AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕಾಫಿ ಪ್ರಿಯರೇ? ದಿನಕ್ಕೆ 2- 3 ಕಪ್ ಕುಡಿದರೆ ಹೃದಯದ ಆರೋಗ್ಯ ಹೆಚ್ಚಾಗುತ್ತೆ ಎಂದಿದೆ ಅಧ್ಯಯನ

ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೋನೊಲೊಜಿ ಅಂಡ್ ಮೆಟಬೋಲಿಸಂನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಪ್ರತಿದಿನ ಕಾಫಿ ಕುಡಿಯುವವರ ಹೃದಯದ ಆರೋಗ್ಯ, ಕಾಫಿ ಕುಡಿಯದವರ ಅಂದರೆ ಕೆಫೀನ್ ಸೇವಿಸದವರ ಹೃದಯದ ಆರೋಗ್ಯಕ್ಕಿಂತ ಚೆನ್ನಾಗಿದೆ ಎಂಬುದು ಕಂಡು ಬಂದಿದೆ. ಈ ಅಧ್ಯಯನವನ್ನು ಹಲವಾರು ಜನರ ಜೀವನಶೈಲಿ ಆಧಾರದ ಮೇಲೆ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಫಲಿತಾಂಶ ನೀಡಲಾಗಿದೆ.

ನೀವು ಕಾಫಿ ಪ್ರಿಯರೇ? ದಿನಕ್ಕೆ 2- 3 ಕಪ್ ಕುಡಿದರೆ ಹೃದಯದ ಆರೋಗ್ಯ ಹೆಚ್ಚಾಗುತ್ತೆ ಎಂದಿದೆ ಅಧ್ಯಯನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Sep 21, 2024 | 4:34 PM

Share

ನೀವು ಕಾಫಿ ಅಥವಾ ಟೀ ಪ್ರಿಯರಾ? ಹಾಗಾದರೆ ನಿಮಗೆ ಒಂದು ಗುಡ್ ನ್ಯೂಸ್ ಇದೆ. ಎಲ್ಲರೂ ಕಾಫಿ ಅಥವಾ ಟೀ ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವಾಗ ಇದೇನಿದು ಹೊಸ ಸುದ್ದಿ ಎಂದು ಯೋಚಿಸುತ್ತಿದ್ದೀರಾ? ಹೌದು. ದಿನವೊಂದರಲ್ಲಿ ನಿಯಮಿತವಾಗಿ ಕಾಫಿ ಕುಡಿಯುವುದರಿಂದ ಟೈಪ್ 2 ಡಯಾಬಿಟಿಸ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಸ್ಟ್ರೋಕ್ ನಿಂದ ನೀವು ಬಚಾವಾಗಬಹುದಂತೆ!. ಈ ವಿಷಯ ಕೇಳಿ ನಿಮಗೆ ಆಶ್ಚರ್ಯವಾಗಬಹುದು ಆದರೆ ಇದು ನಿಜ.

ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೋನೊಲೊಜಿ ಅಂಡ್ ಮೆಟಬೋಲಿಸಂನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಪ್ರತಿದಿನ ಕಾಫಿ ಕುಡಿಯುವವರ ಹೃದಯದ ಆರೋಗ್ಯ, ಕಾಫಿ ಕುಡಿಯದವರ ಅಂದರೆ ಕೆಫೀನ್ ಸೇವಿಸದವರ ಹೃದಯದ ಆರೋಗ್ಯಕ್ಕಿಂತ ಚೆನ್ನಾಗಿದೆ ಎಂಬುದು ಕಂಡು ಬಂದಿದೆ. ಈ ಅಧ್ಯಯನವನ್ನು ಹಲವಾರು ಜನರ ಜೀವನಶೈಲಿ ಆಧಾರದ ಮೇಲೆ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಫಲಿತಾಂಶ ನೀಡಲಾಗಿದೆ.

ಹೇಗಿತ್ತು ಅಧ್ಯಯನ?

ಕಾಫಿ ಅಥವಾ ಟೀ ಕುಡಿಯುವ ಹವ್ಯಾಸ ಉಳ್ಳ 37- 73 ವರ್ಷದ ಸುಮಾರು 188000 ಜನರನ್ನು ಚೀನಾ ಮತ್ತು ಸ್ವೀಡನ್ನ ಅಧ್ಯಯನಕಾರರು ಸಂಪರ್ಕಿಸಿದ್ದು ಅವರ ಲೈಫ್ ಸ್ಟೈಲ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜೊತೆಗೆ ಅವರ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಅಧ್ಯಯನ ನಡೆಸಿದ್ದಾರೆ. ಸಂಶೋಧಕರು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಿದವರ ಪೈಕಿ ಸುಮಾರು 172000 ಜನರು ತಾವು ನಿಯಮಿತವಾಗಿ ಕಾಫಿ ಅಥವಾ ಟೀ ಸೇವಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶೇಷವೆಂದರೆ ಅವರು ನೀಡಿರುವ ಮಾಹಿತಿಯನ್ನು ಗಮನಿಸಿದಾಗ ಅವರಲ್ಲಿ ಯಾರೊಬ್ಬರಿಗೂ ಹೃದಯ ಸಂಬಂಧಿ ಕಾಯಿಲೆಗಳಾಗಲಿ ಟೈಪ್ 2 ಡಯಾಬಿಟಿಸ್ ಅಥವಾ ಸ್ಟ್ರೋಕ್ ನಂತಹ ಸಮಸ್ಯೆಗಳಾಗಲಿ ಕಂಡು ಬಂದಿಲ್ಲ.

ಇದನ್ನೂ ಓದಿ: ಮುಂಜಾನೆ ಮಾಡುವ ಈ ತಪ್ಪುಗಳು ಲಿವರ್ ಲಿವರ್​​ಗೆ ತೊಂದರೆ ಮಾಡುತ್ತೆ

ಹಾಗಾಗಿ ಈ ಅಧ್ಯಯನಕಾರರು, ನಿಯಮಿತವಾಗಿ ಕಾಫಿ ಅಥವಾ ಟೀ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದಿದ್ದಾರೆ. ಅತಿಯಾಗಿ ಸೇವನೆ ಮಾಡಬಾರದು. ಏಕೆಂದರೆ ಅತಿಯಾದರೆ ಅಮೃತವೂ ವಿಷವಾಗುವುದರಿಂದ ನಿಯಮಿತ ಸೇವನೆ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 3:45 pm, Sat, 21 September 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ