AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಕಾಫಿ ಪ್ರಿಯರೇ? ದಿನಕ್ಕೆ 2- 3 ಕಪ್ ಕುಡಿದರೆ ಹೃದಯದ ಆರೋಗ್ಯ ಹೆಚ್ಚಾಗುತ್ತೆ ಎಂದಿದೆ ಅಧ್ಯಯನ

ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೋನೊಲೊಜಿ ಅಂಡ್ ಮೆಟಬೋಲಿಸಂನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಪ್ರತಿದಿನ ಕಾಫಿ ಕುಡಿಯುವವರ ಹೃದಯದ ಆರೋಗ್ಯ, ಕಾಫಿ ಕುಡಿಯದವರ ಅಂದರೆ ಕೆಫೀನ್ ಸೇವಿಸದವರ ಹೃದಯದ ಆರೋಗ್ಯಕ್ಕಿಂತ ಚೆನ್ನಾಗಿದೆ ಎಂಬುದು ಕಂಡು ಬಂದಿದೆ. ಈ ಅಧ್ಯಯನವನ್ನು ಹಲವಾರು ಜನರ ಜೀವನಶೈಲಿ ಆಧಾರದ ಮೇಲೆ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಫಲಿತಾಂಶ ನೀಡಲಾಗಿದೆ.

ನೀವು ಕಾಫಿ ಪ್ರಿಯರೇ? ದಿನಕ್ಕೆ 2- 3 ಕಪ್ ಕುಡಿದರೆ ಹೃದಯದ ಆರೋಗ್ಯ ಹೆಚ್ಚಾಗುತ್ತೆ ಎಂದಿದೆ ಅಧ್ಯಯನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Sep 21, 2024 | 4:34 PM

Share

ನೀವು ಕಾಫಿ ಅಥವಾ ಟೀ ಪ್ರಿಯರಾ? ಹಾಗಾದರೆ ನಿಮಗೆ ಒಂದು ಗುಡ್ ನ್ಯೂಸ್ ಇದೆ. ಎಲ್ಲರೂ ಕಾಫಿ ಅಥವಾ ಟೀ ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನುವಾಗ ಇದೇನಿದು ಹೊಸ ಸುದ್ದಿ ಎಂದು ಯೋಚಿಸುತ್ತಿದ್ದೀರಾ? ಹೌದು. ದಿನವೊಂದರಲ್ಲಿ ನಿಯಮಿತವಾಗಿ ಕಾಫಿ ಕುಡಿಯುವುದರಿಂದ ಟೈಪ್ 2 ಡಯಾಬಿಟಿಸ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಸ್ಟ್ರೋಕ್ ನಿಂದ ನೀವು ಬಚಾವಾಗಬಹುದಂತೆ!. ಈ ವಿಷಯ ಕೇಳಿ ನಿಮಗೆ ಆಶ್ಚರ್ಯವಾಗಬಹುದು ಆದರೆ ಇದು ನಿಜ.

ಜರ್ನಲ್ ಆಫ್ ಕ್ಲಿನಿಕಲ್ ಎಂಡೋಕ್ರೋನೊಲೊಜಿ ಅಂಡ್ ಮೆಟಬೋಲಿಸಂನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ ಪ್ರತಿದಿನ ಕಾಫಿ ಕುಡಿಯುವವರ ಹೃದಯದ ಆರೋಗ್ಯ, ಕಾಫಿ ಕುಡಿಯದವರ ಅಂದರೆ ಕೆಫೀನ್ ಸೇವಿಸದವರ ಹೃದಯದ ಆರೋಗ್ಯಕ್ಕಿಂತ ಚೆನ್ನಾಗಿದೆ ಎಂಬುದು ಕಂಡು ಬಂದಿದೆ. ಈ ಅಧ್ಯಯನವನ್ನು ಹಲವಾರು ಜನರ ಜೀವನಶೈಲಿ ಆಧಾರದ ಮೇಲೆ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಫಲಿತಾಂಶ ನೀಡಲಾಗಿದೆ.

ಹೇಗಿತ್ತು ಅಧ್ಯಯನ?

ಕಾಫಿ ಅಥವಾ ಟೀ ಕುಡಿಯುವ ಹವ್ಯಾಸ ಉಳ್ಳ 37- 73 ವರ್ಷದ ಸುಮಾರು 188000 ಜನರನ್ನು ಚೀನಾ ಮತ್ತು ಸ್ವೀಡನ್ನ ಅಧ್ಯಯನಕಾರರು ಸಂಪರ್ಕಿಸಿದ್ದು ಅವರ ಲೈಫ್ ಸ್ಟೈಲ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜೊತೆಗೆ ಅವರ ಆರೋಗ್ಯ ಸಮಸ್ಯೆಗಳ ಬಗ್ಗೆಯೂ ಅಧ್ಯಯನ ನಡೆಸಿದ್ದಾರೆ. ಸಂಶೋಧಕರು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಿದವರ ಪೈಕಿ ಸುಮಾರು 172000 ಜನರು ತಾವು ನಿಯಮಿತವಾಗಿ ಕಾಫಿ ಅಥವಾ ಟೀ ಸೇವಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಶೇಷವೆಂದರೆ ಅವರು ನೀಡಿರುವ ಮಾಹಿತಿಯನ್ನು ಗಮನಿಸಿದಾಗ ಅವರಲ್ಲಿ ಯಾರೊಬ್ಬರಿಗೂ ಹೃದಯ ಸಂಬಂಧಿ ಕಾಯಿಲೆಗಳಾಗಲಿ ಟೈಪ್ 2 ಡಯಾಬಿಟಿಸ್ ಅಥವಾ ಸ್ಟ್ರೋಕ್ ನಂತಹ ಸಮಸ್ಯೆಗಳಾಗಲಿ ಕಂಡು ಬಂದಿಲ್ಲ.

ಇದನ್ನೂ ಓದಿ: ಮುಂಜಾನೆ ಮಾಡುವ ಈ ತಪ್ಪುಗಳು ಲಿವರ್ ಲಿವರ್​​ಗೆ ತೊಂದರೆ ಮಾಡುತ್ತೆ

ಹಾಗಾಗಿ ಈ ಅಧ್ಯಯನಕಾರರು, ನಿಯಮಿತವಾಗಿ ಕಾಫಿ ಅಥವಾ ಟೀ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದಿದ್ದಾರೆ. ಅತಿಯಾಗಿ ಸೇವನೆ ಮಾಡಬಾರದು. ಏಕೆಂದರೆ ಅತಿಯಾದರೆ ಅಮೃತವೂ ವಿಷವಾಗುವುದರಿಂದ ನಿಯಮಿತ ಸೇವನೆ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 3:45 pm, Sat, 21 September 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ 7 ಮಂದಿ ಸಚಿವರ ಪಟಲಾಂ ಸಹ ದೌಡು!
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ
ಮೂರಿನ್ ಕಟ್ಟೆ ಧ್ವಂಸವನ್ನು ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ