AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಆರೋಗ್ಯಕ್ಕೆ ನೆಲ್ಲಿಕಾಯಿ- ಅಲೋವೆರಾ ಜ್ಯೂಸ್​ ಕುಡಿದು ನೋಡಿ

ನೆಲ್ಲಿಕಾಯಿ -ಅಲೋವೆರಾ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಹೃದಯ, ಮೆದುಳಿನಂತಹ ಪ್ರಮುಖ ಅಂಗಗಳ ಕಾರ್ಯಗಳನ್ನು ವರ್ಧಿಸಲು ಸಹಾಯ ಮಾಡುತ್ತದೆ. ಆಮ್ಲಾ-ಅಲೋವೆರಾ ಜ್ಯೂಸ್ ಕಣ್ಣಿನ ಒತ್ತಡವನ್ನು ಕಡಿಮೆ ಮಾಡುತ್ತದೆ.

ಉತ್ತಮ ಆರೋಗ್ಯಕ್ಕೆ ನೆಲ್ಲಿಕಾಯಿ- ಅಲೋವೆರಾ ಜ್ಯೂಸ್​ ಕುಡಿದು ನೋಡಿ
ನೆಲ್ಲಿಕಾಯಿ- ಅಲೋವೆರಾImage Credit source: farmeasy
ಸುಷ್ಮಾ ಚಕ್ರೆ
|

Updated on: Sep 09, 2023 | 7:15 PM

Share

ಬಹುತೇಕ ಎಲ್ಲರಿಗೂ ಕೋಲ್ಡ್​ ಡ್ರಿಂಕ್ಸ್​, ಸಾಫ್ಟ್​ ಡ್ರಿಂಕ್ಸ್​ಗಳೆಂದರೆ ಇಷ್ಟ. ಆದರೆ, ಅವುಗಳನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ನಮಗೂ ತಿಳಿದಿರುತ್ತದೆ. ನಮ್ಮ ಸುತ್ತಲೂ ಅನೇಕ ಆರೋಗ್ಯಯುತ ಪಾನೀಯಗಳಿವೆ. ಅದರಿಂದ ಆರೋಗ್ಯಕ್ಕೆ ಯಾವುದೇ ಹಾನಿಯೂ ಆಗುವುದಿಲ್ಲ. ಬದಲಾಗಿ ನಮ್ಮ ದೇಹ ಇನ್ನಷ್ಟು ಸದೃಢವಾಗುತ್ತದೆ. ಅಂತಹ ಪಾನೀಯಗಳ ಕಡೆಗೆ ನಾವು ಹೆಚ್ಚಿನ ಆದ್ಯತೆ ನೀಡಬೇಕು. ಅಂಥವುಗಳಲ್ಲಿ ನೆಲ್ಲಿಕಾಯಿ– ಅಲೋವೆರಾ ಜ್ಯೂಸ್ ಕೂಡ ಒಂದು.

ಆಮ್ಲಾ ಮತ್ತು ಅಲೋವೆರಾದ ಜ್ಯೂಸ್ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಉತ್ತಮ ಮಾರ್ಗವಾಗಿದೆ. ಆಮ್ಲಾ ಅಲೋವೆರಾ ಜ್ಯೂಸ್ ಪೌಷ್ಟಿಕಾಂಶದ ಪಾನೀಯವಾಗಿದ್ದು, ನೀವೂ ಒಮ್ಮೆ ಟ್ರೈ ಮಾಡಿ ನೋಡಿ.

ಇದನ್ನೂ ಓದಿ: ಕೂದಲು, ಚರ್ಮ, ಉಗುರಿನ ಆರೋಗ್ಯಕ್ಕೆ ಈ 7 ಆಹಾರ ಸೇವಿಸಿ

ಆಮ್ಲಾ- ಅಲೋವೆರಾ ಜ್ಯೂಸ್​ನ ಉಪಯೋಗಗಳು:

– ಇದು ಮೂತ್ರದ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

– ಇದು ಜೀರ್ಣಕಾರಿ ಗುಣಗಳನ್ನು ಹೊಂದಿರುತ್ತದೆ.

– ಇದು ಜೀರ್ಣಕ್ರಿಯೆ ಸರಾಗಗೊಳಿಸಿ, ಹಸಿವನ್ನು ಪ್ರಚೋದಿಸುತ್ತದೆ.

– ಇದು ಉರಿಯೂತದ ಗುಣಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

– ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

– ಇದು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ಪರಿಣಾಮವನ್ನು ಹೊಂದಿರುತ್ತದೆ.

– ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ.

– ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.

– ಅತಿಸಾರ ವಿರೋಧಿ ಚಟುವಟಿಕೆಯನ್ನು ಹೊಂದಿದೆ.

– ಕ್ಯಾನ್ಸರ್ ವಿರೋಧಿ ಚಟುವಟಿಕೆಯನ್ನು ಹೊಂದಿದೆ.

– ಇಮ್ಯುನಿಟಿ ಬೂಸ್ಟರ್ ಆಗಿ ಕಾರ್ಯನಿರ್ವಹಿಸುತ್ತದೆ.

– ಆಮ್ಲಾ -ಅಲೋವೆರಾ ಜ್ಯೂಸ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಹೃದಯ, ಮೆದುಳಿನಂತಹ ಪ್ರಮುಖ ಅಂಗಗಳ ಕಾರ್ಯಗಳನ್ನು ವರ್ಧಿಸಲು ಸಹಾಯ ಮಾಡುತ್ತದೆ.

– ಆಮ್ಲಾ ಅಲೋವೆರಾ ಜ್ಯೂಸ್ ಕಣ್ಣಿನ ಒತ್ತಡವನ್ನು ಕಡಿಮೆ ಮಾಡುತ್ತದೆ.

– ಅಲೋವೆರಾ ಮತ್ತು ಆಮ್ಲಾ ಜ್ಯೂಸ್ ಅನ್ನು ನಿಂಬೆ ರಸ ಮತ್ತು ಮಿಸ್ರಿ ಜೊತೆಗೆ ಸೇವಿಸುವುದರಿಂದ ಭೇದಿಯನ್ನು ನಿಯಂತ್ರಿಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​