AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡುಗು-ಮಿಂಚಿನ ದಾಳಿಗೆ ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಮೆದುಳಿಗೆ ಹಾನಿ

ಹೂಸ್ಟನ್ ವಿಶ್ವವಿದ್ಯಾಲಯದ 25 ವರ್ಷದ ಭಾರತೀಯ ಮೂಲದ ವಿದ್ಯಾರ್ಥಿನಿ ಮಿಂಚು ಸಿಡಿಲು ಬಡಿತದಿಂದಾಗಿ , ಇದೀಗಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ.

ಗುಡುಗು-ಮಿಂಚಿನ ದಾಳಿಗೆ ಅಮೇರಿಕಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಮೆದುಳಿಗೆ ಹಾನಿ
ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು(25)Image Credit source: Twitter/gayatri manjula
ಅಕ್ಷತಾ ವರ್ಕಾಡಿ
|

Updated on:Jul 21, 2023 | 12:58 PM

Share

ಅಮೆರಿಕಾ: ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ  ಭಾರತೀಯ ಮೂಲದ ವಿದ್ಯಾರ್ಥಿನಿ ಸುಸ್ರೂಣ್ಯ ಕೋಡೂರು(25) ಜುಲೈ 4 ರಂದು ತನ್ನ ಸ್ನೇಹಿತರೊಂದಿಗೆ ಅಲ್ಲಿನ ಸ್ಯಾನ್ ಜಸಿಂಟೋ ಸ್ಮಾರಕ ಉದ್ಯಾನವನದಲ್ಲಿ ಸುತ್ತಾಡಲು ಹೋಗಿದ್ದಾಳೆ. ಈ ವೇಳೆ ಮಳೆ ಹಾಗೂ ಗುಡುಗು-ಮಿಂಚಿನ ಆರ್ಭಟಕ್ಕೆ ಸುಸ್ರೂಣ್ಯ ಅಲ್ಲೇ ಪಕ್ಕದಲ್ಲಿರುವ ಕೊಳಕ್ಕೆ ಕುಸಿದು ಬಿದ್ದಿದ್ದು, ಇದೀಗಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ವರದಿಯಾಗಿದೆ.

ಸಿಡಿಲು ಬಡಿತಕ್ಕೆ ಒಳಗಾಗಿ ಕೊಳಕ್ಕೆ ಎಸೆಯಲ್ಪಟ್ಟಾಗ, ಈಕೆ ಹೃದಯ ಸ್ತಂಭನಕ್ಕೆ ಒಳಗಾಗಿದ್ದು, ಈಗ ಮೆದುಳು ಹಾನಿಗೊಳಗಾಗಿದ್ದಾಳೆ. ದೀರ್ಘ ವೈದ್ಯಕೀಯ ಆರೈಕೆಯ ಅಗತ್ಯವಿದೆ” ಎಂದು ಅವಳ ಸೋದರಸಂಬಂಧಿ ಸುರೇಂದ್ರ ಕುಮಾರ್ ಕೋಠ ಹೇಳಿದ್ದಾರೆ. ವಿದ್ಯಾರ್ಥಿಯ ಕುಟುಂಬವು ಆರ್ಥಿಕವಾಗಿ ಹಿಂದುಳಿದ್ದಿದ್ದು, ವೈದ್ಯಕೀಯ ವೆಚ್ಚಗಳಿಗೆ ಸಹಾಯ ಮಾಡಲು GoFundMe ರಚಿಸಿದೆ. ಮೆದುಳು ಹಾನಿಗೊಳಗಾದ್ದರಿಂದ ಕೋಮಾ ಸ್ಥಿತಿಯಲ್ಲಿದ್ದು, ಟ್ರಾಕಿಯೊಸ್ಟೊಮಿಯೊಂದಿಗೆ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾಳೆ.

ಇದನ್ನೂ ಓದಿ: ಮೆದುಳು ತಿನ್ನುವ ಅಮೀಬಾಗೆ ಮತ್ತೊಂದು ಬಲಿ; 2 ವರ್ಷದ ಮಗು ನಿಧನ

ರಾಷ್ಟ್ರೀಯ ಹವಾಮಾನ ಇಲಾಖೆಯ ಪ್ರಕಾರ, ವರ್ಷಕ್ಕೆ ಮಿಂಚು ಹೊಡೆಯುವ ಸಾಧ್ಯತೆಗಳು ಸುಮಾರು 1.2 ಮಿಲಿಯನ್‌ನಲ್ಲಿ ಒಂದು. ಕಳೆದ 30 ವರ್ಷಗಳಲ್ಲಿ, ವರ್ಷಕ್ಕೆ ಸರಾಸರಿ 43 ಸಿಡಿಲು ಸಾವುಗಳು ಸಂಭವಿಸಿವೆ. ಸಿಡಿಲು ಬಡಿತಕ್ಕೆ ಶೇಕಡ 10 ರಷ್ಟು ಜನರು ಸಾವನ್ನಪ್ಪುತ್ತಾರೆ, 90 ಪ್ರತಿಶತದಷ್ಟು ಜನರು ವಿವಿಧ ಹಂತದ ಅಂಗವೈಕಲ್ಯವನ್ನು ಹೊಂದಿರುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 12:56 pm, Fri, 21 July 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?