ತಂಪು ಪಾನೀಯಗಳಲ್ಲಿ ಬಳಸಲಾಗುವ ‘ಆಸ್ಪರ್ಟೇಮ್’ ಕ್ಯಾನ್ಸರ್​​ಕಾರಕ ಎಂದು ಘೋಷಿಸಲು ನಿರ್ಧಾರ

ಅನೇಕ ತಂಪು ಪಾನೀಯಗಳಲ್ಲಿ ಕಂಡುಬರುವ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ.

ತಂಪು ಪಾನೀಯಗಳಲ್ಲಿ ಬಳಸಲಾಗುವ 'ಆಸ್ಪರ್ಟೇಮ್' ಕ್ಯಾನ್ಸರ್​​ಕಾರಕ ಎಂದು ಘೋಷಿಸಲು ನಿರ್ಧಾರ
ಆಸ್ಪರ್ಟೇಮ್ ಕೃತಕ ಸಿಹಿಕಾರಕ Image Credit source: Getty Images
Follow us
|

Updated on:Jun 30, 2023 | 12:54 PM

ಅನೇಕ ತಂಪು ಪಾನೀಯಗಳಲ್ಲಿ ಕಂಡುಬರುವ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ. ಆಸ್ಪರ್ಟೇಮ್ ವಿಶ್ವದಾದ್ಯಂತ  ಸಾಮಾನ್ಯವಾಗಿ ಬಳಸುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಕೃತಕ ಸಿಹಿಕಾರಕವಾಗಿದೆ. ಇದು ಸಾಮಾನ್ಯ ಸಕ್ಕರೆಗಿಂತ ಸರಿಸುಮಾರು 200 ಪಟ್ಟು ಸಿಹಿಯಾಗಿರುತ್ತದೆ. ಇದನ್ನು ಜುಲೈನಲ್ಲಿ ಕ್ಯಾನ್ಸರ್​​​ಕಾರಕ ಎಂದು ಮೊದಲ ಬಾರಿಗೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (IARC) ಪಟ್ಟಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಕೋಕಾ-ಕೋಲಾ ಡಯಟ್ ಸೋಡಾಗಳು, ಮಾರ್ಸ್ ಎಕ್ಸ್‌ಟ್ರಾ ಚೂಯಿಂಗ್ ಗಮ್, ಕೆಲವು ಪಾನೀಯಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಸಿಹಿಕಾರಕವು ಎರಡು ಆಸ್ಪರ್ಟಿಕ್ ಆಮ್ಲ ಮತ್ತು ಫೆನೈಲಾಲನೈನ್ ಎಂಬ ಅಮೈನೋ ಆಮ್ಲಗಳಿಂದ ಮಾಡಲ್ಪಟ್ಟಿದೆ.

ಸಾಮಾನ್ಯವಾಗಿ ಬಳಸಲಾಗುವ ಸಕ್ಕರೆಯಲ್ಲಿ ಸಾಕಷ್ಟು ಕ್ಯಾಲೋರಿಗಳು ಇರುವುದರಿಂದ ಇದಕ್ಕೆ ಪರ್ಯಾಯವಾಗಿ 1965ರಲ್ಲಿ ರಸಾಯನಶಾಸ್ತ್ರಜ್ಞರಾದ ಜೇಮ್ಸ್ ಎಮ್​​ ಸ್ಕ್ಲಾಟರ್ ಈ ಕೃತಕ ಸಿಹಿಕಾರಕವನ್ನು ಕಂಡುಹಿಡಿದರು. ಇದರ ಪರಿಣಾಮ ಅಂದಿನಿಂದ ಇಂದಿನ ವರೆಗೆ ಸಿರಿಧಾನ್ಯಗಳು, ಸಕ್ಕರೆ ಮುಕ್ತ ಚೂಯಿಂಗ್ ಗಮ್, ಕಡಿಮೆ ಕ್ಯಾಲೋರಿ ಹಣ್ಣಿನ ರಸಗಳು ಮತ್ತು ಸೋಡಾಗಳು ಸೇರಿದಂತೆ ಸಾವಿರಾರು ಆಹಾರಗಳು ಮತ್ತು ಪಾನೀಯಗಳಲ್ಲಿ ಆಸ್ಪರ್ಟೇಮ್ ಅನ್ನು ವಿಶ್ವಾದ್ಯಂತ ಸಕ್ಕರೆ ಬದಲಿಯಾಗಿ ಬಳಸಲಾಗುತ್ತಿದೆ.

ಇದನ್ನೂ ಓದಿ: Erectile Dysfunction : ಪುರುಷರಲ್ಲಿ ಕಂಡುಬರುವ ಈ ಲೈಂಗಿಕ ಅಸಮರ್ಥತೆ ಹೃದಯಾಘಾತದ ಅಪಾಯವನ್ನು ಹೆಚ್ಚಿಸಬಹುದು

ಮೇ ತಿಂಗಳಲ್ಲಿ, ವಿಶ್ವ ಆರೋಗ್ಯ ಸಂಸ್ಥೆ ಕೃತಕ ಸಿಹಿಕಾರಕಗಳ ಬಗ್ಗೆ ಆರೋಗ್ಯ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿತ್ತು. ಇದೀಗಾ ಆಸ್ಪರ್ಟೇಮ್ ಎಂಬ ಕೃತಕ ಸಿಹಿಕಾರಕವನ್ನು ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನಾ ಘಟಕವು ಕ್ಯಾನ್ಸರ್ ಕಾರಕ ಎಂದು ಘೋಷಿಸಲು ನಿರ್ಧರಿಸಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:51 pm, Fri, 30 June 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ