AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತನ ಕ್ಯಾನ್ಸರ್ ತಡೆಯಲು ಬೇಸಿಗೆಯಲ್ಲಿ ಸಿಗುವ ಈ ಹಣ್ಣನ್ನು ತಪ್ಪದೆ ಸೇವನೆ ಮಾಡಿ

ತಾಳೆ ಹಣ್ಣುಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿರುತ್ತದೆ. ಜೊತೆಗೆ ದೇಹಕ್ಕೂ ತುಂಬಾ ಒಳ್ಳೆಯದು. ಈ ಹಣ್ಣುಗಳು ಬೇಸಿಗೆಯ ಶಾಖದಿಂದ ನಮ್ಮನ್ನು ರಕ್ಷಿಸುವುದಲ್ಲದೆ ದೇಹಕ್ಕೆ ಅಗತ್ಯವಿರುವ ವಿಟಮಿನ್ ಗಳನ್ನು ನೀಡುತ್ತದೆ. ಇನ್ನು ಈ ಹಣ್ಣಿನಲ್ಲಿ ಸತು ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳಿವೆ. ಹಾಗಾಗಿ ಬೇಸಿಗೆಯಲ್ಲಿ ತಾಳೆ ಹಣ್ಣುಗಳನ್ನು ಆಗಾಗ ಸೇವನೆ ಮಾಡುವುದರಿಂದ ನಿರ್ಜಲೀಕರಣ ಸಮಸ್ಯೆಯನ್ನು ಕೂಡ ತಡೆಯಬಹುದು. ಹಾಗಾದರೆ ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ಸ್ತನ ಕ್ಯಾನ್ಸರ್ ತಡೆಯಲು ಬೇಸಿಗೆಯಲ್ಲಿ ಸಿಗುವ ಈ ಹಣ್ಣನ್ನು ತಪ್ಪದೆ ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 20, 2025 | 8:50 AM

Share

ಬೇಸಿಗೆಯಲ್ಲಿ ಮಾತ್ರ ಲಭ್ಯವಿರುವ ತಾಳೆ ಹಣ್ಣು (Ice Apple) ಅಥವಾ ಐಸ್ ಸೇಬುಗಳನ್ನು ನೀವು ನೋಡಿರಬಹುದು. ಬೇಸಿಗೆ ಬಂದಾಗ, ಈ ಹಣ್ಣುಗಳನ್ನು ಹೆಚ್ಚಾಗಿ ರಸ್ತೆ ಬದಿಗಳಲ್ಲಿ ಮಾರಾಟ ಮಾಡಲಾಗುತ್ತದೆ. ಈ ತಾಳೆ ಹಣ್ಣುಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿರುತ್ತದೆ. ಜೊತೆಗೆ ದೇಹಕ್ಕೂ ತುಂಬಾ ಒಳ್ಳೆಯದು. ಈ ಹಣ್ಣುಗಳು ಬೇಸಿಗೆಯ ಶಾಖದಿಂದ ನಮ್ಮನ್ನು ರಕ್ಷಿಸುವುದಲ್ಲದೆ ದೇಹಕ್ಕೆ ಅಗತ್ಯವಿರುವ ವಿಟಮಿನ್ ಗಳನ್ನು ನೀಡುತ್ತದೆ. ಇನ್ನು ಈ ಹಣ್ಣಿನಲ್ಲಿ ಸತು ಮತ್ತು ಪೊಟ್ಯಾಸಿಯಮ್ ನಂತಹ ಖನಿಜಗಳಿವೆ. ಹಾಗಾಗಿ ಬೇಸಿಗೆಯಲ್ಲಿ ತಾಳೆ ಹಣ್ಣುಗಳನ್ನು ಆಗಾಗ ಸೇವನೆ ಮಾಡುವುದರಿಂದ ನಿರ್ಜಲೀಕರಣ ಸಮಸ್ಯೆಯನ್ನು ಕೂಡ ತಡೆಯಬಹುದು. ಹಾಗಾದರೆ ಈ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

  • ತಾಳೆ ಹಣ್ಣು ಅಥವಾ ಐಸ್ ಸೇಬುಗಳಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಸತು ಮತ್ತು ವಿಟಮಿನ್ ಬಿ ನಂತಹ ಸಾಕಷ್ಟು ಪೋಷಕಾಂಶಗಳಿವೆ. ಇದು ಆರೋಗ್ಯ ಕಾಪಾಡಿಕೊಳ್ಳಲು ವರದಾನವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೆ ಸಹ, ತಾಳೆ ಹಣ್ಣುಗಳು ತುಂಬಾ ಒಳ್ಳೆಯದು.
  • ಈ ಹಣ್ಣುಗಳ ಸೇವನೆಯಿಂದ ಆಮ್ಲೀಯತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಜೊತೆಗೆ ಹೃದಯರಕ್ತನಾಳದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ ಎಂದು ವೈದ್ಯರು ಹೇಳುತ್ತಾರೆ.
  • ಆರೋಗ್ಯ ತಜ್ಞರ ಪ್ರಕಾರ, ತಾಳೆ ಹಣ್ಣು ಆಂಥೋಸಯಾನಿನ್ ನಂತಹ ಸ್ತನ ಕ್ಯಾನ್ಸರ್ ಕೋಶಗಳನ್ನು ಅಭಿವೃದ್ಧಿಪಡಿಸುವ ವಿವಿಧ ಗೆಡ್ಡೆಗಳು, ಫೈಟೊಕೆಮಿಕಲ್ ಗಳನ್ನು ತಡೆಯುತ್ತದೆ ಹಾಗಾಗಿ ಮಹಿಳೆಯರು ಈ ಹಣ್ಣುಗಳ ಸೇವನೆ ಮಾಡಬೇಕು.
  • ಹಿಮೋಗ್ಲೋಬಿನ್ ಕಡಿಮೆ ಇರುವವರಿಗೆ ಈ ಹಣ್ಣು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
  • ತಾಳೆ ಹಣ್ಣು, ಬೇಸಿಗೆಯಲ್ಲಿ ಉಂಟಾಗುವ ಚರ್ಮದ ಕಾಯಿಲೆಗಳನ್ನು ತಡೆಗಟ್ಟಲು ಬಹಳ ಉಪಯುಕ್ತವಾಗಿವೆ. ಈ ಹಣ್ಣುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ತೂಕ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಮಲಬದ್ಧತೆ ಮತ್ತು ಅತಿಸಾರ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು.
  • ತಾಳೆ ಹಣ್ಣುಗಳ ಸೇವನೆ ಮಾಡುವುದರಿಂದ ಕರುಳಿನಲ್ಲಿನ ಹುಣ್ಣುಗಳನ್ನು ಸಹ ಗುಣಪಡಿಸಬಹುದು. ನಾಲಿಗೆಯ ಮೇಲೆ ಆಗಾಗ ಕಂಡು ಬರುವ ಹುಣ್ಣುಗಳನ್ನು ಕೂಡ ಕಡಿಮೆ ಮಾಡುವ ಶಕ್ತಿ ಈ ಹಣ್ಣಿಗಿದೆ.
  • ಬೇಸಿಗೆಯಲ್ಲಿ ಹೆಚ್ಚಾಗಿ ಕಂಡು ಬರುವ ಮೊಡವೆಗಳಿಂದ ಮುಕ್ತಿ ಪಡೆಯುವುದರ ಜೊತೆಗೆ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಹಣ್ಣುಗಳ ಸೇವನೆ ಮಾಡಬಹುದು. ಅಲ್ಲದೆ ತಾಳೆ ಹಣ್ಣುಗಳು ಬಿಸಿಲಿನಿಂದ ಉಂಟಾಗುವ ಬೆವರು ಗುಳ್ಳೆಗಳು ಮತ್ತು ಇತರ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿರುವ ನೀರನ್ನು ಚರ್ಮಕ್ಕೆ ಹಚ್ಚಿದರೆ, ಬೆವರು ಬೇಗನೆ ಕಡಿಮೆಯಾಗುತ್ತದೆ.
  • ಎದೆಹಾಲುಣಿಸುವ ತಾಯಂದಿರ ಆರೋಗ್ಯಕ್ಕೆ ಈ ಹಣ್ಣು ಬಹಳ ಒಳ್ಳೆಯದು. ಇದಲ್ಲದೆ, ಮಗುವಿಗೂ ಪೋಷಕಾಂಶಗಳು ಚೆನ್ನಾಗಿ ಸಿಗುತ್ತವೆ. ಈ ಹಣ್ಣಿನ ಸೇವನೆಯಿಂದ ಮಹಿಳೆಯರಲ್ಲಿ ಕಂಡು ಬರುವ ಬಿಳಿ ಮುಟ್ಟಿನ ಸಮಸ್ಯೆಯೂ ಕಡಿಮೆಯಾಗುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ
Image
ತುಂಬಾ ಆಯಾಸ, ನಿಶ್ಯಕ್ತಿಯಾಗಿ ದೇಹದಲ್ಲಿ ಹುಮ್ಮಸ್ಸು ಇಲ್ಲದೆ ಇದ್ದರೆ ಈ ಸಲಹೆ
Image
ಕಾಮಾಲೆ ರೋಗಕ್ಕೆ ಈ ತರಕಾರಿಯ ಬೀಜದಲ್ಲಿದೆ ಮದ್ದು
Image
ಎಡಗೈ ಹೆಚ್ಚಾಗಿ ಬಳಸುವವರಿಗೆ ರೋಗಗಳ ಅಪಾಯ ತಪ್ಪಿದ್ದಲ್ಲ
Image
ಯುವಕರೇ ...9 ಗಂಟೆಗಳ ನಿದ್ರೆ ಮಾಡಲೇಬೇಕು

Published On - 8:48 am, Thu, 20 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ