AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anjeer Benefits: ಈ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ! ಇಲ್ಲಿದೆ ಮಾಹಿತಿ

ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ.

Anjeer Benefits: ಈ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ! ಇಲ್ಲಿದೆ ಮಾಹಿತಿ
ಅಂಜೂರ ಹಣ್ಣು (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 10, 2022 | 7:00 AM

Share

ಅಂಜೂರ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಈ ಹಣ್ಣುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೀವು ಕೂಡ ಪ್ರತಿದಿನ ಅಂಜೂರದ ಹಣ್ಣುಗಳನ್ನು ಸೇವಿಸಿದರೆ, ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಹಸಿ ಅಂಜೂರದ (Anjeer) ಜೊತೆಗೆ ಒಣಗಿದ ಅಂಜೂರದ ಹಣ್ಣುಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ತೂಕ ಇಳಿಸಿಕೊಳ್ಳುವುದರಿಂದ ಇತರೆ ಹಲವು ಸಮಸ್ಯೆಗಳಿಗೆ ಅಂಜೂರವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈ ಲೇಖನದ ಮೂಲಕ ತಿಳಿದುಕೊಳ್ಳೋಣ.

ವೈದ್ಯಕೀಯ ತಜ್ಞರ ಪ್ರಕಾರ ಅಂಜೂರದಲ್ಲಿ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಅಂಜೂರದಲ್ಲಿ ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪ್ರಯೋಜನಕಾರಿ ಖನಿಜಗಳಿವೆ. ಅಂಜೂರವು ಫೈಬರ್, ಪ್ರೋಟೀನ್, ಆಂಟಿ-ಆಕ್ಸಿಡೆಂಟ್ ಮತ್ತು ವಿಟಮಿನ್‌ಗಳ ಉತ್ತಮ ಮೂಲವಾಗಿದೆ.

ಪ್ರಯೋಜನಗಳು: 

  • ಅಂಜೂರದಲ್ಲಿ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಉಪಯುಕ್ತವಾಗಿವೆ. ಅಂಜೂರದಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
  • ಅಂಜೂರದಲ್ಲಿ ಕ್ಯಾಲ್ಸಿಯಂ ಕೂಡ ಸಮೃದ್ಧವಾಗಿದೆ. ನಿಮ್ಮಲ್ಲಿ ಕ್ಯಾಲ್ಸಿಯಂ ಕೊರತೆಯಿದ್ದರೆ ಅಥವಾ ದುರ್ಬಲ ಮೂಳೆಗಳನ್ನು ಹೊಂದಿದ್ದರೆ, ಅಂಜೂರದ ಹಣ್ಣನ್ನು ಹಾಲಿನೊಂದಿಗೆ ಪ್ರತಿದಿನ ಸೇವಿಸಿ.
  • ಅಂಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ಕಬ್ಬಿಣಾಂಶದ ಕೊರತೆ ನಿವಾರಣೆಯಾಗುತ್ತದೆ. ಕಬ್ಬಿಣದ ಅಂಶವು ಸಮೃದ್ಧವಾಗಿರುವುದರಿಂದ ರಕ್ತಹೀನತೆಯಂತಹ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. 
  • ಇದರಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಷಿಯಂನಂತಹ ಖನಿಜಗಳು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯವನ್ನು ಬಲಪಡಿಸುತ್ತದೆ. 
  • ಇದು ಒಮೆಗಾ -3 ಕೊಬ್ಬಿನಾಮ್ಲಗಳನ್ನು ಸಹ ಒಳಗೊಂಡಿದೆ. ಇದು ಪರಿಧಮನಿಯ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. 
  • ಅಂಜೂರವು ದೇಹದಲ್ಲಿನ ಆಮ್ಲವನ್ನು ನಿಯಂತ್ರಿಸುತ್ತದೆ. ಇದರ ಸೇವಿಸುವುದರಿಂದ ಗ್ಯಾಸ್, ಅಸಿಡಿಟಿ ಮತ್ತು ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳು ಗುಣವಾಗುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್