ಊಟದ ಬಳಿಕ ಹೊಟ್ಟೆ ಉಬ್ಬರದ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಈ ಸಮಸ್ಯೆಗೆ ಇಂದೇ ವಿದಾಯ ಹೇಳಿ

ನೀವು ಪ್ರತಿದಿನ ಊಟ ಮಾಡಿದ ನಂತರ ಅಥವಾ ಯಾವುದೇ ಆಹಾರವನ್ನು ಸೇವಿಸಿದ ಬಳಿಕ ಹೊಟ್ಟೆ ಉಬ್ಬರುವಿಕೆಯ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಈ ಒಂದು ಪಾನೀಯವನ್ನು ಸೇವನೆ ಮಾಡಿ. ಇದು ಹೊಟ್ಟೆ ಉಬ್ಬುವಿಕೆ ಸಮಸ್ಯೆಗೆ ರಾಮಬಾಣದಂತೆ ಕೆಲಸ ಮಾಡುತ್ತದೆ.

ಊಟದ ಬಳಿಕ  ಹೊಟ್ಟೆ ಉಬ್ಬರದ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ? ಈ ಸಮಸ್ಯೆಗೆ ಇಂದೇ ವಿದಾಯ ಹೇಳಿ
Bloating after MealsImage Credit source: Unsplash
Follow us
| Updated By: ಅಕ್ಷತಾ ವರ್ಕಾಡಿ

Updated on: Aug 03, 2023 | 6:26 PM

ಸಾಕಷ್ಟು ಜನರು ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅನಾರೋಗ್ಯಕರ ಆಹಾರ ಪದ್ಧತಿಯ ಪಾಲನೆ ಇದಕ್ಕೆ ಪ್ರಮುಖ ಕಾರಣವೆಂದು ಹೇಳಬಹುದು. ಇದರ ಹೊರತಾಗಿಯೂ ಅನೇಕ ಜನರು ಎಣ್ಣೆಯಲ್ಲಿ ಕರಿದ ಅಥವಾ ಮಸಾಲೆಯುಕ್ತ ಆಹಾರಗಳ ಸೇವನೆ ಮಾಡದಿದ್ದರೂ ಕೂಡಾ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೀರ್ಣಕ್ರಿಯೆ ಸರಿಯಾಗಿ ಆಗದಿರಲು ಕಾರಣವೆಂದರೆ ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಕೊರತೆ. ಇದರಿಂದಾಗಿ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ ಮತ್ತು ಇದರಿಂದ ಹೊಟ್ಟೆ ಉಬ್ಬರುವಿಕೆ ಹಾಗೂ ಗ್ಯಾಸ್ ಸಮಸ್ಯೆಯೂ ಕಾಡುತ್ತದೆ. ಈ ಸಮಸ್ಯೆ ವಿಪರೀತವಾಗಿ ಕಾಡತೊಡಗಿದಾಗ ವ್ಯಕ್ತಿಯು ಉಸಿರಾಟದ ತೊಂದರೆಯನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಹೊಟ್ಟೆಯಲ್ಲಿ ಊತ ಮತ್ತು ವಿಪರೀತ ಹೊಟ್ಟೆ ನೋವಿಗೂ ಕೂಡ ಇದು ಕಾರಣವಾಗುತ್ತದೆ. ಪ್ರತಿದಿನ ಊಟ ಮಾಡಿದ ಬಳಿಕ ಹೊಟ್ಟೆ ಉಬ್ಬರದ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಈ ಒಂದು ಕಷಾಯವನ್ನು ಸೇವಿಸುವ ಮೂಲಕ ನಿಮ್ಮ ಹೊಟ್ಟೆ ಉಬ್ಬರದ ಸಮಸ್ಯೆಗೆ ವಿದಾಯ ಹೇಳಬಹುದು.

ಹೊಟ್ಟೆ ಉಬ್ಬರದ ಸಮಸ್ಯೆಯನ್ನು ಶಮನ ಮಾಡಲು ಸಹಕಾರಿಯಾಗಿರುವ ಈ ಕಷಾಯ ತಯಾರಿಸಲು ಬೇಕಾಗಿರುವ ಸಾಮಾಗ್ರಿಗಳು:

  • 1 ಇಂಚು ಶುಂಠಿ
  • 1/4 ನಿಂಬೆ ತುಂಡು
  • 1 ಚಮಚ ಸೋಂಪು ಕಾಳು
  • 1 ಏಲಕ್ಕಿ

ಪಾನೀಯವನ್ನು ತಯಾರಿಸುವ ವಿಧಾನ:

ಒಂದು ಪಾತ್ರೆಗೆ ಒಂದು ಲೋಟದಷ್ಟು ನೀರನ್ನು ಹಾಕಿ, ಅದಕ್ಕೆ ಸೋಂಪುಕಾಳುಗಳು, ನಿಂಬೆ ಹೋಳು, ಏಲಕ್ಕಿ ಮತ್ತು ಶುಂಠಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಪಾತ್ರೆಯಲ್ಲಿ ನೀರು ಅರ್ಧದಷ್ಟು ಆವಿಯಾಗುವವರೆಗೆ ಅದನ್ನು ಕುದಿಸಿ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಕುಡಿಯಿರಿ.

ಇದನ್ನೂ ಓದಿ: ಸೋಮವಾರದಂದು ಹೆಚ್ಚು ಹೃದಯಾಘಾತ ಸಂಭವಿಸುವುದು ಯಾಕೆ? ಇಲ್ಲಿದೆ ತಜ್ಞರ ಅಭಿಪ್ರಾಯ

ಈ ಕಷಾಯವನ್ನು ಏಕೆ ಸೇವಿಸಬೇಕು:

ಈ ಪಾನೀಯ ಅಥವಾ ಕಷಾಯದಲ್ಲಿ ಶುಂಠಿ, ನಿಂಬೆ, ಸೋಂಪು, ಏಲಕ್ಕಿ ಇವುಗಳನ್ನೆಲ್ಲಾ ಸೇರಿಸಿರುತ್ತಾರೆ. ಇವೆಲ್ಲವೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೆ ಹಿಂದಿನಿಂದಲೂ ಅನೇಕ ಮನೆಮದ್ದುಗಳಲ್ಲಿ ಈ ಪದಾರ್ಥಗಳನ್ನು ಬಳಕೆ ಮಾಡಲಾಗುತ್ತಿದೆ. ಶುಂಠಿ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಸೋಂಪುಕಾಳುಗಳು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಕಾರಿ. ಮತ್ತು ನಿಂಬೆಯ ಆಮ್ಲೀಯ ಪರಿಣಾಮವು ಆಹಾರದಲ್ಲಿರುವ ಎಣ್ಣೆ ಮತ್ತು ಕೊಬ್ಬನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಈ ಕಾರಣದಿಂದಾಗಿ ಈ ಎಲ್ಲಾ ಮಿಶ್ರಣದ ಪಾನೀಯವು ಹೊಟ್ಟೆ ಉಬ್ಬುವಿಕೆಯ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಕಷಾಯವನ್ನು ಯಾವ ಸಮಯದಲ್ಲಿ ಸೇವಿಸಿದರೆ ಉತ್ತಮ:

ಪ್ರತಿದಿನ ಖಾಲಿಹೊಟ್ಟೆಯಲ್ಲಿ ಈ ಪಾನೀಯವನ್ನು ಸೇವನೆ ಮಾಡುವ ಮೂಲಕ ಜೀರ್ಣಕ್ರಿಯೆಯನ್ನು ಸರಾಗಗೊಳಿಸಬಹುದು ಮತ್ತು ಮಲಬದ್ಧತೆಯ ಸಮಸ್ಯೆಯನ್ನು ಹೋಗಲಾಡಿಸಲು ಇದು ಸಹಾಯ ಮಾಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ