ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ. ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿರುವ ಮಧ್ಯೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ.

ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 03, 2023 | 9:52 AM

ಬೆಂಗಳೂರು: ಮಹಾಮಾರಿ ಕೊರೊನಾ (Corona) ಇಡೀ ವಿಶ್ವವನ್ನೇ ಹಿಂಡಿಹಿಪ್ಪೆ ಮಾಡಿತ್ತು. ಸಿಕ್ಕ ಸಿಕ್ಕವರನ್ನೇ ಬಲಿ ಪಡೆದಿತ್ತು. ಈಗ ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ. ಲಕ್ಷ ಲಕ್ಷ ಶಾಲಾ ಮಕ್ಕಳೇ(School Students) ಅಪೌಷ್ಠಿಕತೆಯಿಂದ(Malnutrition) ಬಳಲುವಂತಾಗಿದೆ. ಹೌದು.. ರಾಜ್ಯದಲ್ಲಿ ಕೊರೊನಾ ತಗ್ಗಿದ್ರೂ ಅದರ ಪರಿಣಾಮ ನಿಜಕ್ಕೂ ಎಂಥವರೂ ಬೆಚ್ಚಿಬೀಳಿಸುವಂತಿದೆ. ರಾಜ್ಯದಲ್ಲಿ ಬರೊಬ್ಬರಿ 2 ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪುಟಾಣಿ ಮಕ್ಕಳ ಬದುಕಿನಲ್ಲಿ ಹೆಮ್ಮಾರಿ ಕೊರೊನಾ ಕತ್ತಲನ್ನೇ ಸೃಷ್ಟಿಸಿದೆ. ಅಪೌಷ್ಠಿಕತೆಯ ಬಗ್ಗೆ ಯಾರೋ ವರದಿ ಮಾಡಿದ್ದು ಅಲ್ಲ. ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ.

ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಆತಂಕ ಸೃಷ್ಟಿಸಿದ ಜ್ವರ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್

5 ವರ್ಷಕ್ಕಿಂತ ಕೆಳಗಿನ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ. ಮಕ್ಕಳ್ಳಲ್ಲಿ ಹೆಚ್ಚಿದ ಅಪೌಷ್ಠಿಕತೆ ಪರಿಣಾಮ ಮಕ್ಕಳಲ್ಲಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 8,711 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಕಂಡು ಬಂದ್ರೆ, 2,23,221 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೇ, ಅಪೌಷ್ಠಿಕತೆಯ ಕಾರಣಕ್ಕೆ ಮಕ್ಕಳಲ್ಲಿ ಕಡಿಮೆ ತೂಕ, ರಕ್ತಹೀನತೆ ಸಮಸ್ಯೆಗಳು ಮಕ್ಕಳಲ್ಲಿ ಕಂಡು ಬರುತ್ತಿವೆ. ಸಾಕಷ್ಟು ಮಕ್ಕಳ ಸಾವಿಗೂ ಕಾರಣವಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.

ಒಟ್ಟಾರೆಯಾಗಿ ಕೊರೊನಾ ಎಫೆಕ್ಟ್​ನಿಂದ ಲಕ್ಷಾಂತರ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಸೃಷ್ಟಿಯಾಗಿರುವುದು ಆತಂಕ ಹುಟ್ಟಿಸಿದೆ. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:49 am, Mon, 3 July 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ