AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Septic Shock: ಹೆರಿಗೆಯ ನಂತರ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ಕೈ ಕಾಲುಗಳನ್ನು ಕಳೆದುಕೊಂಡ ಮಹಿಳೆ

ಮಹಿಳೆಯೊಬ್ಬರು ಸಿಸೇರಿಯನ್ ಮೂಲಕ ಎರಡನೇ ಮಗುವನ್ನು ಪಡೆದ ಕೆಲವೇ ದಿನಗಳಲ್ಲಿ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ದೇಹದ ಅಂಗಾಂಗವನ್ನು ಕಳೆದುಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

Septic Shock: ಹೆರಿಗೆಯ ನಂತರ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ಕೈ ಕಾಲುಗಳನ್ನು ಕಳೆದುಕೊಂಡ ಮಹಿಳೆ
ಕ್ರಿಸ್ಟಿನಾ ಪ್ಯಾಚೆಕೊ(29)
ಅಕ್ಷತಾ ವರ್ಕಾಡಿ
|

Updated on:Feb 28, 2023 | 5:39 PM

Share

ಮಹಿಳೆಯೊಬ್ಬರು ಸಿಸೇರಿಯನ್ ಮೂಲಕ ಎರಡನೇ ಮಗುವನ್ನು ಪಡೆದ ಕೆಲವೇ ದಿನಗಳಲ್ಲಿ ಸೆಪ್ಟಿಕ್ ಶಾಕ್‌(Septic Shock)ಗೆ ಒಳಗಾಗಿ ದೇಹದ ಅಂಗಾಂಗವನ್ನು ಕಳೆದುಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ರಿಸ್ಟಿನಾ ಪ್ಯಾಚೆಕೊ(29) ಸಿಸೇರಿಯನ್ ಮೂಲಕ ಎರಡನೇ ಮಗುವನ್ನು ಪಡೆದ ಕೆಲವೇ ದಿನಗಳಲ್ಲಿ ಸೆಪ್ಟಿಕ್ ಶಾಕ್‌ಗೆ ಒಳಗಾಗಿ ತನ್ನ ಎರಡೂ ಕೈಗಳು ಮತ್ತು ಪಾದಗಳನ್ನು ಕಳೆದುಕೊಂಡಿದ್ದಾರೆ. ಹೆರಿಗೆಯ ನಂತರ ಮನೆಗೆ ಹಿಂದಿರುಗಿದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಜ್ವರ ಉಸಿರಾಟದ ತೊಂದರೆ ಮತ್ತು ವಾಂತಿ ಮುಂತಾದ ಲಕ್ಷಣ ಕಂಡುಬಂದಿದೆ.

ಪ್ರಾರಂಭದಲ್ಲಿ ಸಿಸೇರಿಯನ್​ನಿಂದಾಗಿ ಈ ರೀತಿಯ ಲಕ್ಷಣಗಳು ಕಂಡು ಬಂದಿರಬಹುದು ಎಂದು ಪ್ಯಾಚೆಕೊ ಅಂದುಕೊಂಡಿದ್ದರು. ಆದರೆ ಸಮಸ್ಯೆ ಹೆಚ್ಚಾಗುವುದಿರುವ ಹಿನ್ನೆಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಎರಡು ವಾರಗಳ ವರಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.  ಆದರೂ ಕೂಡ ಆಕೆಯ ಕೈ ಕಾಲುಗಳಲ್ಲಿ ಕಳಪೆ ರಕ್ತ ಪರಿಚಲನೆಯಿಂದಾಗಿ ರಕ್ತ ಹೆಪ್ಪುಗಟ್ಟಿದ್ದು, ಕೈ ಕಾಲುಗಳು ಕಪ್ಪು ಬಣ್ಣಕ್ಕೆ ತಿರುಗಿದೆ. ಇದು ಆಕೆಯ ಪ್ರಾಣಕ್ಕೆ ಹಾನಿಯುಂಟು ಮಾಡಬಹುದು ಎಂದು ವೈದ್ಯರು ಆಕೆಯ ಕೈ ಕಾಲುಗಳನ್ನು ಕತ್ತರಿಸಿ ತೆಗೆದಿದ್ದಾರೆ ಎಂದು ಎಬಿಸಿ ವರದಿ ಮಾಡಿದೆ.

ಇದನ್ನೂ ಓದಿ: ಮಹಿಳೆಯರಲ್ಲಿ ಕಂಡುಬರುವ ಮೂತ್ರನಾಳದ ಸೋಂಕಿಗೆ ಕಾರಣ ಮತ್ತು ಚಿಕಿತ್ಸೆ

ಸೆಪ್ಟಿಕ್ ಶಾಕ್‌ ಎಂದರೇನು?

ಈಕೆಗೆ ಸಿಸೇರಿಯನ್​​ನಿಂದಾಗಿ ಸೆಪ್ಟಿಕ್ ಶಾಕ್‌ಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ತುಂಬಾ ಗಂಭೀರವಾದ ಕಾಯಿಲೆಯಿಂದ ಇಂತಹ ಸಮಸ್ಯೆ ಕಂಡು ಬರಬಹುದು. ಈ ಸಂದರ್ಭದಲ್ಲಿ ರೋಗ – ನಿರೋಧಕ ವ್ಯವಸ್ಥೆ ಕೂಡ ಅತಿ ಹೆಚ್ಚಾಗಿ ಪ್ರತಿಕ್ರಿಯೆ ನೀಡಿ ಬಹು ಅಂಗಾಂಗಗಳ ವೈಫಲ್ಯ ಉಂಟು ಮಾಡಿ ವ್ಯಕ್ತಿಯ ಸಾವಿಗೆ ಕಾರಣವಾಗುತ್ತದೆ. ಇದರ ಲಕ್ಷಣಗಳು ಪ್ರಾರಂಭದಲ್ಲಿ ಉಸಿರಾಟದ ಸಮಸ್ಯೆಯಿಂದ ಪ್ರಾರಂಭವಾಗಿ ಅತಿಸಾರ , ವಾಕರಿಕೆ , ವಾಂತಿ ಮತ್ತು ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:39 pm, Tue, 28 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!