AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಪು ಪಾನೀಯಗಳಲ್ಲಿ ಬಳಸಲಾಗುವ ‘ಆಸ್ಪರ್ಟೇಮ್’ ಕ್ಯಾನ್ಸರ್​​ಕಾರಕ ಎಂದು ಘೋಷಿಸಲು ನಿರ್ಧಾರ

ಅನೇಕ ತಂಪು ಪಾನೀಯಗಳಲ್ಲಿ ಕಂಡುಬರುವ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ.

ತಂಪು ಪಾನೀಯಗಳಲ್ಲಿ ಬಳಸಲಾಗುವ 'ಆಸ್ಪರ್ಟೇಮ್' ಕ್ಯಾನ್ಸರ್​​ಕಾರಕ ಎಂದು ಘೋಷಿಸಲು ನಿರ್ಧಾರ
ಆಸ್ಪರ್ಟೇಮ್ ಕೃತಕ ಸಿಹಿಕಾರಕ Image Credit source: Getty Images
ಅಕ್ಷತಾ ವರ್ಕಾಡಿ
|

Updated on:Jun 30, 2023 | 12:54 PM

Share

ಅನೇಕ ತಂಪು ಪಾನೀಯಗಳಲ್ಲಿ ಕಂಡುಬರುವ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ. ಆಸ್ಪರ್ಟೇಮ್ ವಿಶ್ವದಾದ್ಯಂತ  ಸಾಮಾನ್ಯವಾಗಿ ಬಳಸುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಕೃತಕ ಸಿಹಿಕಾರಕವಾಗಿದೆ. ಇದು ಸಾಮಾನ್ಯ ಸಕ್ಕರೆಗಿಂತ ಸರಿಸುಮಾರು 200 ಪಟ್ಟು ಸಿಹಿಯಾಗಿರುತ್ತದೆ. ಇದನ್ನು ಜುಲೈನಲ್ಲಿ ಕ್ಯಾನ್ಸರ್​​​ಕಾರಕ ಎಂದು ಮೊದಲ ಬಾರಿಗೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (IARC) ಪಟ್ಟಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಕೋಕಾ-ಕೋಲಾ ಡಯಟ್ ಸೋಡಾಗಳು, ಮಾರ್ಸ್ ಎಕ್ಸ್‌ಟ್ರಾ ಚೂಯಿಂಗ್ ಗಮ್, ಕೆಲವು ಪಾನೀಯಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಸಿಹಿಕಾರಕವು ಎರಡು ಆಸ್ಪರ್ಟಿಕ್ ಆಮ್ಲ ಮತ್ತು ಫೆನೈಲಾಲನೈನ್ ಎಂಬ ಅಮೈನೋ ಆಮ್ಲಗಳಿಂದ ಮಾಡಲ್ಪಟ್ಟಿದೆ.

ಸಾಮಾನ್ಯವಾಗಿ ಬಳಸಲಾಗುವ ಸಕ್ಕರೆಯಲ್ಲಿ ಸಾಕಷ್ಟು ಕ್ಯಾಲೋರಿಗಳು ಇರುವುದರಿಂದ ಇದಕ್ಕೆ ಪರ್ಯಾಯವಾಗಿ 1965ರಲ್ಲಿ ರಸಾಯನಶಾಸ್ತ್ರಜ್ಞರಾದ ಜೇಮ್ಸ್ ಎಮ್​​ ಸ್ಕ್ಲಾಟರ್ ಈ ಕೃತಕ ಸಿಹಿಕಾರಕವನ್ನು ಕಂಡುಹಿಡಿದರು. ಇದರ ಪರಿಣಾಮ ಅಂದಿನಿಂದ ಇಂದಿನ ವರೆಗೆ ಸಿರಿಧಾನ್ಯಗಳು, ಸಕ್ಕರೆ ಮುಕ್ತ ಚೂಯಿಂಗ್ ಗಮ್, ಕಡಿಮೆ ಕ್ಯಾಲೋರಿ ಹಣ್ಣಿನ ರಸಗಳು ಮತ್ತು ಸೋಡಾಗಳು ಸೇರಿದಂತೆ ಸಾವಿರಾರು ಆಹಾರಗಳು ಮತ್ತು ಪಾನೀಯಗಳಲ್ಲಿ ಆಸ್ಪರ್ಟೇಮ್ ಅನ್ನು ವಿಶ್ವಾದ್ಯಂತ ಸಕ್ಕರೆ ಬದಲಿಯಾಗಿ ಬಳಸಲಾಗುತ್ತಿದೆ.

ಇದನ್ನೂ ಓದಿ: Erectile Dysfunction : ಪುರುಷರಲ್ಲಿ ಕಂಡುಬರುವ ಈ ಲೈಂಗಿಕ ಅಸಮರ್ಥತೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು

ಮೇ ತಿಂಗಳಲ್ಲಿ, ವಿಶ್ವ ಆರೋಗ್ಯ ಸಂಸ್ಥೆ ಕೃತಕ ಸಿಹಿಕಾರಕಗಳ ಬಗ್ಗೆ ಆರೋಗ್ಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗಾ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:51 pm, Fri, 30 June 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?