AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ

ಅಧ್ಯಯನವೊಂದ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ.

ಪ್ಯಾಕೆಟ್​ ಪುಡ್​​​ ಸುಲಭವಾಗಿ ಲಭ್ಯವಿದ್ದರೂ ಕೂಡ ಸೇವನೆಗೂ ಮುನ್ನ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ
Ultra Processed Foods
ಅಕ್ಷತಾ ವರ್ಕಾಡಿ
|

Updated on: Aug 10, 2023 | 11:46 AM

Share

ಒತ್ತಡದ ಜೀವನಶೈಲಿ(Stress Lifestyle)ಯು ಆಹಾರದ ವಿಷಯಕ್ಕೆ ಬಂದಾಗ ಸುಲಭವಾಗಿ ಲಭ್ಯವಿರುವ ಪ್ಯಾಕೆಟ್​ ಪುಡ್​​ಗಳತ್ತ ವಾಲುವಂತೆ ಮಾಡುತ್ತದೆ. ಜೊತೆಗೆ ಈ ಆಹಾರ ಕ್ರಮವು ದೈನಂದಿನ ದಿನಚರಿಯ ಒಂದು ಭಾಗವಾಗಿ ಬಿಡುತ್ತದೆ. ಆದರೆ ಕಡಿಮೆ ಬೆಲೆಯ ಜೊತೆಗೆ ಸುಲಭವಾಗಿ ಸವಿಯಬಹುದಾದ ಪ್ಯಾಕೆಟ್ ಪುಡ್​​ (Packed Food)ಗಳನ್ನು ಸವಿಯುವ ಮೊದಲು ಅದು ನಿಮ್ಮ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮವನ್ನು ಬೀರುತ್ತದೆ ಎಂಬುದು ತಿಳಿದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಸಂಸ್ಕರಿಸಿದ ಆಹಾರಗಳು ಕೃತಕ ಪದಾರ್ಥಗಳನ್ನು ಒಳಗೊಂಡಿರುತ್ತವೆ. ಜೊತೆಗೆ ಕೊಬ್ಬು, ಸಕ್ಕರೆ ಮತ್ತು ಉಪ್ಪು ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದಲ್ಲದೇ ದೀರ್ಘಕಾಲದ ವರೆಗೆ ಆಹಾರವನ್ನು ಹಾಳಾಗದಂತೆ ತಾಜಾವಾಗಿಡಲು ಸಾಕಷ್ಟು ರಾಸಾಯನಿಕಗಳನ್ನು ಬಳಸಲಾಗುತ್ತದೆ. ಈ ರಾಸಾಯನಿಕಗಳು ಆರೋಗ್ಯದ ಮೇಲೆ ಅಪಾಯಕಾರಿ ಪರಿಣಾಮವನ್ನು ಬೀರಬಹುದು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ. ಹೀಗಾಗಿ, ಈ ಸೇರ್ಪಡೆಗಳು ಮತ್ತು ಅವುಗಳಿಗೆ ಒಡ್ಡಿಕೊಳ್ಳುವಿಕೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.

ಇದನ್ನೂ ಓದಿ: ಎಳ್ಳು ಸೇವನೆ ಎಂಬ ಮನೆಮದ್ದು: ಪ್ರತಿದಿನ ಒಂದು ಚಮಚ ಎಳ್ಳು ಸೇವಿಸಿದರೆ ನಿಮ್ಮ ಆರೋಗ್ಯ ಹೀಗೆ ಕಾಪಾಡಿಕೊಳ್ಳಬಹುದು

ಸಂಸ್ಕರಿಸಿದ ಆಹಾರಗಳು ಹೇಗೆ ಹಾನಿಕಾರಕ?

ಅಮೇರಿಕಾ ಮತ್ತು ಯುರೋಪ್‌ನಲ್ಲಿನ ದೀರ್ಘಾವಧಿಯ ಅಧ್ಯಯನಗಳ ಪ್ರಕಾರ ಹೆಚ್ಚು ಸಂಸ್ಕರಿಸಿದ ಪ್ಯಾಕೆಟ್ ಪುಡ್ ಸೇವಿಸುವುದರಿಂದ ಸ್ಥೂಲಕಾಯತೆ , ಅಧಿಕ ರಕ್ತದೊತ್ತಡ , ಟೈಪ್ 2 ಮಧುಮೇಹ ಮತ್ತು ಬುದ್ಧಿಮಾಂದ್ಯತೆಯ ಹೆಚ್ಚಳ ಸೇರಿದಂತೆ ಹಲವಾರು ಆರೋಗ್ಯ ಅಪಾಯಗಳಿಗೆ ಸಂಬಂಧಿಸಿವೆ ಎಂದು ಬಹಿರಂಗಪಡಿಸಿದೆ. ಇದಲ್ಲದೇ ಸ್ಪೇನ್ ಮತ್ತು ಫ್ರಾನ್ಸ್‌ನಲ್ಲಿನ ಸಂಶೋಧಕರ ಅಧ್ಯಯನವೊಂದರ ಪ್ರಕಾರ ಹೆಚ್ಚು ಸಂಸ್ಕರಿಸಿದ ಆಹಾರಗಳು ಪ್ರಾಣಕ್ಕೆ ಕುತ್ತು ತರಬಹುದು ಎಂದು ಎಚ್ಚರಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ