AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗೊಮ್ಮೆ ಎದ್ದು 5 ನಿಮಿಷ ನಡೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ

ಬೆಳಿಗ್ಗೆ ಎದ್ದು ವಾಕಿಂಗ್ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇಂದಿನ ಬ್ಯುಸಿ ಲೈಫ್ ನಲ್ಲಿ ಎಲ್ಲರಿಗೂ ಅದು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲ, ಇಂತಹ ಕಾರಣಗಳಿಂದ ಎಷ್ಟೋ ಜನ ನಡೆಯುವುದನ್ನೇ ನಿಲ್ಲಿಸುತ್ತಾರೆ. ಆದರೆ ಇದು ದೈಹಿಕ ಆರೋಗ್ಯದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರುತ್ತವೆ. ಬದಲಾಗಿ, ಗಂಟೆಗೆ ಒಮ್ಮೆ ಮಾಡುವ ಸಣ್ಣ ನಡಿಗೆ ಬಹಳ ವ್ಯತ್ಯಾಸವನ್ನುಂಟು ಮಾಡುತ್ತದೆ. ಹೌದು, ಆರೋಗ್ಯ ತಜ್ಞರು ಪ್ರತಿ ಗಂಟೆಗೊಮ್ಮೆ 5 ನಿಮಿಷ ನಡೆಯುವುದರಿಂದ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ. ಹಾಗಾದರೆ ಇದರಿಂದ ಸಿಗುವ ಲಾಭಗಳೇನು, ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗಂಟೆಗೊಮ್ಮೆ ಎದ್ದು 5 ನಿಮಿಷ ನಡೆಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ
ಗಂಟೆಗೊಮ್ಮೆ 5 ನಿಮಿಷ ನಡಿಗೆ ಮಾಡುವುದರಿಂದ ಸಿಗುವ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Dec 03, 2025 | 6:50 PM

Share

ನಡಿಗೆ (Walk) ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದ ವಿಚಾರ. ಆದರೆ ಆರೋಗ್ಯ ತಜ್ಞರು ಪ್ರತಿ ಗಂಟೆಗೊಮ್ಮೆ 5 ನಿಮಿಷ ನಡೆಯುವುದರಿಂದ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ. ಸಾಮಾನ್ಯವಾಗಿ ಒಂದು ವ್ಯಕ್ತಿ ಒಂದೇ ಸ್ಥಳದಲ್ಲಿ ಕುಳಿತು ದಿನವಿಡೀ ಕೆಲಸ ಮಾಡುತ್ತಾನೆ ಹಾಗಾದಾಗ, ಕಾಲಿನ ಸ್ನಾಯುಗಳು ಗಟ್ಟಿಯಾಗುತ್ತವೆ ಮತ್ತು ಅವು ನಮ್ಯತೆಯನ್ನು ಕಳೆದುಕೊಳ್ಳುತ್ತವೆ. ಇದು ಇನ್ಸುಲಿನ್ ಪ್ರತಿರೋಧ ಹೊಂದಿರುವವರ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು. ಹಾಗಾಗಿ ಐದು ನಿಮಿಷಗಳ ನಡಿಗೆ ವ್ಯಕ್ತಿಯನ್ನು ಸಕ್ರಿಯವಾಗಿ ಮತ್ತು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಕೆಲಸದ ಸಮಯದಲ್ಲಿಯೂ ಪ್ರತಿ ಗಂಟೆಗೆ ಒಮ್ಮೆ ಐದು ನಿಮಿಷಗಳ ನಡಿಗೆ (Mini Walks) ಮಾಡಿದರೆ ನೀವು ನಂಬಲು ಅಸಾಧ್ಯವಾದಂತಹ ಪ್ರಯೋಜನಗಳು ನಿಮ್ಮದಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಲಾಭಗಳೇನು, ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತ ಪರಿಚಲನೆ ಸುಧಾರಿಸುತ್ತದೆ: ಗಂಟೆಗಟ್ಟಲೆ ಒಂದೇ ಜಾಗದಲ್ಲಿ ಕುಳಿತಾಗ, ಮೊಣಕಾಲುಗಳ ಕೆಳಗೆ ರಕ್ತ ಸಂಗ್ರಹವಾಗುತ್ತದೆ, ಇದು ನಿಮ್ಮ ರಕ್ತದ ಹರಿವನ್ನು ನಿಧಾನಗೊಳಿಸುತ್ತದೆ. ಹಾಗಾಗಿ ಗಂಟೆಗೊಮ್ಮೆ 5 ನಿಮಿಷ ಎದ್ದು ನಡೆಯುವುದರಿಂದ ರಕ್ತದ ಹರಿವು ಹೆಚ್ಚಾಗುತ್ತದೆ, ಇದು ಹೃದಯಕ್ಕೆ ಸಾಗಿಸಲ್ಪಡುವ ಆಮ್ಲಜನಕದ ಪ್ರಮಾಣವನ್ನು ಹೆಚ್ಚಿಸುತ್ತದೆ.

ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ: ದೀರ್ಘಕಾಲ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವವರು ಸೋಮಾರಿಗಳಾಗಿರುತ್ತಾರೆ. ಅಷ್ಟೇ ಅಲ್ಲ, ಕೆಲಸದ ಮೇಲೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ಮನಸ್ಸು ವಿಚಲಿತವಾಗುತ್ತದೆ. ಇದಕ್ಕೆ ಮುಖ್ಯ ಕಾರಣ ದೈಹಿಕ ಶಕ್ತಿಯಲ್ಲಿನ ಇಳಿಕೆ. ಹಾಗಾಗಿ ನಡುವೆ ಐದು ನಿಮಿಷಗಳ ಕಾಲ ಎದ್ದು ನಡೆಯುವುದರಿಂದ ಮನಸ್ಸು ನಿರಾಳವಾಗಿ ದೇಹಕ್ಕೆ ತ್ವರಿತ ಶಕ್ತಿ ಸಿಗುತ್ತದೆ.

ಇದನ್ನೂ ಓದಿ: ಊಟ ಮಾಡಿ ಒಂದು ಸಣ್ಣ ವಾಕ್ ಹೋಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಇನ್ಸುಲಿನ್ ಪ್ರತಿರೋಧವನ್ನು ಸರಿಪಡಿಸುತ್ತದೆ: ಮಧುಮೇಹ ಇರುವವರಿಗೆ, ಕಾಲಿನ ಸ್ನಾಯುಗಳ ಚಲನೆಯು ಇನ್ಸುಲಿನ್ ಸ್ರವಿಸುವಿಕೆ ಮತ್ತು ಅದರ ಬಳಕೆಯನ್ನು ನಿಯಂತ್ರಿಸುತ್ತದೆ. ದಿನವಿಡೀ ಒಂದೇ ಕಡೆ ಕುಳಿತಾಗ, ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ತೂಕವೂ ಹೆಚ್ಚಾಗುತ್ತದೆ. ಇದನ್ನು ತಡೆಯಲು ತಾಸಿಗೆ ಒಮ್ಮೆ ನಡೆಯುವ ಅಭ್ಯಾಸ ಮಾಡಿಕೊಳ್ಳಿ. ಇದು ಮಧುಮೇಹ ಇರುವವರಿಗೆ ಮಾತ್ರವಲ್ಲ ಇಲ್ಲದವರಿಗೂ ಪ್ರಯೋಜನಕಾರಿ.

ಕೊಬ್ಬನ್ನು ತಡೆಗಟ್ಟಲು ಸಹಕಾರಿ: ಹೊಟ್ಟೆಯ ಕೆಳಭಾಗದಲ್ಲಿ ಉಬ್ಬರವಿರುವ ಜನರು, ಮದ್ಯಪಾನ ಮಾಡುವವರು, ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಮತ್ತು ದಿನವಿಡೀ ಒಂದೇ ಸ್ಥಳದಲ್ಲಿ ಕೆಲಸ ಮಾಡುವವರಲ್ಲಿ ಚಯಾಪಚಯ ಕ್ರಿಯೆ ತುಂಬಾ ನಿಧಾನವಾಗಿರುತ್ತದೆ. ಇದನ್ನು ಹೆಚ್ಚಿಸಿಕೊಳ್ಳಲು ಪ್ರತಿ ಗಂಟೆಗೆ ಒಂದು ಸಣ್ಣ ನಡಿಗೆ ಮಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?