AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹಿಗಳಿಗೆ ಬೆಳಗಿನ ಉಪಾಹಾರಕ್ಕೆ ಸೂಕ್ತ ಸಮಯ ಯಾವುದು? ತಜ್ಞರ ಸಲಹೆ ಇಲ್ಲಿದೆ

ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ (ISGlobal) ಮಧುಮೇಹಿಗಳ ಆಹಾರ ಕ್ರಮದ ಬಗ್ಗೆ ಇತ್ತೀಚಿಗೆ ಸಂಶೋಧನೆಯನ್ನು ನಡೆಸಿದೆ.

ಮಧುಮೇಹಿಗಳಿಗೆ ಬೆಳಗಿನ ಉಪಾಹಾರಕ್ಕೆ ಸೂಕ್ತ ಸಮಯ ಯಾವುದು? ತಜ್ಞರ ಸಲಹೆ ಇಲ್ಲಿದೆ
ಮಧುಮೇಹImage Credit source: MedlinePlus
ಅಕ್ಷತಾ ವರ್ಕಾಡಿ
|

Updated on: Aug 06, 2023 | 6:46 PM

Share

ಮಧುಮೇಹಕ್ಕೆ ಪ್ರಮುಖ ಕಾರಣ ಆಹಾರ ಪದ್ದತಿ. ಆದ್ದರಿಂದ ಸರಿಯಾದ ಆಹಾರ ಪದ್ಧತಿಯ ಮೂಲಕ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಲದಲ್ಲಿ ಇಡಬಹುದಾಗಿದೆ. ಆಹಾರ ಪದ್ಧತಿಯು ಮಧುಮೇಹವನ್ನು ಅಭಿವೃದ್ಧಿಪಡಿಸುವ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ನಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಈ ಹಿನ್ನೆಲೆಯಲ್ಲಿ, ಬಾರ್ಸಿಲೋನಾ ಇನ್‌ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಹೆಲ್ತ್ (ISGlobal) ಮಧುಮೇಹಿಗಳ ಆಹಾರ ಕ್ರಮದ ಬಗ್ಗೆ ಇತ್ತೀಚಿಗೆ ಸಂಶೋಧನೆಯನ್ನು ನಡೆಸಿದೆ. ಅಧ್ಯಯನದ ಪ್ರಕಾರ, ಬೆಳಿಗ್ಗೆ 9 ಗಂಟೆಯ ನಂತರ ಉಪಹಾರ ಸೇವಿಸುವವರಿಗೆ ಟೈಪ್ 2 ಡಯಾಬಿಟಿಸ್ ಬರುವ ಸಾಧ್ಯತೆಯು 8 ಗಂಟೆಯ ಮೊದಲು ಸೇವಿಸುವವರಿಗಿಂತ ಶೇಕಡಾ 59ರಷ್ಟು ಹೆಚ್ಚಿದೆ ಎಂದು ತಿಳಿದುಬಂದಿದೆ.

ನ್ಯೂಸ್ 9 ಜೊತೆಗಿನ ಸಂವಾದದಲ್ಲಿ ಮಣಿಪಾಲ್ ಆಸ್ಪತ್ರೆ ದ್ವಾರಕಾದ ಹಿರಿಯ ಆಹಾರ ತಜ್ಞರಾದ ನೈನಾ ಅರೋರಾರವರು ನೀಡಿರುವ ಮಾಹಿತಿ ಇಲ್ಲಿದೆ. ಮಧುಮೇಹವು ನಿಮ್ಮ ದೇಹವು ಸಾಕಷ್ಟು ಇನ್ಸುಲಿನ್ ಉತ್ಪಾದಿಸದಿದ್ದಾಗ ಅಥವಾ ಅದನ್ನು ಬಳಸಲು ಸಾಧ್ಯವಾಗದಿದ್ದಾಗ ಉಂಟಾಗುವ ಸ್ಥಿತಿಯಾಗಿದೆ. ನೀವು ಸೇವಿಸುವ ಹೆಚ್ಚಿನ ಆಹಾರವು ಸಕ್ಕರೆಯಾಗಿ ವಿಭಜನೆಯಾಗುತ್ತದೆ ಮತ್ತು ಅದನ್ನು ರಕ್ತಪ್ರವಾಹಕ್ಕೆ ಬಿಡುಗಡೆ ಮಾಡುತ್ತದೆ. ಆದ್ದರಿಂದ ನಿಯಮಿತ ಸಮಯದಲ್ಲಿ ಚೆನ್ನಾಗಿ ಯೋಜಿತ ಊಟವು ಬಹಳ ಮುಖ್ಯ, ವಿಶೇಷವಾಗಿ ಉಪಹಾರ ಮತ್ತು ರಾತ್ರಿಯ ಊಟ ಎಂದು ನೈನಾ ಅರೋರಾ ಎಚ್ಚರಿಸುತ್ತಾರೆ.

ಇದನ್ನೂ ಓದಿ: ಮಧುಮೇಹ ಮತ್ತು ಹೃದಯದ ಆರೋಗ್ಯದ ನಡುವಿನ ಸಂಬಂಧವನ್ನು ತಿಳಿದುಕೊಳ್ಳಿ

ಮಧುಮೇಹ ರೋಗಿಯು ಎದ್ದ ಒಂದು ಗಂಟೆಯೊಳಗೆ ಬೆಳಗಿನ ಉಪಾಹಾರವನ್ನು ತೆಗೆದುಕೊಳ್ಳಬೇಕು, ಅದು ಬೆಳಿಗ್ಗೆ 9 ಕ್ಕಿಂತ ಮೊದಲು ಇದ್ದರೆ ಒಳ್ಳೆಯದು. ನಿಖರವಾದ ಸಮಯ, ಸೀಮಿತ ಪ್ರಮಾಣ ಮತ್ತು ಗುಣಮಟ್ಟ (ಪ್ರೋಟೀನ್ ಮತ್ತು ಫೈಬರ್ ಭರಿತ) ಆಹಾರದ ಬಗ್ಗೆ ಉತ್ತಮ ಹೆಬ್ಬೆರಳು ನಿಯಮವನ್ನು ಮಾಡುವುದು ಮುಖ್ಯ. ಮಧುಮೇಹ ರೋಗಿಗಳು ಈ ವಿಷಯಗಳ ಮೇಲೆ ಗಮನಹರಿಸಬೇಕು, ಇದು ಮುಂಜಾನೆಯ ವಿದ್ಯಮಾನ ಮತ್ತು ತೂಕ ನಿರ್ವಹಣೆ ಮತ್ತು ಇತರ ಚಯಾಪಚಯ ಅಸ್ವಸ್ಥತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ