Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 176 ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳ; ಸರ್ಕಾರದ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಿ

ಪ್ರತಿಯೊಬ್ಬ ನಾಗರಿಕರು ಈ ಮೇಳಗಳಿಗೆ ಭೇಟಿ ನೀಡಲು ತಿಳಿಸಲಾಗಿದೆ. ಸರ್ಕಾರ ಒದಗಿಸುತ್ತಿರುವ ಎಲ್ಲಾ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಆಯುಕ್ತರು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಕರ್ನಾಟಕದ 176 ತಾಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳ; ಸರ್ಕಾರದ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಿ
ಆರೋಗ್ಯ ಮೇಳ
Follow us
TV9 Web
| Updated By: ganapathi bhat

Updated on:Apr 18, 2022 | 1:26 PM

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ 176 ತಾಲ್ಲೂಕು ಕೇಂದ್ರಗಳಲ್ಲಿ ಆರೋಗ್ಯ ಮೇಳವನ್ನು ಆಯೋಜಿಸಲಾಗಿದ್ದು, ಪ್ರತಿಯೊಬ್ಬ ನಾಗರಿಕರು ಈ ಮೇಳಗಳಿಗೆ ಭೇಟಿ ನೀಡಲು ತಿಳಿಸಲಾಗಿದೆ. ಸರ್ಕಾರ ಒದಗಿಸುತ್ತಿರುವ ಎಲ್ಲಾ ಆರೋಗ್ಯ ಸೇವೆಗಳನ್ನು ಬಳಸಿಕೊಳ್ಳಲು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಆಯುಕ್ತರು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮದ ವಿವರನ್ನು ಸಹ ನೀಡಲಾಗಿದೆ. ಅದರಂತೆ, ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ, ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್, ಸೂಪರ್ ಸ್ಪೆಷಾಲಿಟಿ ಸೇವೆಗೆ ಉಚಿತ ವಿಶೇಷ ಆರೈಕೆ ಮತ್ತು ಟೆಲಿ ಮೆಡಿಸಿನ್ ಸಮಾಲೋಚನೆ, ಅಸಂಕ್ರಾಮಿಕ ರೋಗಗಳ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ, ಅಸಾಂಕ್ರಾಮಿಕ ರೋಗಗಳು ಮತ್ತು ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ, ಆಯುಷ್ಯ ಆರೈಕೆ ಮತ್ತು ಯೋಗ ಶಿಬಿರ ಇರಲಿದೆ ಎಂದು ತಿಳಿಸಲಾಗಿದೆ.

ಆರೋಗ್ಯ ಮೇಳದಲ್ಲಿ ಏನೇನು ಇರಲಿದೆ?

  • ಅರ್ಹರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ
  • ಡಿಜಿಟಲ್ ಆರೋಗ್ಯ ಗುರುತಿನ ಐಡಿ ಕಾರ್ಡ್
  • ಸೂಪರ್ ಸ್ಪೆಷಾಲಿಟಿ ಸೇವೆಗೆ ಉಚಿತ ವಿಶೇಷ ಆರೈಕೆ ಮತ್ತು ಟೆಲಿ ಮೆಡಿಸಿನ್ ಸಮಾಲೋಚನೆ
  • ಅಸಂಕ್ರಾಮಿಕ ರೋಗಗಳ ಉಚಿತ ಪರೀಕ್ಷೆ ಮತ್ತು ಚಿಕಿತ್ಸೆ
  • ಅಸಾಂಕ್ರಾಮಿಕ ರೋಗಗಳು ಮತ್ತು ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ
  • ಆಯುಷ್ಯ ಆರೈಕೆ ಮತ್ತು ಯೋಗ ಶಿಬಿರ ಇರಲಿದೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ ನಾಲ್ಕನೆ ವರ್ಷಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಆರೋಗ್ಯ ಮೇಳವನ್ನು ಆಯೋಜಿಸಿದೆ. ಮೇಳದಲ್ಲಿ ಸಾರ್ವಜನಿಕರು ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ, ಚಿಕಿತ್ಸೆ ಮಾರ್ಗದರ್ಶನವನ್ನು ಉಚಿತವಾಗಿ ಪಡೆಯಬಹುದು ಎಂದು ತಿಳಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ತಾಲೂಕು ಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಉಚಿತ ಆರೋಗ್ಯ ಮೇಳ ಆಯೋಜಿಸಿದೆ.

ಇದನ್ನೂ ಓದಿ: Health Tips: ಕಡಲೆಕಾಯಿಯ ದುಷ್ಪರಿಣಾಮಗಳು; ಈ ಸಮಸ್ಯೆ ಇರುವವರು ಹೆಚ್ಚು ಶೇಂಗಾ ತಿನ್ನುವುದು ಅಪಾಯಕಾರಿ

ಇದನ್ನೂ ಓದಿ: Health Tips: ಬಾಯಿ ತೆರೆದು ಮಲಗುವ ಅಭ್ಯಾಸ ಇದೆಯೇ? ಅದರಿಂದ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ತಿಳಿಯಿರಿ

Published On - 1:24 pm, Mon, 18 April 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !