AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma:ನಿಮಗೆ ಅಸ್ತಮಾ ಇದೆಯೇ? ಹೆಚ್ಚುತ್ತಿರುವ ಮಾಲಿನ್ಯದ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?

ದೀಪಾವಳಿ ಹಬ್ಬದಲ್ಲಿ ಭಾರೀ ಮಾಲಿನ್ಯ ಉಂಟಾಗುತ್ತಿದೆ. ಇದು ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಅಲ್ಲದೆ ಇತರೆ ಕಾಯಿಲೆ ಇರುವವರೂ ಹೆಚ್ಚಾಗುವ ಸಾಧ್ಯತೆ ಇದೆ.

Asthma:ನಿಮಗೆ ಅಸ್ತಮಾ ಇದೆಯೇ? ಹೆಚ್ಚುತ್ತಿರುವ ಮಾಲಿನ್ಯದ ನಡುವೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?
Asthma
TV9 Web
| Edited By: |

Updated on: Oct 26, 2022 | 3:20 PM

Share

ದೀಪಾವಳಿ ಹಬ್ಬದಲ್ಲಿ ಭಾರೀ ಮಾಲಿನ್ಯ ಉಂಟಾಗುತ್ತಿದೆ. ಇದು ವಿವಿಧ ರೋಗಗಳಿಗೆ ಕಾರಣವಾಗುತ್ತದೆ. ಅಲ್ಲದೆ ಇತರೆ ಕಾಯಿಲೆ ಇರುವವರೂ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ದೀಪಾವಳಿ ನಂತರವೂ ಮಾಲಿನ್ಯ ಮುಂದುವರೆಯಲಿದ್ದು, ನಿಮ್ಮ ಗಂಟಲು ತುಂಬಾ ಸೂಕ್ಷ್ಮವಾಗಿದ್ದರೆ ಅಥವಾ ನಿಮಗೆ ಅಸ್ತಮಾ ಸಮಸ್ಯೆ ಇದ್ದರೆ ದೀಪಾವಳಿಯ ನಂತರ ನೀವು ಕೆಲವು ವಿಶೇಷ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.

ಇದರಿಂದ ಉಸಿರಾಟಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಕೆಮ್ಮು ನಿಮ್ಮನ್ನು ಮತ್ತೆ ಮತ್ತೆ ಕಾಡುವುದಿಲ್ಲ. ಚಳಿಗಾಲ ಶುರುವಾಗುತ್ತಿದ್ದಂತೆ ಉಸಿರಾಟದ ಸಮಸ್ಯೆಗಳು ಹೆಚ್ಚಾಗಿ ಕೆಮ್ಮು, ಕಫ, ನೆಗಡಿ ಕಾಣಿಸಿಕೊಳ್ಳುತ್ತದೆ. ಆದರೆ ಹೆಚ್ಚಿದ ಮಾಲಿನ್ಯವು ಈ ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ.

ಮನೆಯ ಗಾಳಿಯನ್ನು ಸ್ವಚ್ಛವಾಗಿಡುವುದು ಹೇಗೆ – ಅಸ್ತಮಾ ರೋಗಿಗಳು ಮತ್ತು ಸೂಕ್ಷ್ಮ ಗಂಟಲು ಇರುವವರು ಮನೆಯಿಂದ ಹೊರಗೆ ಹೋಗಬಾರದು. ಬೆಳಿಗ್ಗೆ ಮತ್ತು ಸಂಜೆ ಹೊರಹೋಗದಿರುವುದು ಬಹಳ ಮುಖ್ಯ. ಏಕೆಂದರೆ ಈ ಎರಡು ಕಾಲದಲ್ಲಿ ಮಾಲಿನ್ಯ, ಹೊಗೆ ಮತ್ತು ಮಂಜು ಸಮಸ್ಯೆ ಹೆಚ್ಚು.

– ನೀವು ಹೆಚ್ಚು ಹೊತ್ತು ಮನೆಯಲ್ಲಿದ್ದರೂ ನಿಮ್ಮ ಮನೆಯ ಗಾಳಿ ಶುದ್ಧವಾಗಿರುತ್ತದೆ ಎಂಬುದನ್ನು ನೆನಪಿಡಿ. ನಿಮ್ಮ ಮನೆಯಲ್ಲಿ ಗಾಳಿಯನ್ನು ಸ್ವಚ್ಛವಾಗಿಡಲು ಈ ಸಲಹೆಗಳನ್ನು ಅನುಸರಿಸಿ.

– ಮನೆಯಲ್ಲಿ ಪೂಜೆ ಮಾಡುವಾಗ ಅಗರಬತ್ತಿಗಳನ್ನು ಹಚ್ಚಬೇಡಿ. ದೀಪವನ್ನು ಬೆಳಗಿಸಿ ಮತ್ತು ಸುಗಂಧಕ್ಕಾಗಿ ಲ್ಯಾವೆಂಡರ್ ಎಣ್ಣೆ ಅಥವಾ ನಿಂಬೆ ಹುಲ್ಲಿನ ಎಣ್ಣೆಯನ್ನು ಡಿಫ್ಯೂಸರ್ನಲ್ಲಿ ಬಳಸಿ.

– ಲ್ಯಾವೆಂಡರ್ ಎಣ್ಣೆ ಮತ್ತು ನಿಂಬೆ ಹುಲ್ಲಿನ ಎಣ್ಣೆ ಎರಡೂ ಮನೆಯಲ್ಲಿ ಗಾಳಿಯನ್ನು ಸ್ವಚ್ಛಗೊಳಿಸಲು ಮತ್ತು ಶ್ವಾಸಕೋಶವನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಏಕೆಂದರೆ ಅವು ಆಮ್ಲಜನಕದ ಹರಿವನ್ನು ಕಾಪಾಡಿಕೊಳ್ಳಲು ಬಹಳ ಪರಿಣಾಮಕಾರಿ.

– ಅಲೋವೆರಾ, ಬೋಸ್ಟನ್ ಫರ್ನ್, ಮನಿ ಪ್ಲಾಂಟ್, ತುಳಸಿ ಮುಂತಾದ ಸಸ್ಯಗಳನ್ನು ಮನೆಯೊಳಗೆ ಇರಿಸಿ. ಅವುಗಳನ್ನು ಕಿಟಕಿಯ ಬಳಿ ಇರಿಸಿ. ಇವು ಮನೆಗೆ ಶುದ್ಧ ಗಾಳಿಯನ್ನು ತರುತ್ತವೆ. ಈ ಸಸ್ಯಗಳು ಯಾವುದೇ ಕೆಟ್ಟ ಗಾಳಿಯನ್ನು ಮನೆಗೆ ಪ್ರವೇಶಿಸದಂತೆ ತಡೆಯುತ್ತದೆ.

ಅಸ್ತಮಾ ಇರುವವರು ಏನು ಮಾಡಬೇಕು? -ನೀವು ಲವಂಗ, ಶುಂಠಿ, ಬೆಳ್ಳುಳ್ಳಿ, ಕರಿಬೇವಿನ ಎಲೆಗಳು ಮತ್ತು ದಾಲ್ಚಿನ್ನಿಯನ್ನು ಬೇಳೆಕಾಳುಗಳು ಮತ್ತು ತರಕಾರಿಗಳಲ್ಲಿ ಬಳಸಬೇಕು. -ಮೆಂತ್ಯವನ್ನು ಕೂಡ ತಿನ್ನುವ ಅಭ್ಯಾಸವನ್ನು ಮಾಡಿಕೊಳ್ಳುವುದು ಒಳ್ಳೆಯದು. ಇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ದಿನಕ್ಕೆ ಎರಡು ಬಾರಿ ಶುಂಠಿ ಚಹಾವನ್ನು ಕುಡಿಯಿರಿ. ಹಾಲು ಇಲ್ಲದೆ ಚಹಾ ಕುಡಿಯುವುದು ಒಳ್ಳೆಯದು.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ