AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ 30 ನಿಮಿಷ ಸೈಕ್ಲಿಂಗ್ ಮಾಡಿದ್ರೆ ಸಿಗುತ್ತೆ ಊಹಿಸಲು ಸಾಧ್ಯವಾಗದ ಪ್ರಯೋಜನ!

ಸೈಕ್ಲಿಂಗ್ ಮಾಡುವುದರಿಂದ ಸಿಗುವ ಪ್ರಯೋಜನ ಯಾವುದೇ ಜಿಮ್ ಗಳಿಗೆ ಹೋದರೂ ಸಿಗುವುದಿಲ್ಲ. ಸೈಕ್ಲಿಂಗ್ ಕೇವಲ ಒಂದು ವ್ಯಾಯಾಮವಲ್ಲ, ಇದೊಂದು ಚಿಕಿತ್ಸೆ. ವೈದ್ಯರು ಸಹ ಈ ಮಾತನ್ನು ಒಪ್ಪಿಕೊಳ್ಳುತ್ತಾರೆ. ಈ ಆರೋಗ್ಯಕರ ಅಭ್ಯಾಸದಿಂದ ಸಾಕಷ್ಟು ಲಾಭಗಳಿವೆ. ಹೌದು, ಪ್ರತಿದಿನ ಕೇವಲ 30 ನಿಮಿಷ ಸೈಕ್ಲಿಂಗ್ ಮಾಡುವುದರಿಂದ ನೀವು ಊಹಿಸಲೂ ಸಾಧ್ಯವಾಗದಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ, ಸೈಕ್ಲಿಂಗ್ ಮಾಡುವುದರಿಂದ ಸಿಗುವ ಲಾಭಗಳೇನು, ಯಾಕಾಗಿ ಈ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಿ.

ಪ್ರತಿದಿನ 30 ನಿಮಿಷ ಸೈಕ್ಲಿಂಗ್ ಮಾಡಿದ್ರೆ ಸಿಗುತ್ತೆ ಊಹಿಸಲು ಸಾಧ್ಯವಾಗದ ಪ್ರಯೋಜನ!
ಪ್ರತಿದಿನ 30 ನಿಮಿಷಗಳ ಕಾಲ ಸೈಕ್ಲಿಂಗ್ ಮಾಡುವುದರಿಂದ ಸಿಗುವ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Nov 27, 2025 | 6:50 PM

Share

ಬೆಳಿಗ್ಗೆ ಸೈಕ್ಲಿಂಗ್ ಮಾಡುವುದರಿಂದ ಸಿಗುವ ಪ್ರಯೋಜನ ಯಾವುದೇ ಜಿಮ್ ಗಳಿಗೆ ಹೋದರೂ ಸಿಗುವುದಿಲ್ಲ ಎಂಬುದು ನಿಮಗೆ ತಿಳಿದಿದೆಯೇ? ಹೌದು, ಸೈಕ್ಲಿಂಗ್ (Cycling) ಕೇವಲ ವ್ಯಾಯಾಮವಲ್ಲ ಅದೊಂದು ಚಿಕಿತ್ಸೆ ಎಂದು ವೈದ್ಯರು ಹೇಳುತ್ತಾರೆ. ಸೈಕಲ್ ಸವಾರಿ ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂಬುದು ಸುಳ್ಳಲ್ಲ. ಈ ಒಂದು ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಬಲಗೊಳ್ಳುತ್ತವೆ, ಅಡ್ರಿನಾಲಿನ್ ಮಟ್ಟಗಳು ಸುಧಾರಿಸುತ್ತವೆ ಅಷ್ಟೇ ಅಲ್ಲ, ಇದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ. ಹಾಗಾದರೆ, ಪ್ರತಿದಿನ 30 ನಿಮಿಷಗಳ ಕಾಲ ಸೈಕ್ಲಿಂಗ್ (30 Minute Daily Cycling) ಮಾಡುವುದು ದೇಹಕ್ಕೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಪ್ರತಿದಿನ 30 ನಿಮಿಷ ಸೈಕ್ಲಿಂಗ್ ಮಾಡುವುದರಿಂದ ವಾರಕ್ಕೆ 1500 -2000 ಕ್ಯಾಲೊರಿ ಬರ್ನ್ ಆಗುತ್ತದೆ. ಅಷ್ಟೇ ಅಲ್ಲ, ಕಾಲಿನ ಸ್ನಾಯುಗಳು ಬಲಗೊಳ್ಳುತ್ತವೆ, ಜಾಗಿಂಗ್‌ಗೆ ಹೋಲಿಸಿದರೆ ಮೊಣಕಾಲಿನ ಒತ್ತಡ 70% ಕಡಿಮೆ ಇರುತ್ತದೆ, ಹೃದಯ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ, ರಕ್ತದೊತ್ತಡ ಮತ್ತು ಕೆಟ್ಟ ಕೊಲೆಸ್ಟ್ರಾಲ್ (LDL) ಕಡಿಮೆಯಾಗುತ್ತದೆ. ಹಾರ್ವರ್ಡ್ ಸಂಶೋಧನೆಯ ಪ್ರಕಾರ, ಇದು ಮಧುಮೇಹದ ಅಪಾಯವನ್ನು 40% ವರೆಗೆ ಕಡಿಮೆ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರಿಗೆ, ಇದೊಂದು ಉತ್ತಮ ಅಭ್ಯಾಸವಾಗಿದೆ.

ಇದನ್ನೂ ಓದಿ: ಊಟ ಮಾಡಿ ಒಂದು ಸಣ್ಣ ವಾಕ್ ಹೋಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಸೈಕ್ಲಿಂಗ್ ಮಾಡುವವರು ಖಿನ್ನತೆಯಿಂದ ದೂರವಿರುತ್ತಾರೆ!

ನಿಮಗೆ ಗೊತ್ತಾ? ಸೈಕ್ಲಿಂಗ್ ದೈಹಿಕವಾಗಿ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು. ಏಕೆಂದರೆ ಸೈಕ್ಲಿಂಗ್ ಮಾಡುವಾಗ ಸಂತೋಷದ ಹಾರ್ಮೋನುಗಳಾದ ಎಂಡಾರ್ಫಿನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾಗುತ್ತವೆ. ಒತ್ತಡ ಮತ್ತು ಆತಂಕವು 50% ರಷ್ಟು ಕಡಿಮೆಯಾಗುತ್ತದೆ. ಅದರಲ್ಲಿಯೂ ಹೊರಾಂಗಣದಲ್ಲಿ ಸೈಕ್ಲಿಂಗ್ ಮಾಡುವುದರಿಂದ ಸಾಕಷ್ಟು ವಿಟಮಿನ್ ಡಿ ಕೂಡ ಸಿಗುತ್ತದೆ. ಇದರಿಂದ ಮೂಳೆಗಳು ಬಲಗೊಳ್ಳುತ್ತವೆ, ಮನಸ್ಥಿತಿ ಸುಧಾರಿಸುತ್ತದೆ. ನಿದ್ರೆಯೂ ಚೆನ್ನಾಗಿ ಬರುತ್ತದೆ. ಅಷ್ಟೇ ಅಲ್ಲ, ಮೆದುಳು ಕೂಡ ಚುರುಕಾಗಿ ಕೆಲಸ ಮಾಡುತ್ತದೆ. ಡ್ಯಾನಿಶ್ ಅಧ್ಯಯನದ ಪ್ರಕಾರ, ಪ್ರತಿದಿನ ಸೈಕ್ಲಿಂಗ್ ಮಾಡುವವರು ಖಿನ್ನತೆಯಿಂದ ಬಳಲುವ ಸಾಧ್ಯತೆ 20% ನಷ್ಟು ಕಡಿಮೆ ಎಂಬುದು ಸಾಬೀತು ಪಡಿಸಿದೆ. ಹಾಗಾಗಿ ಸೈಕ್ಲಿಂಗ್‌ನಂತಹ ಲಾಭದಾಯಕ ವ್ಯಾಯಾಮ ಇನ್ನೊಂದಿಲ್ಲ. ಹಾಗಾದರೆ ನೀವು ಕೂಡ ನಾಳೆಯಿಂದಲೇ ಸೈಕ್ಲಿಂಗ್ ಪ್ರಾರಂಭಿಸಿ!, ಆರೋಗ್ಯವಾಗಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ