AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MV DIABET: ಮಧುಮೇಹಿಗಳಿಗೆ ಇಲ್ಲಿದೆ ಸಿಹಿ ಸುದ್ದಿ, ನಿಮಗಾಗಿ ಬಂದಿದೆ ಅಪ್ಲಿಕೇಶನ್, ಅದರ ಕಾರ್ಯ ವಿಧಾನ ಹೀಗಿದೆ

ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳ ಕುರಿತು ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಹೊಸದಾಗಿ MV DIABET Application ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

MV DIABET: ಮಧುಮೇಹಿಗಳಿಗೆ ಇಲ್ಲಿದೆ ಸಿಹಿ ಸುದ್ದಿ, ನಿಮಗಾಗಿ ಬಂದಿದೆ ಅಪ್ಲಿಕೇಶನ್, ಅದರ ಕಾರ್ಯ ವಿಧಾನ ಹೀಗಿದೆ
MV DIABET Application
ಅಕ್ಷತಾ ವರ್ಕಾಡಿ
|

Updated on:Feb 12, 2023 | 4:01 PM

Share

ಮಧುಮೇಹಿಗಳಿಗಾಗಿ ಚೆನ್ನೈನ ಎಂವಿ ಆಸ್ಪತ್ರೆ ಮತ್ತು ರಾಯಪುರಂನ ಪ್ರೊ.ಎಂ ವಿಶ್ವನಾಥನ್ ಮಧುಮೇಹ ಸಂಶೋಧನಾ ಕೇಂದ್ರವು ಹೊಸದಾಗಿ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಇದರ ಮೂಲಕ ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಮಸ್ಯೆ ಅಥವಾ ಪ್ರಶ್ನೆಗಳಿದ್ದರೂ ನೀವು ತಜ್ಞರೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಮಧುಮೇಹಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳ ಕುರಿತು ತಜ್ಞರೊಂದಿಗೆ ಸಂಪರ್ಕ ಸಾಧಿಸಲು ಹೊಸದಾಗಿ MV DIABET Application ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ.

ಈ ಅಪ್ಲಿಕೇಶನ್ ಶನಿವಾರ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಮಧುಮೇಹ ತಜ್ಞರಾದ ಡಾ.ವಿಜಯ್ ವಿಶ್ವನಾಥನ್ ಮಾತನಾಡಿ, ಈ ಆ್ಯಪ್ ವಾಟ್ಸಾಪ್ ಸಂಖ್ಯೆಗೆ ಸಂಪರ್ಕಗೊಂಡಿದ್ದು, ನಮ್ಮ ತಂಡ ನಿಮ್ಮ ಎಲ್ಲ ರೀತಿಯ ಸಮಸ್ಯೆ ಆಥವಾ ಪ್ರಶ್ನೆಗಳನ್ನು ಬಗೆಹರಿಸಬಲ್ಲದು ಎಂದು ಹೇಳಿದರು. ಮಧುಮೇಹ ಹೊಂದಿರುವ ರೋಗಿಗಳು ಕೆಲವು ರೀತಿಯ ನರ ಹಾನಿ ಅಥವಾ ನರಗಳಿಗೆ ಸಂಬಂಧಪಟ್ಟ ರೋಗಗಳಿಗೆ ತುತ್ತಾಗುತ್ತಾರೆ. ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಅಧಿಕವಾಗಲು ಕಾರಣವಾಗುತ್ತದೆ. ಇದರಿಂದಾಗಿ ವಿಶೇಷವಾಗಿ ಕಾಲುಗಳಲ್ಲಿನ ರಕ್ತನಾಳಗಳ ಗೋಡೆಗಳಿಗೆ ಹಾನಿಯಾಗುತ್ತದೆ. ಇದು ಸಾಕಷ್ಟು ನೋವುಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಸೆಲೆಬ್ರಿಟಿಗಳು ಫಾಲೋ ಮಾಡುವ ಐಸ್ ವಾಟರ್ ಬಾತ್, ನೀವು ಪ್ರಯತ್ನಿಸುವ ಮೊದಲು ಈ ವಿಷಯ ತಿಳಿದುಕೊಳ್ಳಿ

ಈ ರೀತಿಯ ಸಮಸ್ಯೆಯನ್ನು ನಿರ್ಲಕ್ಷ್ಯಿಸುತ್ತಾ ಹೋದ ಹಾಗೆ ಸಮಸ್ಯೆ ಹೆಚ್ಚಾಗಿ ಕಾಲು ಕೊಳೆತು ಹೋಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದರು. ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ MV DIABET ಎಂಬ ಅಪ್ಲಿಕೇಶನ್ ವಾಟ್ಸ್ ಆಪ್ ಸಂಖ್ಯೆಗೆ ಸಂಪರ್ಕಿಸಲಾಗಿದೆ. ಇದರಿಂದಾಗಿ ಮಧುಮೇಹ ಕಾಲು ರೋಗ ಮತ್ತು ಮಧುಮೇಹದ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 4:00 pm, Sun, 12 February 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ