Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!

ಹೆಚ್ಚುತ್ತಿರುವ ವಾಯು ಮಾಲಿನ್ಯವು ಗರ್ಭಿಣಿ ಮತ್ತು ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಸಾಕಷ್ಟು ಅಪಾಯಕಾರಿಯಾಗಿದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ದೆಹಲಿನ ಡಾ.ವಂದನಾ ಮಿಶ್ರಾ ಎಚ್ಚರಿಸುತ್ತಾರೆ.

Air Pollution: ಗರ್ಭದಲ್ಲಿರುವ ಭ್ರೂಣದ ಮೇಲೂ ವಾಯು ಮಾಲಿನ್ಯ ಅಪಾಯಕಾರಿ ಪರಿಣಾಮವನ್ನು ಬೀರುತ್ತದೆ!
Air PollutionImage Credit source: NIEHS
Follow us
ಅಕ್ಷತಾ ವರ್ಕಾಡಿ
|

Updated on: Nov 08, 2023 | 3:35 PM

ಬೆಂಗಳೂರಿನಂತಹ ಅಧಿಕ ಜನದಟ್ಟನೆಯಿಂದ ಕೂಡಿದ ಪ್ರದೇಶಗಳಲ್ಲಿ ವಾಯು ಮಾಲಿನ್ಯವೂ ಕೂಡ ಅಪಾಯಕಾರಿ ಮಟ್ಟದಲ್ಲಿಯೇ ಇದೆ. ಹೆಚ್ಚುತ್ತಿರುವ ಈ ಮಾಲಿನ್ಯದಿಂದ ಅಸ್ತಮಾ, ಸಿಒಪಿಡಿ ಮತ್ತು ಹೃದ್ರೋಗಗಳ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿದೆ. ಇದಲ್ಲದೇ ಹೆಚ್ಚುತ್ತಿರುವ ವಾಯು ಮಾಲಿನ್ಯವು ಗರ್ಭಿಣಿ ಮತ್ತು ಗರ್ಭದಲ್ಲಿರುವ ಭ್ರೂಣದ ಆರೋಗ್ಯದ ಮೇಲೂ ಸಾಕಷ್ಟು ಅಪಾಯಕಾರಿಯಾಗಿದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ದೆಹಲಿನ ಡಾ.ವಂದನಾ ಮಿಶ್ರಾ ಎಚ್ಚರಿಸುತ್ತಾರೆ.

ಮಾಲಿನ್ಯದಿಂದ ಗರ್ಭದಲ್ಲಿರುವ ಭ್ರೂಣಕ್ಕೆ ಅಪಾಯ ಹೇಗೆ?

‘ಗರ್ಭಿಣಿಯರು ಮಾಲಿನ್ಯದಿಂದ ಕೂಡಿದ ಗಾಳಿಯನ್ನು ಉಸಿರಾಡಿದಾಗ ಈ ಗಾಳಿಯು ಗರ್ಭದಲ್ಲಿರುವ ಮಗುವಿನ ಸಂಪರ್ಕಕ್ಕೂ ಬರುತ್ತದೆ. ಈ ಕಾರಣದಿಂದಾಗಿ, ಮಗುವಿನ ಶ್ವಾಸಕೋಶದಲ್ಲಿ ಸಮಸ್ಯೆಗಳು ಉಂಟಾಗುವ ಅಪಾಯವಿದೆ. ಇದಲ್ಲದೇ ಮಾಲಿನ್ಯದಿಂದಾಗಿ ಮಗುವಿನ ಬೆಳವಣಿಗೆ ಹಾಗೂ ಉಸಿರಾಟದ ಮೇಲೂ ಪರಿಣಾಮ ಬೀರಬಹುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಮತ್ತು ಗರ್ಭಾವಸ್ಥೆಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುವ ಅಪಾಯ ಹೆಚ್ಚು’ ಎಂದು ತಜ್ಞರಾದ ಡಾ.ವಂದನಾ ಮಿಶ್ರಾ ಸಲಹೆ ನೀಡುತ್ತಾರೆ.

ಆದ್ದರಿಂದ ದೆಹಲಿ, ಬೆಂಗಳೂರಿನಂತಹ ಮಾಲಿನ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದೆ. ಈಗಾಗಲೇ ಅಸ್ತಮಾ ಅಥವಾ ಇತರ ಉಸಿರಾಟದ ಕಾಯಿಲೆಗಳನ್ನು ಹೊಂದಿದ್ದರೆ, ಗರ್ಭಾವಸ್ಥೆಯಲ್ಲಿ ವೈದ್ಯರೊಂದಿಗೆ ಸಂಪರ್ಕದಲ್ಲಿರುವುದು ಅತ್ಯಂತ ಅಗತ್ಯ. ನಿರ್ಲಕ್ಷ್ಯ ತೋರಿದರೆ ನಿಮ್ಮೊಂದಿಗೆ ನಿಮ್ಮ ಹುಟ್ಟಲಿರುವ ಮಗುವಿನ ಆರೋಗ್ಯಕ್ಕೂ ಅಪಾಯ.

ಇದನ್ನೂ ಓದಿ:  ಉಳಿದಿರುವ ಆಹಾರವನ್ನು ಮತ್ತೆ ಬಿಸಿ ಮಾಡಿ ತಿನ್ನುವ ಅಭ್ಯಾಸ ನಿಮಗಿದೆಯಾ? ಹಾಗಿದ್ದರೆ ಮಾರಣಾಂತಿಕ ‘ಫ್ರೈಡ್ ರೈಸ್ ಸಿಂಡ್ರೋಮ್’ ಬಗ್ಗೆ ತಿಳಿದುಕೊಳ್ಳಿ

ಮಾಲಿನ್ಯದಿಂದ ರಕ್ಷಣೆ ಹೇಗೆ?

  • ಗರ್ಭಿಣಿಯರು ಮನೆಯಿಂದ ಹೊರಬರುವುದನ್ನು ತಪ್ಪಿಸಬೇಕು.
  • ಹೊರಗೆ ಹೋಗುವುದು ಬಹಳ ಮುಖ್ಯವಾದರೆ ಮಾಸ್ಕ್ ಧರಿಸಿ.
  • ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರವನ್ನು ಸೇವಿಸಿ.
  • ದೇಹದಲ್ಲಿ ನೀರಿನ ಕೊರತೆ ಇರಬಾರದು. ಆದ್ದರಿಂದ ಸಾಕಷ್ಟು ನೀರು ಕುಡಿಯಿರಿ.
  • ಮನೆಯೊಳಗೆ ಧೂಳಿದ್ದರೆ ಇತರರ ಸಹಾಯ ಪಡೆದು ಸ್ವಚ್ಛಗೊಳಿಸಿ.
  • ಮನೆಯಲ್ಲಿ ಯಾರಾದರೂ ಧೂಮಪಾನ ಮಾಡುತ್ತಿದ್ದರೆ, ಅವರ ಸಂಪರ್ಕದಿಂದ ದೂರವಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ