಕ್ಕೂ ಕಷ್ಟವಾಗುತ್ತದೆ. ಇಂತಹದೊಂದು ಪ್ರಕರಣವೊಂದು ವಿಯೆಟ್ನಾಂನ ಉತ್ತರದ ಕ್ವಾಂಗ್ ನಿನ್ಹ್ ಪ್ರಾಂತ್ಯದಲ್ಲಿ ಬೆಳಕಿಗೆ ಬಂದಿದೆ. 34 ವರ್ಷದ ವ್ಯಕ್ತಿಯೊಬ್ಬರು ಹೊಟ್ಟೆ ನೋವಿನಿಂದ ಬಳಲುತ್ತಿದ್ದು ವೈದ್ಯರನ್ನು ಭೇಟಿಯಾದಾಗ ಹೊಟ್ಟೆಯೊಳಗೆ ಏನೋ ವಸ್ತುವಿರುವುದು ವೈದ್ಯರ ಗಮನಕ್ಕೆ ಬಂದಿದೆ.

ಹೌದು, ಕಿಬ್ಬೊಟ್ಟೆ ನೋವು, ವಿಪರೀತವಾದ ಸೆಳೆತ ಎಂದು ಆಸ್ಪತ್ರೆ ಸೇರಿದ ವ್ಯಕ್ತಿಯನ್ನು ಹೈ ಹಾ ಜಿಲ್ಲಾ ವೈದ್ಯಕೀಯ ಕೇಂದ್ರದಲ್ಲಿ ಎಕ್ಸ್-ರೇ ಮತ್ತು ಅಲ್ಟ್ರಾಸೌಂಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆಯಲ್ಲಿ ಹೊಟ್ಟೆಯಲ್ಲಿ ವಸ್ತುವೊಂದು ಪತ್ತೆಯಾಗಿದೆ. ಇದರಿಂದಾಗಿ ‘ಪೆರಿಟೋನಿಟಿಸ್’ ಎಂಬ ಸೋಂಕು ಕಾಣಿಸಿಕೊಂಡಿದೆ. ಅದು ಹೊಟ್ಟೆ ನೋವಿಗೆ ಕಾರಣ ಎಂದು ತಿಳಿದ ವೈದ್ಯರು ಕ್ಷಣವೇ ವ್ಯಕ್ತಿಗೆ ತುರ್ತು ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಸರ್ಪಸುತ್ತು ಬಗ್ಗೆ ಆತಂಕ ಬೇಡ, ಇಲ್ಲಿದೆ ಸರಳ ಮನೆ ಮದ್ದುಗಳು

ಆದರೆ ವ್ಯಕ್ತಿಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದಾಗ ಹೊಟ್ಟೆಯೊಳಗೆ 30 ಸೇಂ ಮೀ ಉದ್ದದ ಜೀವಂತ ಮೀನು ಇರುವುದನ್ನು ಕಂಡು ವೈದ್ಯರೂ ಬೆಚ್ಚಿ ಬಿದಿದ್ದಾರೆ. ಗುದನಾಳದ ಮೂಲಕ ಜೀವಂತ ಮೀನು ಹೊಟ್ಟೆ ಸೇರಿರುವುದು ಎನ್ನುವ ಶಂಕೆ ವ್ಯಕ್ತವಾಗಿದೆ. ಅದಲ್ಲದೇ ಈ ಜೀವಂತ ಮೀನು ಕರುಳಿನಲ್ಲಿ ರಂಧ್ರಗಳನ್ನು ಕೊರೆದು ಹಾನಿ ಮಾಡಿದೆ. ಶಸ್ತ್ರಚಿಕಿತ್ಸೆಯ ವೇಳೆ ಹೊಟ್ಟೆಯೊಳಗಿದ್ದ ಜೀವಂತ ಮೀನು ಹಾಗೂ ಹಾನಿಗೊಳಗಾದ ಅಂಗಾಂಶವನ್ನು ಹೊರತೆಗೆಯಲಾಗಿದೆ. ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯು ಚೇತರಿಕೆಯನ್ನು ಕಾಣುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!