AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ

ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರಶಸ್ತ್ರಚಿಕಿತ್ಸೆಯಲ್ಲಿಯೇ ಅತ್ಯಾಧುನಿಕ ತಂತ್ರವಾಗಿದ್ದು, ಈ ವಿಧಾನವು ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿಕೊಡುತ್ತದೆ. ಇಂತಹ ಚಿಕಿತ್ಸೆಯನ್ನು ಮೊದಲ ಬಾರಿಗೆ ಅತ್ಯಂತ ಚಿಕ್ಕ ವಯಸ್ಸಿನ ಹುಡುಗಿಯ ಮೇಲೆ ನಡೆಸಲಾಗಿದ್ದು ಅದರಲ್ಲಿ ದೆಹಲಿಯ ಏಮ್ಸ್ ನವರು ಯಶಸ್ವಿಯೂ ಆಗಿದ್ದಾರೆ.

ಎಚ್ಚರವಿದ್ದಾಗಲೇ 5 ವರ್ಷದ ಕಂದಮ್ಮನಿಗೆ ಬ್ರೈನ್ ಸರ್ಜರಿ, ಈ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಶ್ವದ ಅತ್ಯಂತ ಕಿರಿಯ ವ್ಯಕ್ತಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 06, 2024 | 6:28 PM

Share

ದೆಹಲಿಯ ಏಮ್ಸ್​​​​​ ಆಸ್ಪತ್ರೆಯಲ್ಲಿ ಐದು ವರ್ಷದ ಬಾಲಕಿಯ ಮೆದುಳಿನ ಗೆಡ್ಡೆ ತೆಗೆಯಲು ಅವೇಕ್ ಕ್ರ್ಯಾನಿಯೋಟೊಮಿ ಎಂಬ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ಈ ಕಾರ್ಯ ವಿಧಾನಕ್ಕೆ ಒಳಗಾದ ವಿಶ್ವದ ಅತ್ಯಂತ ಕಿರಿಯ ರೋಗಿ ಎಂಬ ಹೆಗ್ಗಳಿಕೆಗೆ ಆಕೆ ಪಾತ್ರಳಾಗಿದ್ದಾಳೆ. ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರ ಶಸ್ತ್ರಚಿಕಿತ್ಸೆಯಲ್ಲಿಯೇ ಅತ್ಯಾಧುನಿಕ ತಂತ್ರವಾಗಿದ್ದು, ಈ ವಿಧಾನವು ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿಕೊಡುತ್ತದೆ. ಇಂತಹ ಚಿಕಿತ್ಸೆಯನ್ನು ಮೊದಲ ಬಾರಿಗೆ ಅತ್ಯಂತ ಚಿಕ್ಕ ವಯಸ್ಸಿನ ಹುಡುಗಿಯ ಮೇಲೆ ನಡೆಸಲಾಗಿದ್ದು ಅದರಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆ ವೈದ್ಯರು ಯಶಸ್ವಿಯೂ ಆಗಿದ್ದಾರೆ.

ದೆಹಲಿಯ ಏಮ್ಸ್ ಆಸ್ಪತ್ರೆಯ ಈ ಬಗ್ಗೆ ಹೇಳಿಕೆ ನೀಡಿದ್ದು “ಅವಳು ಚಿಕಿತ್ಸೆ ಮುಗಿಯುವವರೆಗೂ ಚೆನ್ನಾಗಿ ಸಹಕರಿಸಿದಳು. ಚಿಕಿತ್ಸೆಯ ಕೊನೆಯಲ್ಲಿ ಮತ್ತು ಶಸ್ತ್ರಚಿಕಿತ್ಸೆಯ ನಂತರವೂ ಚೆನ್ನಾಗಿದ್ದಳು. ಉತ್ತಮ ಗುಣಮಟ್ಟದ ಎಂ ಆರ್ ಐ ಮೆದುಳಿನ ಅಧ್ಯಯನಗಳನ್ನು ಒದಗಿಸಲು ನ್ಯೂರೋ ಅನಸ್ತೇಷಿಯಾ ಮತ್ತು ನ್ಯೂರೋರೇಡಿಯಾಲಜಿ ತಂಡಗಳಿಂದ ಅತ್ಯುತ್ತಮ ಬೆಂಬಲ ಸಿಕ್ಕಿದೆ ಎಂದು ಹೇಳಿದ್ದಾರೆ.

ಅವೇಕ್ ಕ್ರ್ಯಾನಿಯೋಟೊಮಿ ಎಂಬುದು ನರ ಶಸ್ತ್ರಚಿಕಿತ್ಸಾ ಪ್ರಕಾರವಾಗಿದ್ದು, ಇದು ಅರಿವಳಿಕೆ ಬಲದೊಂದಿಗೆ ನಡೆಸುವ ಅತ್ಯಾಧುನಿಕ ತಂತ್ರವಾಗಿದೆ. ಇಲ್ಲಿ ರೋಗಿಯು ಶಸ್ತ್ರಚಿಕಿತ್ಸೆ ಪ್ರಕ್ರಿಯೆಯಲ್ಲಿ ಎಚ್ಚರವಾಗಿರುತ್ತಾನೆ. ಮೆದುಳಿನ ಹಾನಿಯನ್ನು ತಪ್ಪಿಸಲು ರೋಗಿಯು ಎಚ್ಚರವಾಗಿರುವಾಗ ಮೆದುಳಿನ ಗೆಡ್ಡೆಯನ್ನು ತೆಗೆಯಲು ಶಸ್ತ್ರಚಿಕಿತ್ಸಕರಿಗೆ ಅನುವು ಮಾಡಿ ಕೊಡುತ್ತದೆ. ಈ ಪ್ರಕ್ರಿಯೆಯು ರೋಗಿಯ ಮಾತಿನ ಅಡಚಣೆಗಳು ಅಥವಾ ಕೈಕಾಲುಗಳಲ್ಲಿನ ದೌರ್ಬಲ್ಯದಂತಹ ಪ್ರಮುಖ ತೊಡಕುಗಳನ್ನು ತಡೆಯಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಒಂದಿಂಚು ಬೋಲ್ಟ್ ನುಂಗಿದ ಬಾಲಕ, ಶಸ್ತ್ರಚಿಕಿತ್ಸೆ ಮಾಡದೆ ಅದನ್ನು ಹೊರಗೆ ತೆಗೆದಿದ್ದು ಹೇಗೆ? ವಿಡಿಯೋ ನೋಡಿ!

ಅವೇಕ್ ಕ್ರ್ಯಾನಿಯೋಟೊಮಿ ಪ್ರಕ್ರಿಯೆಗೆ ಸಹಜವಾಗಿ, ರೋಗಿಯ ತಿಳುವಳಿಕೆ ಮತ್ತು ಸಹಕಾರದ ಅಗತ್ಯವಿರುತ್ತದೆ. ಅವನ ಅಥವಾ ಅವಳ ಒಪ್ಪಿಗೆಯನ್ನು ತೆಗೆದುಕೊಂಡ ನಂತರವೇ ರೋಗಿಗೆ ಕಾರ್ಯವಿಧಾನದ ಬಗ್ಗೆ ಕೂಲಂಕಷವಾಗಿ ವಿವರಿಸಲಾಗುತ್ತದೆ ಮತ್ತು ಅದರ ಪರಿಚಯ ಮಾಡಿಸಲು ಶಸ್ತ್ರಚಿಕಿತ್ಸೆಯ ಹಿಂದಿನ ದಿನದಂದು ಆಪರೇಟಿಂಗ್ ರೂಮ್​​ನಲ್ಲಿ ಈ ಬಗ್ಗೆ ತಿಳಿಸಲಾಗುವುದು. ಯಾವುದೇ ರೀತಿಯ ನೋವು ಅಥವಾ ಅಸ್ವಸ್ಥತೆಯನ್ನು ತಪ್ಪಿಸಲು ಸ್ಥಳೀಯ ಅರಿವಳಿಕೆ ಮತ್ತು ಸೌಮ್ಯವಾದ ನಿದ್ರಾಜನಕವನ್ನು ನೀಡಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ