AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adenovirus in Children: ಪುಟಾಣಿ ಮಕ್ಕಳನ್ನು ಕಾಡುತ್ತಿದೆ ಅಡೆನಾಯ್ಡ್ ವೈರಸ್ ಹಾಗೂ ಬಿ -12 ಸಮಸ್ಯೆ

ಬಾಯಿ ಹುಣ್ಣು, ದೃಷ್ಟಿ ಸಮಸ್ಯೆ, ಸುಸ್ತು, ಜ್ವರ, ಕಿರಿಕಿರಿ, ಖಿನ್ನತೆ ವಿಟಮಿನ್ ಕೊರತೆ ನಿಮ್ಮ ಮಕ್ಕಳಲ್ಲಿ ಕಂಡು ಬಂದರೆ ಎಂದಿಗೂ ನಿರ್ಲಕ್ಷ್ಯಿಸದಿರಿ. ತಜ್ಞರು ನೀಡಿರುವ ಸಲಹೆ ಇಲ್ಲಿದೆ.

Adenovirus in Children: ಪುಟಾಣಿ ಮಕ್ಕಳನ್ನು ಕಾಡುತ್ತಿದೆ ಅಡೆನಾಯ್ಡ್  ವೈರಸ್ ಹಾಗೂ ಬಿ -12 ಸಮಸ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 03, 2023 | 7:05 PM

Share

ಬೆಂಗಳೂರು : ಮಕ್ಕಳಲ್ಲಿ ದೃಷ್ಟಿ ದೋಷದ ಸಮಸ್ಯೆ, ಬಿಳಿ ಕೂದಲು, ಪ್ರತೀ ದಿನ ಸುಸ್ತು ಇಂತಹ ಸಮಸ್ಯೆಗಳು ಕಂಡು ಬಂದರೆ ಎಂದಿಗೂ ನಿರ್ಲಕ್ಷ್ಯಿಸದಿರಿ. ಕೋವಿಡ್​​ ನಂತರದ ದಿನಗಳಿಂದ ಮಕ್ಕಳಲ್ಲಿ ಹೆಚ್ಚಾಗಿ ಅಡೆನಾಯ್ಡ್ ವೈರಸ್ ಹಾಗೂ ಬಿ -12 ಸಮಸ್ಯೆ ಕಂಡು ಬರುತ್ತಿದೆ ಎಂದು ತಿಳಿದುಬಂದಿದೆ. ಈ ಸಮಸ್ಯೆಯ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಧನಲಕ್ಷ್ಮಿ ಕೋವಿಡ್ ನಂತರದಲ್ಲಿ ಮಕ್ಕಳ ಆರೋಗ್ಯ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ವಿಟಮಿನ್ ಕೊರತೆಯಿಂದ ಆರೋಗ್ಯ ಸಮಸ್ಯೆಗಳು ಮಕ್ಕಳನ್ನು ಕಾಡುತ್ತಿದೆ ಎಂದು ಹೇಳಿದ್ದಾರೆ.

ಪೌಷ್ಠಿಕಾಂಶ ಬರಿತ ಆಹಾರ ಸೇವನೆ ಇಲ್ಲದೇ B 12 ವಿಟಮಿನ್ ಕೊರತೆ ಕೂಡ ಕಂಡು ಬರುತ್ತಿದೆ. ಬಾಯಿ ಹುಣ್ಣು, ದೃಷ್ಟಿ ಸಮಸ್ಯೆ, ಸುಸ್ತು, ಜ್ವರ, ಕಿರಿಕಿರಿ, ಖಿನ್ನತೆ ವಿಟಮಿನ್ ಕೊರತೆಯ ಮುಖ್ಯ ಲಕ್ಷಣಗಳಾಗಿದೆ. ಹಂದಿಮಾಂಸ, ಕೋಳಿ, ಚಿಪ್ಪುಮೀನು, ಏಡಿ, ಹಾಲು, ಚೀಸ್ ಮತ್ತು ಮೊಸರು, ಮೊಟ್ಟೆ, ಡೈರಿ ಉತ್ಪನ್ನಗಳಲ್ಲಿ ಬಿ-12 ಪೋಷಕಾಂಶ ಸಮೃದ್ಧವಾಗಿದೆ. ಆಹಾರ ಸೇವಿಸಲು ಹಿಂಜರಿಯುವ ಮಕ್ಕಳ ಆರೋಗ್ಯ ಮೇಲೆ ಗಂಭೀರ ಸಮಸ್ಯೆ ಎದುರಾಗಬಹುದು ಎಂದು ಆತಂಕ ಹೊರಹಾಕಿದ್ದಾರೆ.

ಇದನ್ನು ಓದಿ: ಪಶ್ಚಿಮ ಬಂಗಾಳದಲ್ಲಿ ಉಸಿರಾಟಕ್ಕೆ ಸಂಬಂಧಿಸಿದ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 7 ಮಕ್ಕಳು ಸಾವು

ಮಕ್ಕಳಲ್ಲಿ ಅಡೆನಾಯ್ಡ್ ವೈರಸ್ ಸಮಸ್ಯೆ:

ಮಕ್ಕಳಿಗೆ ಬಿ -12 ಕೊರತೆಯ ಜೊತೆಗೆ ಅಡೆನಾಯ್ಡ್ ವೈರಸ್ ಅಪಾಯ ಶುರುವಾಗಿದ್ದು, ಕಳೆದ ಒಂದು ವಾರದಿಂದ ಮಕ್ಕಳು ಅಡೆನಾಯ್ಡ್ ವೈರಸ್ ಕಾಟಕ್ಕೆ ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳನ್ನು ಕಾಣಬಹುದು. ಆಸ್ಪತ್ರೆಯಲ್ಲಿ ತೀವ್ರ ಜ್ವರ ಗಂಟಲು ನೋವಿನಿಂದ ದಾಖಲಾತಿ ಹೆಚ್ಚಾಗುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಬದಲಾದ ಹವಮಾನ ಹಾಗೂ ತೀವ್ರ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಸಮಸ್ಯೆ ಬೀರುವ ಸಾಧ್ಯತೆ ಹೆಚ್ಚಿದ್ದು, ವೈದ್ಯರು ಸೂಕ್ತ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ ಸಾಮಾನ್ಯವಾಗಿ 1 ವರ್ಷದೊಳಗಿನ ಮಗು ಅಥವಾ 13 , 14 ವಯಸ್ಸಿನ ಮಕ್ಕಳಲ್ಲಿ B 12 ವಿಟಮಿನ್ ಕೊರತೆ ಹೆಚ್ಚಾಗಿ ಕಂಡು ಬರುತ್ತಿದೆ. ಪ್ರಾರಂಭದ ಹಂತದಲ್ಲೇ ಪರೀಕ್ಷೆ ಮಾಡಿಸಿ ಇದನ್ನು ಪತ್ತೆ ಹಚ್ಚಿದರೆ ಚಿಕಿತ್ಸೆ ಅತ್ಯಂತ ಸುಲಭ. ಇನ್ನೂ ಅಡೆನಾಯ್ಡ್ ವೈರಸ್ ಕೂಡಾ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದು ತೀವ್ರ ಜ್ವರ ಗಂಟಲು ನೋವು ಮಕ್ಕಳಲ್ಲಿ ಕಂಡು ಬಂದ್ರೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ವಿನಯಕುಮಾರ್ ಕಾಶಪ್ಪನವರ್, ಟಿವಿ9, ಬೆಂಗಳೂರು

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:02 pm, Fri, 3 March 23

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ