AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಹೆಚ್ಚಾಗಲು ನಿದ್ರೆಯೂ ಕಾರಣ; ಹೇಗೆ ಅಂತೀರಾ?

ನಿದ್ರೆ ಕಡಿಮೆಯಾದರೆ ಹಾರ್ಮೋನಿನಲ್ಲೂ ವ್ಯತ್ಯಾಸವಾಗುತ್ತದೆ. ಹಾರ್ಮೋನ್​ಗಳ ವ್ಯತ್ಯಾಸದಿಂದ ತೂಕ ಹೆಚ್ಚಾಗುತ್ತದೆ. ನಾವು ಸಾಕಷ್ಟು ನಿದ್ರೆ ಪಡೆಯದಿದ್ದರೆ, ನಮ್ಮ ದೇಹದ ಹಾರ್ಮೋನ್ ಸಮತೋಲನವು ಏರುಪೇರಾಗುತ್ತದೆ. ತೂಕ ಇಳಿಸಿ, ಆರೋಗ್ಯವಂತರಾಗಿರಲು ಸರಿಯಾದ ರೀತಿಯಲ್ಲಿ ನಿದ್ರೆ ಮಾಡುವುದು ಕೂಡ ಅಗತ್ಯ.

ತೂಕ ಹೆಚ್ಚಾಗಲು ನಿದ್ರೆಯೂ ಕಾರಣ; ಹೇಗೆ ಅಂತೀರಾ?
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on:Sep 06, 2023 | 6:35 PM

Share

ತೂಕ ಹೆಚ್ಚಾಗಲು ಹೊಟ್ಟೆ ತುಂಬ ಅಥವಾ ಕೊಬ್ಬಿನಾಂಶ ಇರುವ ಆಹಾರವನ್ನು ತಿನ್ನುವುದೊಂದೇ ಕಾರಣವಲ್ಲ. ನಮ್ಮ ಜೀವನಶೈಲಿ, ನಿದ್ರೆಯ ಪ್ರಮಾಣವೂ ಕಾರಣವಾಗಿರುತ್ತದೆ. ಸರಿಯಾದ ಸಮಯಕ್ಕೆ ನಿದ್ರೆ ಮಾಡದಿರುವುದು, ಕಡಿಮೆ ನಿದ್ರೆ ಮಾಡುವುದರಿಂದಲೂ ತೂಕ ಹೆಚ್ಚಾಗುತ್ತದೆ ಎಂಬುದು ಬಹುತೇಕ ಜನರಿಗೆ ತಿಳಿದಿಲ್ಲ. ಹೀಗಾಗಿ, ತೂಕ ಇಳಿಸಿ, ಆರೋಗ್ಯವಂತರಾಗಿರಲು ಸರಿಯಾದ ರೀತಿಯಲ್ಲಿ ನಿದ್ರೆ ಮಾಡುವುದು ಕೂಡ ಅಗತ್ಯ.

ವ್ಯಾಯಾಮ ಮತ್ತು ಆಹಾರದ ಹೊರತಾಗಿ, ತೂಕ ನಷ್ಟದ ದಿನಚರಿಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶವೆಂದರೆ ನಿದ್ರೆ. ನಿದ್ರೆ ಕಡಿಮೆಯಾದರೆ ಹಾರ್ಮೋನಿನಲ್ಲೂ ವ್ಯತ್ಯಾಸವಾಗುತ್ತದೆ. ಹಾರ್ಮೋನ್​ಗಳ ವ್ಯತ್ಯಾಸದಿಂದ ತೂಕ ಹೆಚ್ಚಾಗುತ್ತದೆ. ನಾವು ಸಾಕಷ್ಟು ನಿದ್ರೆ ಪಡೆಯದಿದ್ದರೆ, ನಮ್ಮ ದೇಹದ ಹಾರ್ಮೋನ್ ಸಮತೋಲನವು ಏರುಪೇರಾಗುತ್ತದೆ. ಗ್ರೆಲಿನ್ ಮತ್ತು ಲೆಪ್ಟಿನ್ ಎಂಬ 2 ಹಾರ್ಮೋನುಗಳು ಏರುಪೇರಾಗುತ್ತವೆ.

ಇದನ್ನೂ ಓದಿ: ನಿದ್ರೆ ಮಾಡಲಾಗದೆ ಒದ್ದಾಡುತ್ತಿದ್ದೀರಾ? ನಿದ್ರಾಹೀನತೆಗೆ ಅಶ್ವಗಂಧ ರಾಮಬಾಣ

ಗ್ರೆಲಿನ್ ಹಸಿವನ್ನು ಉತ್ತೇಜಿಸುವ ಹಾರ್ಮೋನ್ ಆಗಿದ್ದು, ಲೆಪ್ಟಿನ್ ಪೂರ್ಣತೆಯನ್ನು ಸಂಕೇತಿಸುತ್ತದೆ. ನೀವು ನಿದ್ರೆಯನ್ನು ಸರಿಯಾಗಿ ಮಾಡದಿದ್ದಾಗ ಗ್ರೆಲಿನ್ ಹಾರ್ಮೋನ್ ಮಟ್ಟ ಹೆಚ್ಚಾಗುತ್ತವೆ, ಲೆಪ್ಟಿನ್ ಮಟ್ಟಗಳು ಕಡಿಮೆಯಾಗುತ್ತವೆ. ಇದು ಅತಿಯಾಗಿ ತಿನ್ನಲು ನಿಮ್ಮನ್ನು ಪ್ರೇರೇಪಿಸುತ್ತದೆ. ಆಗ ನಿಮಗೆ ಹಸಿವಿಲ್ಲದಿದ್ದರೂ ಬಾಯಿ ಚಪಲದಿಂದ ಕೈ ಸಿಕ್ಕಿದ ತಿಂಡಿಯನ್ನೆಲ್ಲ ತಿನ್ನಲಾರಂಭಿಸುತ್ತೀರಿ. ಇದರಿಂದ ತೂಕ ಹೆಚ್ಚಾಗುತ್ತದೆ.

ಇದನ್ನೂ ಓದಿ: ಅತಿಯಾದ ನಿದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು, ಇಲ್ಲಿದೆ ಮಾಹಿತಿ

ನಿದ್ರೆಯ ಕೊರತೆಯಿಂದ ರಾತ್ರಿ ವೇಳೆ ಹಸಿವು ಜಾಸ್ತಿಯಾಗುತ್ತದೆ. ರಾತ್ರಿ ಏನಾದರೂ ತಿನ್ನಬೇಕೆಂಬ ಬಯಕೆ ಮೂಡುತ್ತದೆ. ಆಗ ದೇಹದಲ್ಲಿ ಕೊಬ್ಬಿನಾಂಶ, ಸಕ್ಕರೆ ಅಂಶಗಳು ಹೆಚ್ಚಾಗುತ್ತದೆ. ಹೀಗಾಗಿ, ಪ್ರತಿ ರಾತ್ರಿ 7ರಿಂದ 9 ಗಂಟೆಗಳ ನಿರಂತರ ನಿದ್ರೆ ಮಾಡುವುದು ಅಗತ್ಯ. ನಿಮ್ಮ ಕೊಠಡಿಯನ್ನು ಕತ್ತಲಾಗಿರಿಸಿಕೊಂಡು ಮಲಗಿ. ಇದರಿಂದ ನಿದ್ರೆಗೆ ಅಡ್ಡಿ ಉಂಟಾಗುವುದಿಲ್ಲ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Wed, 6 September 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!