AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ

ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 06, 2024 | 12:40 PM

Share

ಆಧುನಿಕ ಯುಗದಲ್ಲಿ, ಪ್ರತಿಯೊಬ್ಬರೂ ತಮ್ಮ ತಮ್ಮ ಕೆಲಸಗಳಲ್ಲಿ ಮಗ್ನರಾಗಿರುವುದರಿಂದ, ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಅಜಾಗರೂಕತೆ ತೋರುತ್ತಿದ್ದಾರೆ. ಹೊಟ್ಟೆ ತುಂಬಿಸಿಕೊಳ್ಳುವ ಭರದಲ್ಲಿ, ಯಾವುದು ದೇಹಕ್ಕೆ ಒಳ್ಳೆಯದು ಎಂಬುದನ್ನು ಕೂಡ ಯೋಚಿಸದಿರುವುದು ಹಲವಾರು ರೀತಿಯ ಕಾಯಿಲೆಗಳನ್ನು ನಾವೇ ಬರಮಾಡಿಕೊಂಡಂತಾಗಿದೆ. ಈ ರೀತಿಯ ಕೆಟ್ಟ ಅಭ್ಯಾಸಗಳು ದೇಹದ ಶಕ್ತಿಯನ್ನು ಕುಂಟಿಸುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ರೋಗಗಳನ್ನು ಹೆಚ್ಚಿಸುತ್ತಿದೆ. ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

ಸಾಮಾನ್ಯವಾಗಿ ಮಹಿಳೆಯರು ಮುಟ್ಟಿನ ನೋವು, ಸೆಳೆತವನ್ನು ಪರಿಹರಿಸಿಕೊಳ್ಳಲು ಮಾತ್ರೆಯ ಮೊರೆ ಹೋಗುತ್ತಾರೆ. ಆದರೆ ಇದರಿಂದ ಅನೇಕ ರೀತಿಯ ಅಡ್ಡಪರಿಣಾಮಗಳು ಉಂಟಾಗಬಹುದು. ಹಾಗಾಗಿ ಮಹಿಳೆಯರು ಈ ಬಗ್ಗೆ ಜಾಗರೂಕರಾಗಿರಬೇಕು. ಈ ಹಂತದಲ್ಲಿ ಓಂ ಕಾಳು ನಿಮಗೆ ಉತ್ತಮ ಆಯುರ್ವೇದ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಒಂದು ಲೋಟ ನೀರಿಗೆ ಅರ್ಧ ಚಮಚ ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ, ನಿಧಾನವಾಗಿ ಕುಡಿದರೆ ಹೊಟ್ಟೆ ನೋವು ಮಾಯವಾಗುತ್ತದೆ. ಇದಲ್ಲದೆ, ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಇದನ್ನೂ ಓದಿ: ಮಧುಮೇಹಿಗಳು ಬ್ರೊಕೋಲಿ ಸೇವನೆ ಮಾಡಬಹುದೇ?

ಮಲಬದ್ಧತೆ ಸಮಸ್ಯೆಗೆ ದಿವ್ಯಔಷಧ!

ವಿಶೇಷವಾಗಿ ಓಂ ಕಾಳು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯಬಹುದು ಜೊತೆಗೆ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಇದು ಅತ್ಯುತ್ತಮ ಔಷಧಿಯಾಗಿದೆ. ಅಲ್ಲದೆ ಮಲಬದ್ಧತೆ ಸಮಸ್ಯೆಯನ್ನು ಸಹ ನಿವಾರಿಸುತ್ತದೆ. ಅತಿಯಾಗಿ ಹೊಟ್ಟೆ ಉಬ್ಬಿದ ಅನುಭವವಾಗುತ್ತಿದ್ದರೆ ಇದರ ನೀರನ್ನು ಕುಡಿಯಿರಿ. ಅಥವಾ ಒಂದು ಚಿಟಿಕೆ ಓಂ ಕಾಳನ್ನು ಬಾಯಿಗೆ ಹಾಕಿಕೊಂಡು ಅದರ ರಸವನ್ನು ಜಗಿದು ನುಂಗುವುದರಿಂದ ಅಜೀರ್ಣತೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯಲ್ಲಿ ನೈಸರ್ಗಿಕವಾಗಿ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ