Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಲೆ ಪದಾರ್ಥಗಳಲ್ಲಿ ಕಲಬೆರಕೆ: ಅಧ್ಯಯನ-ಸಮೀಕ್ಷೆ-ಪರೀಕ್ಷೆಗಳಿಂದ ಬಹಿರಂಗವಾಗಿದೆ ಆತಂಕಕಾರಿ ಮಾಹಿತಿ

ಭಾರತೀಯ ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳಗಿನ ತಿಂಡಿಯಿಂದ ಹಿಡಿದು ರಾತ್ರಿಯ ಊಟದ ವರೆಗೂ ಹತ್ತಾರು ಮಸಾಲೆಗಳು ಆಹಾರದಲ್ಲಿ ಸೇರಿರುತ್ತವೆ. ಅರಿಶಿಣ, ಲವಂಗ, ಏಲಕ್ಕಿಯಂತಹ ಪದಾರ್ಥಗಳು ಆರೋಗ್ಯಕರ ಎಂಬುದರಲ್ಲಿ ಎರಡು ಮಾತಿಲ್ಲ. ಹೀಗಾಗಿ ಇವುಗಳ ಬಳಕೆ ಹೆಚ್ಚು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ಪದಾರ್ಥವೂ ಕಳಬೆರಕೆಯಾಗುತ್ತಿದೆ. ಸೊಪ್ಪು ತರಕಾರಿಯನ್ನು ಕೊಳಚೆ ನೀರಿನಲ್ಲಿ ಬೆಳೆಸಲಾಗುತ್ತಿದೆ. ಮಸಾಲೆ ಪದಾರ್ಥಗಳಲ್ಲಿ ಮಾರಕ ರಾಸಾಯನಿಕ ವಸ್ತುಗಳನ್ನು ಮಿಶ್ರಣ ಮಾಡಲಾಗುತ್ತಿದೆ. ಈ ಬಗ್ಗೆ ವರದಿ ಇಲ್ಲಿದೆ.

ಮಸಾಲೆ ಪದಾರ್ಥಗಳಲ್ಲಿ ಕಲಬೆರಕೆ: ಅಧ್ಯಯನ-ಸಮೀಕ್ಷೆ-ಪರೀಕ್ಷೆಗಳಿಂದ ಬಹಿರಂಗವಾಗಿದೆ ಆತಂಕಕಾರಿ ಮಾಹಿತಿ
ಮಸಾಲೆ ಪದಾರ್ಥಗಳು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Oct 14, 2024 | 3:07 PM

ಅಡುಗೆ ಮನೆಯಲ್ಲಿ ಬಳಸುವ ಸಾಂಬಾರು ಮಸಾಲೆ ಪದಾರ್ಥಗಳ ಕಲಬೆರಕೆಯು ಆರೋಗ್ಯದ ಮೇಲೆ ನೇರ, ಗಂಭೀರ ಮತ್ತು ಅಪಾಯಕಾರಿ ಪರಿಣಾಮ ಬೀರುತ್ತಿದೆ. ಬಳಕೆದಾರರ ಹಿತದೃಷ್ಟಿಯಿಂದ ಅದನ್ನು ಪತ್ತೆ ಹಚ್ಚುವುದು ಅತಿ ಮುಖ್ಯವಾಗಿದೆ. ಪುರಾತನವಾಗಿ ಭಾರತ ದೇಶವು ಮಸಾಲೆ ಪದಾರ್ಥಗಳ ಕಣಜ. ಶತ ಶತಮಾನಗಳಿಂದಲೂ ಮಸಾಲೆ ಪದಾರ್ಥಗಳ ಕೃಷಿ ಮತ್ತು ವ್ಯಾಪಾರದ ಅಗ್ರ ಕೇಂದ್ರವಾಗಿದೆ. ಅರಿಶಿನ, ಮೆಣಸಿನ ಪುಡಿ, ಜೀರಿಗೆ, ಕೊತ್ತಂಬರಿ ಬೀಜ ಇನ್ನೂ ಅನೇಕ ಸುವಾಸನೆಭರಿತ/ ರುಚಿಕರ/ಆರೋಗ್ಯಕರ ಪದಾರ್ಥಗಳು ಪಾಕಶಾಲೆಯ ಪ್ರಧಾನ ಪದಾರ್ಥಗಳಾಗಿವೆ. ಇದು ಎಲ್ಲರಿಗೂ ಚೆನ್ನಾಗಿ ವೇದ್ಯವಾಗಿದೆ. ಶತಮಾನಗಳಿಂದಲೂ ಭಾರತದ ರಫ್ತು ಬುಟ್ಟಿಯಲ್ಲಿ ಆಹಾರ ಮಸಾಲೆಗಳು ಅತ್ಯಗತ್ಯ ಅಂಶವಾಗಿ ಭದ್ರವಾಗಿ ಕುಳಿತಿದೆ. ಶತಮಾನಗಳ ಹಿಂದೆ ಪೋರ್ಚುಗೀಸ್ ದೇಶದ ನಾವಿಕ ವಾಸ್ಕೋ ಡಿ ಗಾಮಾ ಭಾರತಕ್ಕೆ ಬಂದಿದ್ದ ದಿನಗಳಲ್ಲಿ ಇಲ್ಲಿಂದ ಕಾಳುಮೆಣಸಿನ ಚೀಲವನ್ನು ಖರೀದಿಸಲು ತನ್ನಲ್ಲಿದ್ದ ಎಲ್ಲವನ್ನೂ ಮಾರಾಟ ಮಾಡಬೇಕಾಯಿತು ಎಂಬ ಮಾತಿದೆ. ಅಂದರೆ ಇಲ್ಲಿನ ಮಸಾಲೆ ಪದಾರ್ಥಗಳ ರುಚಿ, ಮಹತ್ವ ಅಷ್ಟಿತ್ತು ಎನ್ನಬಹುದು. ಜೊತೆಗೆ ನಮ್ಮ ಭಾರತೀಯ ಮಸಾಲೆಗಳಲ್ಲಿರುವ ಔಷಧೀಯ ಗುಣವನ್ನು ವಿವಿಧ ವೈಜ್ಞಾನಿಕ ಅಧ್ಯಯನಗಳು ಪದೇ ಪದೇ ಸಾಬೀತುಪಡಿಸಿವೆ. ಭಾರತದ ಮಸಾಲೆ ಪದಾರ್ಥಗಳ ರುಚಿ, ಮಹತ್ವ ಇಂದಿಗೂ ಕುಂದಿಲ್ಲ. ಹಾಗೆಯೇ ಉಳಿದಿದೆ. ಆದರೆ ಬೇಡಿಕೆ ಹೆಚ್ಚಾಗಿ ಆ ಮಸಾಲೆ ಪದಾರ್ಥಗಳಲ್ಲಿ ಕಲಬೆರಕೆ ಎಂಬ ಪೆಡಂಭೂತ ವ್ಯಾಪಕ ಸಮಸ್ಯೆಯಾಗಿ ಕಾಡತೊಡಗಿದೆ. ಮುಖ್ಯವಾಗಿ ಇದು ಗ್ರಾಹಕರ ಆರೋಗ್ಯ ಮತ್ತು ಈ ಉದ್ಯಮದ ಸಮಗ್ರತೆಗೆ ಬೆದರಿಕೆ ಒಡ್ಡುತ್ತಿದೆ. ಭಾರತದ ಮಸಾಲೆ ಪದಾರ್ಥಗಳ ಹೆಚ್ಚಿನ ಬೇಡಿಕೆ ಮತ್ತು ಮೌಲ್ಯದಿಂದಾಗಿಯೇ ಈ ಮಸಾಲೆ ಪದಾರ್ಥಗಳು ಕಲಬೆರಕೆಗೆ ಗುರಿಯಾಗುತ್ತಿವೆ. ಸಾಮಾನ್ಯವಾಗಿ ಕಲಬೆರಕೆಗಳಲ್ಲಿ ಕೃತಕ ಬಣ್ಣಗಳು...

Published On - 2:40 pm, Mon, 14 October 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ