AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: 14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ

ಮಕ್ಕಳ ಬಾಲ್ಯವನ್ನು ಮುಕ್ತವಾಗಿ -ಉತ್ತಮವಾಗಿ ಇಟ್ಟುಕೊಳ್ಳುವಂತಹ ವಾತಾವರಣ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ.

Mental Health: 14ನೇ ವಯಸ್ಸಿನೊಳಗೇ ಶುರುವಾಗುತ್ತವೆ ಶೇಕಡಾ 50ರಷ್ಟು ಮಾನಸಿಕ ಸಮಸ್ಯೆಗಳು; ಮಕ್ಕಳಿಗೆ ಉತ್ತಮ ಬಾಲ್ಯ ರೂಪಿಸಲು ಸಲಹೆ
ಬಾಲ್ಯ ಚೆನ್ನಾಗಿರಲಿ
TV9 Web
| Updated By: guruganesh bhat|

Updated on: Sep 17, 2021 | 8:42 PM

Share

ಮನುಷ್ಯನ ಅನುಭವಿಸಬಹುದಾದ ಅರ್ಧಕ್ಕಿಂತ ಹೆಚ್ಚು ಮಾನಸಿಕ ಸಮಸ್ಯೆಗಳು 14 ವರ್ಷಕ್ಕಿಂತ ಮುನ್ನವೇ ಆರಂಭವಾಗಿರುತ್ತದೆ ಎಂದು ಚಂಡೀಗಡದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಮಾನಸಿಕ ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಮಲ್ಹೋತ್ರಾ ತಿಳಿಸಿದ್ದಾರೆ. ಪ್ರತಿಯೊಬ್ಬನ ಬಾಲ್ಯದ ಜೀವನ ಜೀವನದ ಉದ್ದಕ್ಖೂ ಪ್ರಭಾವ ಬೀರುತ್ತದೆ. ಹೀಗಾಗಿ ಬಾಲ್ಯದ ಜೀವನ ಅತ್ಯಂತ ಉತ್ತಮವಾಗಿರುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ.

‘ಮಕ್ಕಳ ಮಾನಸಿಕ ಆರೋಗ್ಯ- ಮಾನಸಿಕ ಆರೋಗ್ಯದ ವಿಶ್ವ’ ಎಂಬ ವಿಷಯದ ಅಡಿ ಉಪನ್ಯಾಸ ನೀಡಿದ ಅವರು, ಪ್ರತಿಯೊಬ್ಬನ ಮಾನಸಿಕ ಸ್ಥಿತಿಯೂ ಆತ ಬಾಲ್ಯದಲ್ಲಿ ಬದುಕಿದ ವಾತಾವರಣ ಮತ್ತು ಸಮಾಜವನ್ನು ಅವಲಂಬಿಸಿರುತ್ತದೆ. ಬಾಲ್ಯದ ಮಾನಸಿಕ ಅವಸ್ಥೆ ಮಾನಸಿಕತೆಯ ಬೇರಿದ್ದಂತೆ. ಅದು ಜೀವನದ ಉದ್ದಕ್ಕೂ ಪ್ರಭಾವ ಬೀರುತ್ತಲೆ ಇರುತ್ತದೆ. ಬಾಲ್ಯದಲ್ಲಿ ಅನುಭವಿಸಿದ ಅಥವಾ ಕಂಡ ಬಡತನ, ಸೋಲು, ಅವಮಾನ, ಗೊಂದಲ ಮುಂತಾದ ಅಂಶಗಳು ನಮ್ಮಲ್ಲಿ ಯಾವತ್ತೂ ಜಾಗೃತವಾಗಿರುವುದುನ್ನು ನಾವು ಗಮನಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯಾವುದೇ ಮನುಷ್ಯನಲ್ಲಿ ಉದ್ಭವಿಸುವ ಶೇಕಡಾ 50ರಷ್ಟು ಮಾನಸಿಕ ಖಾಯಿಲೆಗಳು ಬಾಲ್ಯದ 14 ವರ್ಷದ ಒಳಗೇ ಸೃಷ್ಟಿಯಾಗಿರುತ್ತವೆ. 25 ವರ್ಷದ ಒಳಗೆ ಶೇಕಡಾ 75ರಷ್ಟು ಮಾನಸಿಕ ಸಮಸ್ಯೆಗಳು ರೂಪುಗೊಂಡಿರುತ್ತವೆ ಎಂದು ಅವರು ತಿಳಿಸಿದ್ದಾರೆ.

ಬಾಲ್ಯದಲ್ಲಿ ಮಾನಸಿಕ ಸಮಸ್ಯೆಗಳು ಉಂಟಾಗದಂತೆ ಮಕ್ಕಳನ್ನು ಬೆಳೆಸುವುದು ಅವರ ಭವಿಷ್ಯವನ್ನು ಉತ್ತಮವಾಗಿಸುತ್ತವೆ. ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ನೆರವಾಗುತ್ತವೆ. ಆದ್ದರಿಂದ ಮಕ್ಕಳ ಬಾಲ್ಯವನ್ನು ಮುಕ್ತವಾಗಿ -ಉತ್ತಮವಾಗಿ ಇಟ್ಟುಕೊಳ್ಳುವಂತಹ ವಾತಾವರಣ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: 

Child health: ನಿಮ್ಮ‌ ಮಕ್ಕಳ ಮಾನಸಿಕ ಆರೋಗ್ಯಕ್ಕಾಗಿ ಪಾಲಿಸಲೇಬೇಕಾದ ಕೆಲವು ಸಲಹೆಗಳು ಇಲ್ಲಿವೆ

PM Narendra Modi: 71ರ ಹರೆಯದಲ್ಲಿಯೂ ದಣಿವರಿಯದ ನಾಯಕ ನರೇಂದ್ರ ಮೋದಿಯವರ ಆರೋಗ್ಯದ ಗುಟ್ಟೇನು?

(50 percent of all mental disorders start before the age of 14)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ