AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ಹೊಗೆ, ಧೂಳು, ಮಾಲಿನ್ಯಗಳು ನಿಮ್ಮ ಹೃದ್ರೋಗಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗಬಹುದು ಎಚ್ಚರ

ಪ್ರತಿ ದಿನ ನೀವು ಧೂಳು ಮಾಲಿನ್ಯಗಳಿಗೆ ಒಡ್ಡಿಕೊಂಡಿದ್ದರೆ ಇದು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಕಾರಣವಾಗಬಹುದು ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ.

Air Pollution: ಹೊಗೆ, ಧೂಳು, ಮಾಲಿನ್ಯಗಳು ನಿಮ್ಮ ಹೃದ್ರೋಗಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗಬಹುದು ಎಚ್ಚರ
Air Pollution Image Credit source: Daily Express
TV9 Web
| Edited By: |

Updated on: Nov 10, 2022 | 12:16 PM

Share

ನಗರಗಳನ್ನು ಕೇಂದ್ರೀಕರಿಸಿದ ಅಭಿವೃದ್ಧಿಯತ್ತ ಇಂದು ಜಗತ್ತು ಸಾಗುತ್ತಿದ್ದಂತೆ ಧೂಳು, ಹೊಗೆ , ಜನದಟ್ಟನೆ ಹೀಗೆ ಸಾಕಷ್ಟು ಮಾಲಿನ್ಯಕಾರಕಗಳು ಹೆಚ್ಚಾಗುತ್ತಾ ಹೋಗುತ್ತವೆ. ಇದು ನಿಮ್ಮ ಆರೋಗ್ಯದ ಮೇಲೆ ಕಂಟಕವಾಗಿ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಬೆಂಗಳೂರಿನಂತಹ ನಗರಗಳಲ್ಲಿ ಒತ್ತಡದ ಜೀವನ ನಡೆಸುತ್ತಿರುವವರು ನಿಮ್ಮ ಆರೋಗ್ಯದ ಕಡೆ ಗಮನಹರಿಸುವುದು ಅತ್ಯಂತ ಅಗತ್ಯವಾಗಿದೆ.

ಪ್ರತಿ ದಿನ ನೀವು ಧೂಳು ಮಾಲಿನ್ಯಗಳಿಗೆ ಒಡ್ಡಿಕೊಂಡಿದ್ದರೆ ಇದು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗೆ ಕಾರಣವಾಗಬಹುದು ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ.

ಒಂದು ಅಧ್ಯಯನದ ಪ್ರಕಾರ, ವಾಯು ಮಾಲಿನ್ಯಕ್ಕೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಈಗಾಗಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಹೃದಯರಕ್ತನಾಳದ ಅಸ್ವಸ್ಥತೆಗಳು ಹೆಚ್ಚಾಗುವ ಸಾಧ್ಯತೆಗಳಿವೆ ಇದು ನಿಮ್ಮ ಪ್ರಾಣಕ್ಕೆ ಹಾನಿಯಾಗುತ್ತದೆ ಎಂದು ತಿಳಿದು ಬಂದಿದೆ.

ಧೂಳು ಮಾಲಿನ್ಯಗಳ ನಡುವೆ ಜೀವನ ನಡೆಸುತ್ತಿರುವವರಲ್ಲಿ ಹೃದಯದ ರಕ್ತನಾಳಗಳು ಹಾಗೂ ರಕ್ತ ಪರಿಚಲನೆಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಇದು ಹೃದಯ ಸಂಬಂಧಿ ಕಾಯಿಲೆ ಕಾರಣವಾಗುತ್ತದೆ ಎಂದು ಅಮೆರಿಕಾದ ಕಾಲೇಜ್ ಆಫ್ ಕಾರ್ಡಿಯಾಲಜಿ ಜರ್ನಲ್‌ನಲ್ಲಿ ಇತ್ತೀಚೆಗೆ ಪ್ರಕಟವಾದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಇದನ್ನು ಓದಿ: ನಿಮಗೆ ಬೆನ್ನು ನೋವಿನ ಸಮಸ್ಯೆಯೇ? ಹಾಗಾದ್ರೆ ನೋವು ದೂರ ಮಾಡುವ ವಿಧಾನಗಳ ಬಗ್ಗೆ ತಿಳಿಯಲೇಬೇಕು

ಈ ಅಧ್ಯಯನವು 62 ವರ್ಷಗಳ ವಯಸ್ಸಿನ 287 ರೋಗಿಗಳನ್ನು ಒಳಗೊಂಡು ಮಾಡಲಾಗಿದೆ. ಇದರಲ್ಲಿ ಭಾಗವಹಿಸಿದವರಲ್ಲಿ 149 ಪುರುಷರು. ಒಟ್ಟು 287 ರೋಗಿಗಳಲ್ಲಿ 161 ಹೃದಯ ಸ್ನಾಯುವಿನ ರಕ್ತಕೊರತೆಯ ಸಮಸ್ಯೆ ಹಾಗೂ ತಡೆರಹಿತ ಪರಿಧಮನಿಯ ಅಥವಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸುತ್ತದೆ.

ಇಂಗ್ಲೀಷ್ ನಲ್ಲಿ ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:

ಆದ್ದರಿಂದ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಎಂಬ ಮಾತಿನಂತೆ ನಿಮ್ಮ ಆರೋಗ್ಯದ ಕುರಿತು ನೀವೇ ಗಮನಹರಿಸಬೇಕಿದೆ. ಆದಷ್ಟು ನಗರ ಪ್ರದೇಶಗಳಲ್ಲಿ ವಾಸಿಸುವವರು ಕಡ್ಡಾಯವಾಗಿ  ಮಾಸ್ಕ್ ಧರಿಸಿ ಹೊರಗಡೆ ಹೋಗುವುದು ಅಗತ್ಯವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್