Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ

ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

Ajwain Seeds: ಓಂ ಕಾಳಿನಲ್ಲಿರುವ ಔಷಧೀಯ ಗುಣಗಳು ಮುಟ್ಟಿನ ನೋವನ್ನು ಕ್ಷಣದಲ್ಲಿ ನಿವಾರಣೆ ಮಾಡುತ್ತೆ
Edited By:

Updated on: Jun 06, 2024 | 12:40 PM

ಆಧುನಿಕ ಯುಗದಲ್ಲಿ, ಪ್ರತಿಯೊಬ್ಬರೂ ತಮ್ಮ ತಮ್ಮ ಕೆಲಸಗಳಲ್ಲಿ ಮಗ್ನರಾಗಿರುವುದರಿಂದ, ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಅಜಾಗರೂಕತೆ ತೋರುತ್ತಿದ್ದಾರೆ. ಹೊಟ್ಟೆ ತುಂಬಿಸಿಕೊಳ್ಳುವ ಭರದಲ್ಲಿ, ಯಾವುದು ದೇಹಕ್ಕೆ ಒಳ್ಳೆಯದು ಎಂಬುದನ್ನು ಕೂಡ ಯೋಚಿಸದಿರುವುದು ಹಲವಾರು ರೀತಿಯ ಕಾಯಿಲೆಗಳನ್ನು ನಾವೇ ಬರಮಾಡಿಕೊಂಡಂತಾಗಿದೆ. ಈ ರೀತಿಯ ಕೆಟ್ಟ ಅಭ್ಯಾಸಗಳು ದೇಹದ ಶಕ್ತಿಯನ್ನು ಕುಂಟಿಸುವುದರ ಜೊತೆಗೆ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ರೋಗಗಳನ್ನು ಹೆಚ್ಚಿಸುತ್ತಿದೆ. ಸಣ್ಣ ಕಾಯಿಲೆ ಬಂದರೂ ವೈದ್ಯರ ಬಳಿಗೆ ಓಡುವ ನಾವು, ಹೊಟ್ಟೆ ನೋವು, ತಲೆನೋವು ಮತ್ತು ಶೀತದಂತಹ ಸಣ್ಣ ಕಾಯಿಲೆಗಳನ್ನು ಮನೆಯಲ್ಲಿ ಪರಿಹರಿಸಿಕೊಳ್ಳುವುದಿಲ್ಲ. ನಮ್ಮ ಅಡುಗೆಮನೆಯಲ್ಲಿರುವ ಕೆಲವು ಪದಾರ್ಥಗಳ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂಬುದನ್ನು, ನಾವು ಮರೆಯಬಾರದು. ಹಾಗಾದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ಮನೆಯಲ್ಲಿಯೇ ಕಡಿಮೆ ಮಾಡಿಕೊಳ್ಳುವುದು ಹೇಗೆ? ಪ್ರಾಥಮಿಕ ಹಂತದಲ್ಲಿ ನೋವು ನಿವಾರಣೆ ಮಾಡಿಕೊಳ್ಳಬಹುದೇ? ಇಲ್ಲಿದೆ ಮಾಹಿತಿ.

ಸಾಮಾನ್ಯವಾಗಿ ಮಹಿಳೆಯರು ಮುಟ್ಟಿನ ನೋವು, ಸೆಳೆತವನ್ನು ಪರಿಹರಿಸಿಕೊಳ್ಳಲು ಮಾತ್ರೆಯ ಮೊರೆ ಹೋಗುತ್ತಾರೆ. ಆದರೆ ಇದರಿಂದ ಅನೇಕ ರೀತಿಯ ಅಡ್ಡಪರಿಣಾಮಗಳು ಉಂಟಾಗಬಹುದು. ಹಾಗಾಗಿ ಮಹಿಳೆಯರು ಈ ಬಗ್ಗೆ ಜಾಗರೂಕರಾಗಿರಬೇಕು. ಈ ಹಂತದಲ್ಲಿ ಓಂ ಕಾಳು ನಿಮಗೆ ಉತ್ತಮ ಆಯುರ್ವೇದ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಒಂದು ಲೋಟ ನೀರಿಗೆ ಅರ್ಧ ಚಮಚ ಓಂ ಕಾಳನ್ನು ಹಾಕಿ ಚೆನ್ನಾಗಿ ಕುದಿಸಿ, ನಿಧಾನವಾಗಿ ಕುಡಿದರೆ ಹೊಟ್ಟೆ ನೋವು ಮಾಯವಾಗುತ್ತದೆ. ಇದಲ್ಲದೆ, ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ.

ಇದನ್ನೂ ಓದಿ: ಮಧುಮೇಹಿಗಳು ಬ್ರೊಕೋಲಿ ಸೇವನೆ ಮಾಡಬಹುದೇ?

ಮಲಬದ್ಧತೆ ಸಮಸ್ಯೆಗೆ ದಿವ್ಯಔಷಧ!

ವಿಶೇಷವಾಗಿ ಓಂ ಕಾಳು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಪಡೆಯಬಹುದು ಜೊತೆಗೆ ತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರಿಗೆ ಇದು ಅತ್ಯುತ್ತಮ ಔಷಧಿಯಾಗಿದೆ. ಅಲ್ಲದೆ ಮಲಬದ್ಧತೆ ಸಮಸ್ಯೆಯನ್ನು ಸಹ ನಿವಾರಿಸುತ್ತದೆ. ಅತಿಯಾಗಿ ಹೊಟ್ಟೆ ಉಬ್ಬಿದ ಅನುಭವವಾಗುತ್ತಿದ್ದರೆ ಇದರ ನೀರನ್ನು ಕುಡಿಯಿರಿ. ಅಥವಾ ಒಂದು ಚಿಟಿಕೆ ಓಂ ಕಾಳನ್ನು ಬಾಯಿಗೆ ಹಾಕಿಕೊಂಡು ಅದರ ರಸವನ್ನು ಜಗಿದು ನುಂಗುವುದರಿಂದ ಅಜೀರ್ಣತೆಯನ್ನು ಕಡಿಮೆ ಮಾಡುತ್ತದೆ. ಈ ರೀತಿಯಲ್ಲಿ ನೈಸರ್ಗಿಕವಾಗಿ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

 

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us