AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ

ಮಳೆಗಾಲ ಆರಂಭವಾಗಿದೆ. ಈ ಸಮಯದಲ್ಲಿ ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳು ಕೂಡ ಹೆಚ್ಚಾಗುತ್ತದೆ. ಜನರು ಆಸ್ಪತ್ರೆಗಳಲ್ಲಿ ಸಾಲುಗಟ್ಟಿ ನಿಲ್ಲುವುದನ್ನು ನೀವು ನೋಡಿರಬಹುದು. ಅದಕ್ಕಾಗಿಯೇ ಆರೋಗ್ಯ ತಜ್ಞರು ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡುತ್ತಾರೆ. ಹಾಗಾಗಿ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸೀಸನಲ್ ರೋಗಗಳಿಂದ ದೂರವಿರಬಹುದು. ಹಾಗಾದರೆ ಏನು ಮಾಡಬೇಕು, ಹೇಗೆ ಆರೋಗ್ಯವಾಗಿರಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಋತುಮಾನಕ್ಕೆ ಅನುಗುಣವಾಗಿ ಬರುವ ರೋಗಗಳಿಂದ ದೂರವಿರಬೇಕು ಅಂದ್ರೆ ಈ ಆರೋಗ್ಯ ಸೂತ್ರಗಳನ್ನು ತಪ್ಪದೇ ಪಾಲಿಸಿ
Seasonal DiseasesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 22, 2026 | 9:49 PM

Share

ಹವಾಮಾನ ಬದಲಾದಾಗ ಜ್ವರ, ಶೀತ, ಕೆಮ್ಮು ಹಾಗೂ ವೈರಲ್ ಸೋಂಕುಗಳಂತಹ ಋತುಮಾನಕ್ಕೆ ಅನುಗುಣವಾಗಿ ಬರುವ ರೋಗ (Seasonal Infections) ಹೆಚ್ಚಾಗುವುದು ಸಾಮಾನ್ಯ. ಆದರೆ ಕೆಲವು ಸರಳ ಆರೋಗ್ಯ ಅಭ್ಯಾಸಗಳನ್ನು ಪಾಲಿಸುವುದರಿಂದ ಇಂತಹ ಸೋಂಕುಗಳ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹೌದು, ಸಾಮಾನ್ಯವಾಗಿ ನಾವು ಪ್ರತಿನಿತ್ಯ ಮಾಡವಂತಹ ಅಭ್ಯಾಸಗಳಿಂದ ರೋಗಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದರಿಂದ ಸೀಸನಲ್ ರೋಗಗಳಿಂದ ದೂರವಿರಬಹುದು. ಹಾಗಾದರೆ ಏನು ಮಾಡಬೇಕು, ಹೇಗೆ ಆರೋಗ್ಯವಾಗಿರಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕೈಗಳನ್ನು ಸ್ವಚ್ಛವಾಗಿಡಿ

ವೈರಸ್ ಮತ್ತು ಬ್ಯಾಕ್ಟೀರಿಯಾಗಳು ಹೆಚ್ಚಾಗಿ ಕೈಗಳ ಮೂಲಕವೇ ದೇಹಕ್ಕೆ ಪ್ರವೇಶಿಸುತ್ತವೆ. ಆದ್ದರಿಂದ ಊಟ ಮಾಡುವ ಮೊದಲು, ಹೊರಗಿನಿಂದ ಮನೆಗೆ ಬಂದ ಬಳಿಕ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಏನಾದರೂ ಸ್ಪರ್ಶಿಸಿದ ನಂತರ ಸಾಬೂನು ಬಳಸಿ ಕೈಗಳನ್ನು ಚೆನ್ನಾಗಿ ತೊಳೆಯುವುದು ಅತ್ಯಗತ್ಯ.

ಅನಾರೋಗ್ಯ ಇದ್ದರೆ ವಿಶ್ರಾಂತಿ ಪಡೆಯಿರಿ

ಶೀತ, ಜ್ವರ ಅಥವಾ ಫ್ಲೂ ಲಕ್ಷಣಗಳು ಕಂಡುಬಂದರೆ ಕೆಲಸಕ್ಕೆ ಅಥವಾ ಜನಸಂದಣಿ ಇರುವ ಸ್ಥಳಗಳಿಗೆ ಹೋಗುವುದನ್ನು ತಪ್ಪಿಸಿ. ಮನೆಯಲ್ಲೇ ವಿಶ್ರಾಂತಿ ಪಡೆಯುವುದರಿಂದ ಬೇಗ ಗುಣಮುಖರಾಗಬಹುದು ಮತ್ತು ಸೋಂಕು ಇತರರಿಗೆ ಹರಡುವುದನ್ನು ತಡೆಯಬಹುದು.

ಇದನ್ನೂ ಓದಿ: ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯವಂತರಾಗಿ ನೂರ್ಕಾಲ ಬಾಳಿ

ಅಗತ್ಯ ಲಸಿಕೆಗಳನ್ನು ಪಡೆಯಿರಿ

ಫ್ಲೂ ಸೇರಿದಂತೆ ಕೆಲವು ಋತುಮಾನಿಕ ಸೋಂಕುಗಳಿಂದ ರಕ್ಷಿಸಿಕೊಳ್ಳಲು ಲಸಿಕೆಗಳು ಪರಿಣಾಮಕಾರಿ. ವೈದ್ಯರ ಸಲಹೆಯಂತೆ ವಯಸ್ಸು ಮತ್ತು ಆರೋಗ್ಯ ಸ್ಥಿತಿಗೆ ಅನುಗುಣವಾದ ಲಸಿಕೆಗಳನ್ನು ಸಮಯಕ್ಕೆ ಸರಿಯಾಗಿ ಪಡೆಯುವುದು ಉತ್ತಮ.

ಗಾಳಿ ಮತ್ತು ಬೆಳಕು ಇರುವ ವಾತಾವರಣದಲ್ಲಿ ಇರಿ

ಮನೆ ಅಥವಾ ಕಚೇರಿಯ ಕಿಟಕಿಗಳನ್ನು ಸಂಪೂರ್ಣ ಮುಚ್ಚಿಟ್ಟರೆ ಗಾಳಿಯ ಹರಿವು ಕಡಿಮೆಯಾಗುತ್ತದೆ. ಇದರಿಂದ ಸೋಂಕುಕಾರಕ ಜೀವಾಣುಗಳು ಸುಲಭವಾಗಿ ಹರಡಬಹುದು. ಆದ್ದರಿಂದ ಸಾಧ್ಯವಾದಷ್ಟು ತಾಜಾ ಗಾಳಿ ಮತ್ತು ನೈಸರ್ಗಿಕ ಬೆಳಕು ಒಳಬರುವಂತೆ ನೋಡಿಕೊಳ್ಳಿ.

ಸರಿಯಾಗಿ ನಿದ್ರೆ ಮಾಡಿ

ಉತ್ತಮ ರೋಗನಿರೋಧಕ ಶಕ್ತಿಗೆ ಸಮರ್ಪಕ ನಿದ್ರೆ ಅತ್ಯಗತ್ಯ. ಪ್ರತಿದಿನ ಕನಿಷ್ಠ 7 ರಿಂದ 8 ಗಂಟೆಗಳ ನಿದ್ರೆ ಪಡೆಯುವುದರಿಂದ ದೇಹವು ಸೋಂಕುಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಹಾಯವಾಗುತ್ತದೆ.

ಋತುಮಾನಿಕ ರೋಗಗಳಿಂದ ರಕ್ಷಿಸಿಕೊಳ್ಳಲು ದುಬಾರಿ ಔಷಧಿಗಳಿಗಿಂತ ಸ್ವಚ್ಛತೆ, ಸರಿಯಾದ ನಿದ್ರೆ, ಸರಿಯಾದ ಲಸಿಕೆ ಮತ್ತು ಆರೋಗ್ಯಕರ ಜೀವನಶೈಲಿಯೇ ಅತ್ಯುತ್ತಮ ಮಾರ್ಗವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!