AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ

ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರಶಸ್ತ್ರಚಿಕಿತ್ಸೆಯಲ್ಲಿಯೇ ಅತ್ಯಾಧುನಿಕ ತಂತ್ರವಾಗಿದ್ದು, ಈ ವಿಧಾನವು ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿಕೊಡುತ್ತದೆ. ಇಂತಹ ಚಿಕಿತ್ಸೆಯನ್ನು ಮೊದಲ ಬಾರಿಗೆ ಅತ್ಯಂತ ಚಿಕ್ಕ ವಯಸ್ಸಿನ ಹುಡುಗಿಯ ಮೇಲೆ ನಡೆಸಲಾಗಿದ್ದು ಅದರಲ್ಲಿ ದೆಹಲಿಯ ಏಮ್ಸ್ ನವರು ಯಶಸ್ವಿಯೂ ಆಗಿದ್ದಾರೆ.

ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 06, 2024 | 6:28 PM

Share

ದೆಹಲಿಯ ಏಮ್ಸ್​​​​​ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕಿಯ ಮೆದುಳಿನ ಗೆಡ್ಡೆ ತೆಗೆಯಲು ಅವೇಕ್ ಕ್ರ್ಯಾನಿಯೋಟೊಮಿ ಎಂಬ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಈ ಕಾರ್ಯ ವಿಧಾನಕ್ಕೆ ಒಳಗಾದ ವಿಶ್ವದ ಅತ್ಯಂತ ಕಿರಿಯ ರೋಗಿ ಎಂಬ ಹೆಗ್ಗಳಿಕೆಗೆ ಆಕೆ ಪಾತ್ರಳಾಗಿದ್ದಾಳೆ. ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರ ಶಸ್ತ್ರಚಿಕಿತ್ಸೆಯಲ್ಲಿಯೇ ಅತ್ಯಾಧುನಿಕ ತಂತ್ರವಾಗಿದ್ದು, ಈ ವಿಧಾನವು ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿಕೊಡುತ್ತದೆ. ಇಂತಹ ಚಿಕಿತ್ಸೆಯನ್ನು ಮೊದಲ ಬಾರಿಗೆ ಅತ್ಯಂತ ಚಿಕ್ಕ ವಯಸ್ಸಿನ ಹುಡುಗಿಯ ಮೇಲೆ ನಡೆಸಲಾಗಿದ್ದು ಅದರಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಯಶಸ್ವಿಯೂ ಆಗಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯ ಈ ಬಗ್ಗೆ ಹೇಳಿಕೆ ನೀಡಿದ್ದು “ಅವಳು ಚಿಕಿತ್ಸೆ ಮುಗಿಯುವವರೆಗೂ ಚೆನ್ನಾಗಿ ಸಹಕರಿಸಿದಳು. ಚಿಕಿತ್ಸೆಯ ಕೊನೆಯಲ್ಲಿ ಮತ್ತು ಶಸ್ತ್ರಚಿಕಿತ್ಸೆಯ ನಂತರವೂ ಚೆನ್ನಾಗಿದ್ದಳು. ಉತ್ತಮ ಗುಣಮಟ್ಟದ ಎಂ ಆರ್ ಐ ಮೆದುಳಿನ ಅಧ್ಯಯನಗಳನ್ನು ಒದಗಿಸಲು ನ್ಯೂರೋ ಅನಸ್ತೇಷಿಯಾ ಮತ್ತು ನ್ಯೂರೋರೇಡಿಯಾಲಜಿ ತಂಡಗಳಿಂದ ಅತ್ಯುತ್ತಮ ಬೆಂಬಲ ಸಿಕ್ಕಿದೆ ಎಂದು ಹೇಳಿದ್ದಾರೆ.

ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರ ಶಸ್ತ್ರಚಿಕಿತ್ಸಾ ಪ್ರಕಾರವಾಗಿದ್ದು, ಇದು ಅರಿವಳಿಕೆ ಬಲದೊಂದಿಗೆ ನಡೆಸುವ ಅತ್ಯಾಧುನಿಕ ತಂತ್ರವಾಗಿದೆ. ಇಲ್ಲಿ ರೋಗಿಯು ಶಸ್ತ್ರಚಿಕಿತ್ಸೆ ಪ್ರಕ್ರಿಯೆಯಲ್ಲಿ ಎಚ್ಚರವಾಗಿರುತ್ತಾನೆ. ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿ ಕೊಡುತ್ತದೆ. ಈ ಪ್ರಕ್ರಿಯೆಯು ರೋಗಿಯ ಮಾತಿನ ಅಡಚಣೆಗಳು ಅಥವಾ ಕೈಕಾಲುಗಳಲ್ಲಿನ ದೌರ್ಬಲ್ಯದಂತಹ ಪ್ರಮುಖ ತೊಡಕುಗಳನ್ನು ತಡೆಯಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಒಂದಿಂಚು ಬೋಲ್ಟ್ ನುಂಗಿದ ಬಾಲಕ, ಶಸ್ತ್ರಚಿಕಿತ್ಸೆ ಮಾಡದೆ ಅದನ್ನು ಹೊರಗೆ ತೆಗೆದಿದ್ದು ಹೇಗೆ? ವಿಡಿಯೋ ನೋಡಿ!

ಅವೇಕ್ ಕ್ರ್ಯಾನಿಯೋಟೊಮಿ ಪ್ರಕ್ರಿಯೆಗೆ ಸಹಜವಾಗಿ, ರೋಗಿಯ ತಿಳುವಳಿಕೆ ಮತ್ತು ಸಹಕಾರದ ಅಗತ್ಯವಿರುತ್ತದೆ. ಅವನ ಅಥವಾ ಅವಳ ಒಪ್ಪಿಗೆಯನ್ನು ತೆಗೆದುಕೊಂಡ ನಂತರವೇ ರೋಗಿಗೆ ಕಾರ್ಯವಿಧಾನದ ಬಗ್ಗೆ ಕೂಲಂಕಷವಾಗಿ ವಿವರಿಸಲಾಗುತ್ತದೆ ಮತ್ತು ಅದರ ಪರಿಚಯ ಮಾಡಿಸಲು ಶಸ್ತ್ರಚಿಕಿತ್ಸೆಯ ಹಿಂದಿನ ದಿನದಂದು ಆಪರೇಟಿಂಗ್ ರೂಮ್​​ನಲ್ಲಿ ಈ ಬಗ್ಗೆ ತಿಳಿಸಲಾಗುವುದು. ಯಾವುದೇ ರೀತಿಯ ನೋವು ಅಥವಾ ಅಸ್ವಸ್ಥತೆಯನ್ನು ತಪ್ಪಿಸಲು ಸ್ಥಳೀಯ ಅರಿವಳಿಕೆ ಮತ್ತು ಸೌಮ್ಯವಾದ ನಿದ್ರಾಜನಕವನ್ನು ನೀಡಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!