AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Acidity: ಅಸಿಡಿಟಿಯಿಂದ ಪದೇ ಪದೇ ಬಳಲುತ್ತಿದ್ದೀರಾ? ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಇಲ್ಲವೆಂದಾದರೆ ಅಪಾಯ ತಪ್ಪಿದ್ದಲ್ಲ

Health Tips: ಅಸಿಡಿಟಿಯಿಂದ ಬಳಲುವುದು ಸಾಮಾನ್ಯ ಸಮಸ್ಯೆಯಾಗಿರಬಹುದು. ಆದರೆ ಇದು ಕ್ಯಾನ್ಸರ್​​ಗೂ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

Acidity: ಅಸಿಡಿಟಿಯಿಂದ ಪದೇ ಪದೇ ಬಳಲುತ್ತಿದ್ದೀರಾ? ಕೂಡಲೇ ವೈದ್ಯರನ್ನು ಸಂಪರ್ಕಿಸಿ, ಇಲ್ಲವೆಂದಾದರೆ ಅಪಾಯ ತಪ್ಪಿದ್ದಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 17, 2022 | 7:33 AM

Share

ಅಸಿಡಿಟಿ (Acidity) ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ಅನೇಕರು ಈ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ನಾವು ಸೇವಿಸುವ ಅದರಲ್ಲಿಯೂ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಈ ಅಸಿಡಿಟಿ ಉಂಟಾಗುತ್ತದೆ. ಅಷ್ಟೇ ಅಲ್ಲದೇ ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೂ ಸಹ ಆಮ್ಲೀಯತೆಯು ನೋವುಂಟು ಮಾಡುತ್ತದೆ. ಆದರೆ ಹಲವರಿಗೆ ಮನೆಯಲ್ಲಿ ಊಟ ಮಾಡಿದ ಮೇಲೂ ಅಸಿಡಿಟಿ ಸಮಸ್ಯೆ ಕಾಡುತ್ತದೆ. ಆದರೆ ನಾವು ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗುವ ಅಪಾಯವಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಅದಕ್ಕಾಗಿಯೇ ಔಷಧಿಗಳು ಅಥವಾ ಮನೆಮದ್ದುಗಳ ಮೂಲಕ ಅಸಿಡಿಟಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸೂಚಿಸಲಾಗುತ್ತದೆ. ಇನ್ನೊಂದು ಪ್ರಮುಖ ಅಂಶವೆಂದರೇ ಅಸಿಡಿಟಿ ಸಮಸ್ಯೆ ಕ್ಯಾನ್ಸರ್ಗೆ ಕಾರಣವಾಗಬಹುದು ಎಂದು ಇತ್ತೀಚಿನ ಅನೇಕ ಸಂಶೋಧನೆಗಳು ಬಹಿರಂಗಪಡಿಸಿವೆ. ಹಾಗಾಗಿ ಅಸಿಡಿಟಿ ಸಮಸ್ಯೆಯನ್ನು ಕಡೆಗಣಿಸಬೇಡಿ.

ಇದನ್ನೂ ಓದಿ: Health Tips: ಐದು ಮಸಾಲೆಗಳಲ್ಲಿನ ಆರೋಗ್ಯದ ಪ್ರಯೋಜನಗಳು; ಪೌಷ್ಟಿಕತಜ್ಞರು ಹೇಳುವುದೇನು?

ಅಸಿಡಿಟಿ ಕ್ಯಾನ್ಸರ್​ಗೆ ಕಾರಣವಾಗಬಹುದು?

ಅಸಿಡಿಟಿಯಿಂದ ಬಳಲುವುದು ಸಾಮಾನ್ಯ ಸಮಸ್ಯೆಯಾಗಿರಬಹುದು. ಆದರೆ ಇದು ಕ್ಯಾನ್ಸರ್​​ಗೂ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಇದು ಕ್ರಮೇಣ ಅನ್ನನಾಳದ ಸಮಸ್ಯೆಗೆ ಕಾರಣವಾಗುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪ್ರಸ್ತುತ ಅನೇಕ ಜನರು ಇದೇ ಸಮಸ್ಯೆಯಿಂದ ಬಳಲುತ್ತಿದ್ದು, ಇದನ್ನು ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಡಿಸೀಸ್ (GERD) ಎಂದು ಕರೆಯಲಾಗುತ್ತದೆ. ಕ್ರಮೇಣ ಅನ್ನನಾಳದ ಕ್ಯಾನ್ಸರ್​ಗೆ ಕಾರಣವಾಗುವ ಅಪಾಯವಿದೆ ಎನ್ನಲಾಗಿದೆ. ಇತ್ತೀಚಿನ ಕೆಲವು ಸಂಶೋಧನೆಗಳ ಪ್ರಕಾರ, ಆಮ್ಲೀಯತೆಯನ್ನು ಹೊಂದಿರುವ ಜನರು ಮುಂದೆ ಅನ್ನನಾಳದ ಕ್ಯಾನ್ಸರ್ನಿಂದ ಬಳಲುತ್ತಾರೆ ಎನ್ನುತ್ತಾರೆ ತಜ್ಞರು. ಹೆಚ್ಚಿನ ಸಂದರ್ಭಗಳಲ್ಲಿ, ಅನ್ನನಾಳದ ಕ್ಯಾನ್ಸರ್ ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ನೊಂದಿಗೆ ಸಂಬಂಧಿಸಿದೆ ಎಂದು ಈ ಸಂಶೋಧನೆಯಿಂದ ತಿಳಿದುಬಂದಿದೆ. ಬೊಜ್ಜು ಇರುವವರಿಗೆ ಅಸಿಡಿಟಿಯಿಂದ ಈ ಕಾಯಿಲೆ ಬರುತ್ತದೆ ಎಂದು ಕೂಡ ಹೇಳಲಾಗುತ್ತದೆ.

ತಜ್ಞರ ಸಲಹೆ ಏನು?

  • ಕೆಲವು ಮುನ್ನೆಚ್ಚರಿಕೆಗಳಿಂದ ಅಸಿಡಿಟಿ ಸಮಸ್ಯೆಯನ್ನು ಹೋಗಲಾಡಿಸಬಹುದಾಗಿದೆ. ಆದರೆ ಈ ಸಮಸ್ಯೆಗಳು ಮತ್ತೆ ಮತ್ತೆ ಉದ್ಭವಿಸಿದರೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.
  • ಅದೇ ರೀತಿ ನೀವು ಸೇವಿಸುವ ಆಹಾರದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ಮಲಗುವ 3-4 ಗಂಟೆಗಳ ಮೊದಲು ಆಹಾರವನ್ನು ಸೇವಿಸಬೇಕು.
  • ಈ ಅಸಿಡಿಟಿ ಸಮಸ್ಯೆಯನ್ನು ನಿವಾರಿಸಲು ನೀವು ಮನೆಮದ್ದುಗಳನ್ನು ಸಹ ಪ್ರಯತ್ನಿಸಬಹುದಾಗಿದೆ. ಆಮ್ಲಾ, ಜೀರಿಗೆ ಮತ್ತು ಕಪ್ಪು ಉಪ್ಪನ್ನು ಬಿಸಿನೀರಿನೊಂದಿಗೆ ದಿನಕ್ಕೆ ಒಮ್ಮೆ ಕುಡಿಯಿರಿ.

(ಸೂಚನೆ: ಈ ಮೇಲೆ ನೀಡಿದ ವಿಷಯವು ಮಾಹಿತಿಗಾಗಿ ಮಾತ್ರವಾಗಿದ್ದು, ಟಿವಿ9 ಡಿಜಿಟಲ್​ಗೆ ಸಂಬಂಧಿಸಿರುವುದಿಲ್ಲ. ಸೂಕ್ತ ಮಾರ್ಗದರ್ಶನ ಅಥವಾ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ