AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಿಡವನ್ನು ಮನೆಯಲ್ಲಿ ಅಗತ್ಯವಾಗಿ ಬೆಳೆಸಿ, ಆರೋಗ್ಯಕ್ಕೆ ಒಳ್ಳೆಯದು

ದೊಡ್ಡ ಪತ್ರೆ ಎಲೆಗಳು ಮನೆಯಲ್ಲಿದ್ದರೆ ಖಂಡಿತವಾಗಿಯೂ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಏಕೆಂದರೆ ಇದನ್ನು ವಿವಿಧ ರೀತಿಯಲ್ಲಿ ಬಳಕೆ ಮಾಡುವುದರಿಂದ ಹಲವಾರು ರೀತಿಯ ಕಾಯಿಲೆಗಳನ್ನು ಗುಣಪಡಿಸಬಹುದಾಗಿದೆ. ಈ ಎಲೆಗಳು, ಶೀತ ಮತ್ತು ಕೆಮ್ಮಿನಂತಹ ಸಾಮಾನ್ಯ ಸಮಸ್ಯೆಗಳಿಂದ ಹಿಡಿದು ಜೀರ್ಣಕ್ರಿಯೆಗೆ ಸಂಬಂಧಿಸಿದ ಅಸ್ವಸ್ಥತೆಗಳ ವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರಗಳನ್ನು ಒದಗಿಸುತ್ತವೆ. ಹಾಗಾದರೆ ಇದರ ಉಪಯೋಗವೇನು? ಯಾವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಈ ಗಿಡವನ್ನು ಮನೆಯಲ್ಲಿ ಅಗತ್ಯವಾಗಿ ಬೆಳೆಸಿ, ಆರೋಗ್ಯಕ್ಕೆ ಒಳ್ಳೆಯದು
ದೊಡ್ಡಪತ್ರೆImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 17, 2025 | 3:28 PM

Share

ದೊಡ್ಡ ಪತ್ರೆ, ಸಾಂಬಾರ್ ಸೊಪ್ಪು (Doddapatre), ಸಂಬಾರ ಬಳ್ಳಿ, ಸಾಂಬ್ರಾಣಿ ಎಲೆ, ಕರ್ಪೂರವಳ್ಳಿ ಹೀಗೆ ನಾನಾ ಹೆಸರುಗಳಿಂದ ಕರೆಯುವ ಈ ಗಿಡ ಅಮೃತಕ್ಕೆ ಸಮಾನವಾದ ಗುಣಗಳನ್ನು ಹೊಂದಿದೆ. ಮನೆಯ ಹಿತ್ತಲಿನಲ್ಲಿ ಈ ಒಂದು ಗಿಡವಿದ್ದರೆ ಅನೇಕ ರೀತಿಯ ಆರೋಗ್ಯ (Health) ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು. ಹಾಗಾಗಿಯೇ ಔಷಧೀಯ ಸಸ್ಯ (Medicinal plant) ಗಳಲ್ಲಿ ದೊಡ್ಡಪತ್ರೆಗೆ ಬಹಳ ಮಹತ್ವದ ಸ್ಥಾನವಿದೆ. ಈ ಎಲೆಯಿಂದ ಬರುವ ಪರಿಮಳವೇ ಇದರ ಆರೋಗ್ಯ ಗುಣಗಳನ್ನು ಹೇಳುತ್ತವೆ. ಇನ್ನು ಇದರ ಉಪಯೋಗ ಸಾಕಷ್ಟಿದೆ. ಮಕ್ಕಳ ಜ್ವರ (Fever) ಕಡಿಮೆ ಮಾಡುವುದರಿಂದ ಹಿಡಿದು ಚೇಳು ಕಡಿದ ಜಾಗಕ್ಕೆ ಹುಚ್ಚುವವರೆಗೂ ಇದು ಅನೇಕ ರೀತಿಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹಾಗಾಗಿಯೇ ಇದನ್ನು ಮನೆಯಲ್ಲಿ ಬೆಳೆಸುವುದರ ಜೊತೆಗೆ ಇವುಗಳ ಆರೋಗ್ಯ ಪ್ರಯೋಜನ ತಿಳಿದುಕೊಂಡಲ್ಲಿ ಮನೆಮದ್ದುಗಳನ್ನು ಮಾಡಿಕೊಳ್ಳುವ ಮೂಲಕ ಆರೋಗ್ಯ ಸಮಸ್ಯೆಗೆ ಗುಡ್ ಬೈ ಹೇಳಬಹುದು. ಹಾಗಾದರೆ ಇದರ ಉಪಯೋಗವೇನು? ಯಾವ ರೀತಿಯಲ್ಲಿ ಬಳಕೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು ಇಲ್ಲಿದೆ;

  • ದೊಡ್ಡ ಪತ್ರೆ ಅಥವಾ ಸಾಂಬ್ರಾಣಿ ಎಲೆಯ ರಸವು ಶೀತ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಳಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಈ ರಸವನ್ನು ಹಣೆಯ ಮೇಲೆ ಮತ್ತು ಎದೆಯ ಮೇಲೆ ಹಚ್ಚುವುದರಿಂದ ಉಸಿರಾಟ ಸುಲಭವಾಗುತ್ತದೆ.
  • ಈ ಎಲೆಗಳು ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಜೀರ್ಣ, ಮಲಬದ್ಧತೆ ಮತ್ತು ಹೊಟ್ಟೆ ಉರಿಯುವಿಕೆಯಿಂದ ಬಳಲುತ್ತಿರುವವರಿಗೆ ಇದು ಉತ್ತಮ ಪರಿಹಾರವಾಗಿದೆ.
  • ದೊಡ್ಡ ಪತ್ರೆ ಎಲೆಗಳು, ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಬಯಸುವವರಿಗೆ ಪ್ರಯೋಜನಕಾರಿಯಾಗಿದೆ.
  • ಚಿಕ್ಕ ಮಕ್ಕಳಿಗೆ ಜ್ವರ ಬಂದಾಗ ಈ ಎಲೆಗಳನ್ನು ಹೆಚ್ಚಾಗಿ ಉಪಯೋಗಿಸಲಾಗುತ್ತದೆ. ಇದನ್ನು ಸಣ್ಣ ಬೆಂಕಿಯಲ್ಲಿಟ್ಟು ಬಾಡಿಸಿ, ಅದರ ರಸ ತೆಗೆದು ಮಕ್ಕಳಿಗೆ ಕುಡಿಯಲು ನೀಡಬೇಕು. ಬೇಕಾದಲ್ಲಿ ಈ ರಸಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ಕುಡಿಯಲು ನೀಡಬಹುದು. ಇದರಿಂದ ಬೇಗ ಜ್ವರ ಕಡಿಮೆಯಾಗುತ್ತದೆ.
  • ಸಾಂಬ್ರಾಣಿ ಎಲೆಯ ರಸವನ್ನು ಚೇಳು ಕಡಿದ ಜಾಗಕ್ಕೆ ಹಚ್ಚಿದರೆ ನೋವು ನಿವಾರಣೆಯಾಗುತ್ತದೆ.
  • ಒಂದು ವಾರದ ವರೆಗೆ ಪ್ರತಿನಿತ್ಯ ತಪ್ಪದೆ ದೊಡ್ಡಪತ್ರೆ ಎಲೆಯ ರಸವನ್ನು ಸೇವನೆ ಮಾಡಿದಲ್ಲಿ ಹಳದಿ ರೋಗ, ಕಾಮಾಲೆ ನಿವಾರಣೆಯಾಗುತ್ತದೆ.
  • ಬೇಸಿಗೆ ಕಾಲದಲ್ಲಿ ಕಂಡು ಬರುವ ತುರಿಕೆ, ಕಜ್ಜಿ ಅಥವಾ ಬೆವರು ಸಾಲೆಗಳನ್ನು ಕಡಿಮೆ ಮಾಡಲು, ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚಿ.
  • ಸಾಂಬ್ರಾಣಿ ಎಲೆಯ ರಸವನ್ನು ಮೊಸರಿನಲ್ಲಿ ಬೆರೆಸಿ ಮುಖ, ಕೈ- ಕಾಲುಗಳಿಗೆ ಹಚ್ಚಿಕೊಳ್ಳವುದರಿಂದ ಚರ್ಮ ಕಾಂತಿಯುಕ್ತವಾಗುತ್ತದೆ. ಜೊತೆಗೆ ಚರ್ಮದ ಆರೋಗ್ಯವೂ ಚೆನ್ನಾಗಿರುತ್ತದೆ.
  • ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ.
  • ಚಿಕ್ಕ ಮಕ್ಕಳಿಗೆ ಶೀತ, ಜ್ವರ ಬರಬಾರದು ಎಂದರೆ ಅಥವಾ ಕಫ ಆಗಿದ್ದರೆ ಈ ಎಲೆಯನ್ನು ಬೆಂಕಿಯಲ್ಲಿ ಬಾಡಿಸಿ ಮಕ್ಕಳ ತಲೆಯ ಮೇಲಿಟ್ಟು ಬಟ್ಟೆ ಕಟ್ಟಿ ಮಲಗಿಸಬೇಕು. ಈ ರೀತಿ ಮಾಡುವುದರಿಂದ ಎಳೆ ಮಕ್ಕಳಲ್ಲಿ ಶೀತ, ಜ್ವರ, ಕಫ ಕಂಡುಬರುವುದಿಲ್ಲ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
Image
ಕಣ್ಣಿಗೂ ಕ್ಯಾನ್ಸರ್ ಬರುತ್ತಾ? ಹೇಗಿರುತ್ತೆ ಇದರ ಲಕ್ಷಣ
Image
ರಾತ್ರಿ ನೆನಸಿಟ್ಟ ಚಿಯಾ ಬೀಜಗಳ ನೀರು ಕುಡಿದರೆ ಏನಾಗುತ್ತೆ ನೋಡಿ
Image
ಬೋಳುತಲೆ ಪುರುಷರಲ್ಲಿಯೇ ಹೆಚ್ಚಾಗಿ ಕಂಡುಬರುವುದು ಇದೆ ಕಾರಣಕ್ಕೆ
Image
ಇದ್ದಕ್ಕಿದ್ದಂತೆ ಬಿಪಿ ಹೆಚ್ಚಾಗಲು ಈ ತಪ್ಪುಗಳೇ ಕಾರಣ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ