AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mung Beans: ನಿತ್ಯ ಮೊಳಕೆಕಟ್ಟಿದ ಹೆಸರುಕಾಳು ತಿನ್ನುವುದರಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ನೀವು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದರೆ ಅಥವಾ ನಿಮ್ಮ ರೋಗನಿರೋಧಕ ಶಕ್ತಿ ಕುಂದಿದೆ ಎನ್ನುವ ಅನುಭವವಾಗುತ್ತಿದ್ದರೆ ನಿಮ್ಮಲ್ಲಿ ಹೊಸ ಚೈತನ್ಯ ಮೂಡಿಸಲು ಹೆಸರುಕಾಳು ಅತ್ಯುತ್ತಮ ಧಾನ್ಯವಾಗಿದೆ.

Mung Beans: ನಿತ್ಯ ಮೊಳಕೆಕಟ್ಟಿದ ಹೆಸರುಕಾಳು ತಿನ್ನುವುದರಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
Mung Beans
TV9 Web
| Updated By: ನಯನಾ ರಾಜೀವ್|

Updated on:Aug 18, 2022 | 11:27 AM

Share

ನೀವು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದರೆ ಅಥವಾ ನಿಮ್ಮ ರೋಗನಿರೋಧಕ ಶಕ್ತಿ ಕುಂದಿದೆ ಎನ್ನುವ ಅನುಭವವಾಗುತ್ತಿದ್ದರೆ ನಿಮ್ಮಲ್ಲಿ ಹೊಸ ಚೈತನ್ಯ ಮೂಡಿಸಲು ಹೆಸರುಕಾಳು ಅತ್ಯುತ್ತಮ ಧಾನ್ಯವಾಗಿದೆ. ಇದರಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ, ಮೊಳಕೆಕಾಳುಗಳು ಜೀರ್ಣಿಸಿಕೊಳ್ಳಲು ತುಂಬಾ ಹಗುರವಾಗಿದೆ ಮತ್ತು ಸಾತ್ವಿಕ ಆಹಾರವಾಗಿದೆ.

ಆಯುರ್ವೇದವು ಮೂಂಗ್ ದಾಲ್ ಅನ್ನು ಅತ್ಯುತ್ತಮವೆಂದು ಪರಿಗಣಿಸುತ್ತದೆ ಮತ್ತು ಅದರ ಔಷಧೀಯ ಮತ್ತು ವಿಶಿಷ್ಟ ಗುಣಗಳಿಂದಾಗಿ ಊಟದಲ್ಲಿ ಪ್ರತಿದಿನ ಸೇವಿಸಲು ಶಿಫಾರಸು ಮಾಡುತ್ತದೆ . ಇದು ಕಫ ಮತ್ತು ಪಿತ್ತವನ್ನು ಸಮತೋಲನಗೊಳಿಸುತ್ತದೆ ಮತ್ತು ವಾತವನ್ನು ಸ್ವಲ್ಪ ಉಲ್ಬಣಗೊಳಿಸುತ್ತದೆ.

-ಹೆಸರುಕಾಳು ಕಬ್ಬಿಣ, ಪೊಟ್ಯಾಸಿಯಮ್, ಅಮೈನೋ ಏಡ್ಸ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.

– ಹೆಸರು ಕಾಳು ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ

– ಇದು ಒಟ್ಟು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

– ಯಕೃತ್ತಿಗೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ

-ಮೊಳಕೆ ಭರಿಸಿದ ಹೆಸರುಬೇಳೆಯಲ್ಲಿ ಉನ್ನತ ಮಟ್ಟದ ಕಿಣ್ವಗಳು ಇರುವುದು. ಈ ಕಿಣ್ವಗಳು ದೇಹದಲ್ಲಿ ಚಯಾಪಚಯ ಕ್ರಿಯೆ ವೃದ್ಧಿಸಿ, ದೇಹದಲ್ಲಿ ರಾಸಾಯನಿಕ ಪ್ರತಿಕ್ರಿಯೆಯನ್ನು ವೃದ್ಧಿಸಿ, ಜೀರ್ಣಕ್ರಿಯೆಗೆ ನೆರವಾಗುವುದು. ಕಿಣ್ವಗಳು ಆಹಾರವನ್ನು ವಿಘಟಿಸುವುದು ಮತ್ತು ಜೀರ್ಣಕ್ರಿಯೆ ವ್ಯವಸ್ಥೆಯು ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇದರಲ್ಲಿ ಇರುವಂತಹ ಆಹಾರದ ನಾರಿನಾಂಶವು ಜೀರ್ಣಕ್ರಿಯೆಯನ್ನು ನಿಯಂತ್ರಿಸುವುದು.

– ಮಧುಮೇಹ ರೋಗಿಗಳ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಸಹಾಯಕವಾಗಿದೆ.

-ಕ್ಯಾಲೊರಿ ತುಂಬಾ ಕಡಿಮೆಯಿರುವ ಕಾರಣದಿಂದಾಗಿ ತೂಕ ಇಳಿಸಿಕೊಳ್ಳುವ ಆಹಾರ ಕ್ರಮದಲ್ಲಿ ಇದನ್ನು ಚಿಂತೆಯಿಲ್ಲದೆ ಬಳಸಿಕೊಳ್ಳಬಹುದು. ಇದರಲ್ಲಿ ಇರುವಂತಹ ನಾರಿನಾಂಶವು ದೀರ್ಘಕಾಲದ ತನಕ ಹಸಿವಾಗದಂತೆ ನೋಡಿಕೊಳ್ಳುವುದು. ಹೆಚ್ಚು ತಿನ್ನಬೇಕು ಎಂದು ಮೆದುಳಿಗೆ ಹೇಳುವ ಗ್ರೆಲಿನ್ ಹಾರ್ಮೋನು ಬಿಡುಗಡೆಯನ್ನು ಇದು ತಡೆಯುವುದು.

-ಗ್ಲೊಬುಲಿನ್ ಮತ್ತು ಅಲ್ಬುಲಿನ್ ಪ್ರೋಟೀನ್ ನ ಪ್ರಮುಖ ಅಂಶವಾಗಿದೆ. ಮೊಳಕೆಯುಕ್ತ ಹೆಸರುಬೇಳೆಯಲ್ಲಿ ಶೇ.85ರಷ್ಟು ಅಮಿನೋ ಆಮ್ಲವನ್ನು ಇದು ಬಳಸಿಕೊಳ್ಳುವುದು. ಕೋಶಗಳನ್ನು ಬೆಳೆಸಲು ಹಾಗೂ ಸರಿಪಡಿಸಲು ಪ್ರೋಟೀನ್ ಅಗತ್ಯವಾಗಿ ಬೇಕು. ಪ್ರೋಟೀನ್ ನಿಂದ ಮೂಳೆಗಳು, ಸ್ನಾಯುಗಳ, ಚರ್ಮ ಬೆಳೆಯುವುದು.

-ವಿಟಮಿನ್ ಕೆ ಯು ರಕ್ತ ಹೆಪ್ಪುಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದು ಮೂಳೆಯ ಖನಿಜಾಂಶವನ್ನು ನಿಯಂತ್ರಿಸುವುದು ಮತ್ತು ಮೂಳೆ ಸಾಂದ್ರತೆಯನ್ನು ಕಾಪಾಡುವುದು. ಮೊಳೆಕೆಯುಕ್ತ ಹೆಸರುಬೇಳೆಯಲ್ಲಿ ವಿಟಮಿನ್ ಕೆ ಸಮೃದ್ಧವಾಗಿದ್ದು, ಒಂದು ಕಪ್ ನಲ್ಲಿ 34 ಮಿ.ಗ್ರಾಂ.ಇದೆ. ಆರೋಗ್ಯಕರ ದೇಹಕ್ಕೆ ಬೇಕಾಗಿರುವ ದೈನಂದಿನ ಅಗತ್ಯತೆಯ ವಿಟಮಿನ್ ಕೆ ಯನ್ನು ಇದು ಒದಗಿಸುವುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:22 am, Thu, 18 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!