AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂದಿಕುಂಬಳಕಾಯಿ ಜ್ಯೂಸ್​ ಕುಡಿದರೆ ಬೊಜ್ಜು ಕರಗುವುದರಲ್ಲಿ ಅನುಮಾನವೇ ಇಲ್ಲ!

ಪ್ರಾಚೀನ ವೈದ್ಯಕೀಯ ಪದ್ಧತಿಗಳಲ್ಲಿ, ಸಂಸ್ಕೃತದಲ್ಲಿ 'ಕೂಷ್ಮಾಂಡ' ಎಂದು ಕರೆಯಲ್ಪಡುವ ಬೂದಿ ಕುಂಬಳಕಾಯಿ ಔಷಧೀಯ ಗುಣಗಳನ್ನು ಹೊಂದಿದೆ. ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾ ಉತ್ಪಾದನೆಯಾಗುತ್ತದೆ.

ಬೂದಿಕುಂಬಳಕಾಯಿ ಜ್ಯೂಸ್​ ಕುಡಿದರೆ ಬೊಜ್ಜು ಕರಗುವುದರಲ್ಲಿ ಅನುಮಾನವೇ ಇಲ್ಲ!
ಬೂದಿ ಕುಂಬಳಕಾಯಿ ಜ್ಯೂಸ್ Image Credit source: iStock
ಸುಷ್ಮಾ ಚಕ್ರೆ
|

Updated on: Sep 27, 2023 | 8:30 PM

Share

ಬೂದಿ ಕುಂಬಳಕಾಯಿ ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹಳ ಉಪಯುಕ್ತವಾದ ತರಕಾರಿಯಾಗಿದೆ. ಇದನ್ನು ಮುಖ್ಯವಾಗಿ ಮಳೆಗಾಲದಲ್ಲಿ ಬೆಳೆಯಲಾಗುತ್ತದೆ. ಜನರು ಇದನ್ನು ಚಳಿಗಾಲದ ಕಲ್ಲಂಗಡಿ ಎಂದೂ ಕರೆಯುತ್ತಾರೆ. ಪ್ರಾಚೀನ ವೈದ್ಯಕೀಯ ಪದ್ಧತಿಗಳಲ್ಲಿ, ಸಂಸ್ಕೃತದಲ್ಲಿ ‘ಕೂಷ್ಮಾಂಡ’ ಎಂದು ಕರೆಯಲ್ಪಡುವ ಬೂದಿ ಕುಂಬಳಕಾಯಿ ಔಷಧೀಯ ಗುಣಗಳನ್ನು ಹೊಂದಿದೆ. ಈ ಕುಂಬಳಕಾಯಿಯ ಹಲ್ವಾ, ಆಗ್ರಾ ಪೇಟ ಬಹಳ ರುಚಿಕರವಾದ ಸಿಹಿತಿಂಡಿಯಾಗಿದೆ. ಈ ಬೂದುಗುಂಬಳಕಾಯಿಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಬೂದಿ ಕುಂಬಳಕಾಯಿಯಲ್ಲಿ ಪೋಷಕಾಂಶಗಳು ಪ್ರೋಟೀನ್‌ಗಳು, ಫ್ಲೇವನಾಯ್ಡ್‌ಗಳು, ಕ್ಯಾರೋಟಿನ್‌ಗಳು, ವಿಟಮಿನ್‌ಗಳು, ಖನಿಜಗಳು ಇವೆ. ಇದು ಮುಖ್ಯವಾಗಿ ಶೇ. 96ರಷ್ಟು ನೀರಿನಿಂದ ಕೂಡಿರುವ ತರಕಾರಿಯಾಗಿದೆ. ಬೂದಿ ಕುಂಬಳಕಾಯಿಯು ಆಲ್ಝೈಮರ್ ಕಾಯಿಲೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ತ್ವಚೆಯ ಸೌಂದರ್ಯ, ಆರೋಗ್ಯಕ್ಕೆ ಮುಲ್ತಾನಿ ಮಿಟ್ಟಿಯಿಂದ ಉಪಯೋಗವೇನು?

ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾ ಉತ್ಪಾದನೆಯಾಗುತ್ತದೆ. ಇದು ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುತ್ತದೆ. ಹಾಗೇ, ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಬೂದಿ ಕುಂಬಳಕಾಯಿ ಜ್ಯೂಸ್ ಜ್ವರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಆಂಜಿಯೋಲೈಟಿಕ್ ಪರಿಣಾಮವನ್ನು ಹೊಂದಿದೆ.

ಬೂದಿ ಕುಂಬಳಕಾಯಿ ಜ್ಯೂಸ್ ಖಿನ್ನತೆ ನಿವಾರಣೆಗೆ ಸಹಾಯಕವಾಗಿದೆ. ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ರಕ್ತದಲ್ಲಿನ ಗ್ಲೂಕೋಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಲಿಪಿಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬೂದಿ ಕುಂಬಳಕಾಯಿ ಜ್ಯೂಸ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ಇದು ಕೊಬ್ಬಿನ ಅಂಶವನ್ನು ಹೊಂದಿರುವುದಿಲ್ಲ. ಹೀಗಾಗಿ, ಮಧುಮೇಹ ಹೊಂದಿರುವ ರೋಗಿಗಳಿಗೆ ಇದು ಉತ್ತಮ ಆಯ್ಕೆಯಾಗಿದೆ. ಬೂದಿ ಕುಂಬಳಕಾಯಿ ಜ್ಯೂಸ್ ತೂಕ ಇಳಿಸಿಕೊಳ್ಳಲು ಸಹಾಯ ಮಾಡಬಹುದು. ಇದರಲ್ಲಿರುವ ಫೈಬರ್ ಅಂಶವು ದೇಹದ ಕೊಬ್ಬನ್ನು ಕರಗಿಸಿ, ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿವೆ ಸರಳ ಸಲಹೆಗಳು

ಬೂದಿ ಕುಂಬಳಕಾಯಿ ಜ್ಯೂಸ್ ಜೀರ್ಣಾಂಗ ಮತ್ತು ಹೊಟ್ಟೆಗೆ ಸಂಬಂಧಿಸಿದ ಹುಣ್ಣಿನಿಂದ ಬಳಲುತ್ತಿರುವ ಜನರ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರುತ್ತದೆ. ಬೂದಿ ಕುಂಬಳಕಾಯಿ ಜ್ಯೂಸ್ ಅನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಹುಣ್ಣುಗಳು ವಾಸಿಯಾಗುತ್ತವೆ. ಇದನ್ನು ಕುಡಿದ ನಂತರ 3 ಗಂಟೆಯ ಬಳಿಕವೇ ಆಹಾರ ಸೇವಿಸಬೇಕು.

ಬೂದಿ ಕುಂಬಳಕಾಯಿ ಜ್ಯೂಸ್ ಕುಡಿಯುವುದರಿಂದ ಫುಡ್ ಪಾಯ್ಸನಿಂಗ್ ಆಗಿದ್ದರೆ ಅದು ಗುಣವಾಗುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ