AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ

ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ. ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿರುವ ಮಧ್ಯೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ.

ಕೊರೊನಾ ಎಫೆಕ್ಟ್​.. 2ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಠಿಕತೆ: ಶಾಕಿಂಗ್​ ರಿಪೋರ್ಟ್​ ಬಹಿರಂಗ
ಸಾಂದರ್ಭಿಕ ಚಿತ್ರ
Vinay Kashappanavar
| Updated By: ರಮೇಶ್ ಬಿ. ಜವಳಗೇರಾ|

Updated on:Jul 03, 2023 | 9:52 AM

Share

ಬೆಂಗಳೂರು: ಮಹಾಮಾರಿ ಕೊರೊನಾ (Corona) ಇಡೀ ವಿಶ್ವವನ್ನೇ ಹಿಂಡಿಹಿಪ್ಪೆ ಮಾಡಿತ್ತು. ಸಿಕ್ಕ ಸಿಕ್ಕವರನ್ನೇ ಬಲಿ ಪಡೆದಿತ್ತು. ಈಗ ಕೊರೊನಾ ಹೋಯ್ತು ಎಂದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಕಣ್ಣಿಗೆ ಕಾಣದ ಹೆಮ್ಮಾರಿಯ ಆಟ ನಿಜಕ್ಕೂ ಭಯಬೀಳುವಂತಿದೆ. ಲಕ್ಷ ಲಕ್ಷ ಶಾಲಾ ಮಕ್ಕಳೇ(School Students) ಅಪೌಷ್ಠಿಕತೆಯಿಂದ(Malnutrition) ಬಳಲುವಂತಾಗಿದೆ. ಹೌದು.. ರಾಜ್ಯದಲ್ಲಿ ಕೊರೊನಾ ತಗ್ಗಿದ್ರೂ ಅದರ ಪರಿಣಾಮ ನಿಜಕ್ಕೂ ಎಂಥವರೂ ಬೆಚ್ಚಿಬೀಳಿಸುವಂತಿದೆ. ರಾಜ್ಯದಲ್ಲಿ ಬರೊಬ್ಬರಿ 2 ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪುಟಾಣಿ ಮಕ್ಕಳ ಬದುಕಿನಲ್ಲಿ ಹೆಮ್ಮಾರಿ ಕೊರೊನಾ ಕತ್ತಲನ್ನೇ ಸೃಷ್ಟಿಸಿದೆ. ಅಪೌಷ್ಠಿಕತೆಯ ಬಗ್ಗೆ ಯಾರೋ ವರದಿ ಮಾಡಿದ್ದು ಅಲ್ಲ. ಪುಟಾಣಿ ಮಕ್ಕಳ ಅಪೌಷ್ಠಿಕತೆ ವರದಿ ನೀಡುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಶಾಕಿಂಗ್​ ರಿಪೋರ್ಟ್​ ಕೊಟ್ಟಿದೆ.

ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಆತಂಕ ಸೃಷ್ಟಿಸಿದ ಜ್ವರ: ಕರ್ನಾಟಕದ ಶಾಲಾ-ಕಾಲೇಜುಗಳಿಗೆ ಆರೋಗ್ಯ ಇಲಾಖೆ ಅಲರ್ಟ್

5 ವರ್ಷಕ್ಕಿಂತ ಕೆಳಗಿನ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ. ಮಕ್ಕಳ್ಳಲ್ಲಿ ಹೆಚ್ಚಿದ ಅಪೌಷ್ಠಿಕತೆ ಪರಿಣಾಮ ಮಕ್ಕಳಲ್ಲಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 8,711 ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಕಂಡು ಬಂದ್ರೆ, 2,23,221 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಅಷ್ಟೇ ಅಲ್ಲದೇ, ಅಪೌಷ್ಠಿಕತೆಯ ಕಾರಣಕ್ಕೆ ಮಕ್ಕಳಲ್ಲಿ ಕಡಿಮೆ ತೂಕ, ರಕ್ತಹೀನತೆ ಸಮಸ್ಯೆಗಳು ಮಕ್ಕಳಲ್ಲಿ ಕಂಡು ಬರುತ್ತಿವೆ. ಸಾಕಷ್ಟು ಮಕ್ಕಳ ಸಾವಿಗೂ ಕಾರಣವಾಗುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ.

ಒಟ್ಟಾರೆಯಾಗಿ ಕೊರೊನಾ ಎಫೆಕ್ಟ್​ನಿಂದ ಲಕ್ಷಾಂತರ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ಸೃಷ್ಟಿಯಾಗಿರುವುದು ಆತಂಕ ಹುಟ್ಟಿಸಿದೆ. ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:49 am, Mon, 3 July 23

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!