AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashada Masa 2024: ಆಷಾಢ ಮಾಸದಲ್ಲಿ ಗರ್ಭ ಧರಿಸಬಾರದು ಯಾಕೆ? ಡಾ. ಅಶೋಕ್ ಕೃಷ್ಣ ಭಟ್ ಹೇಳುವುದೇನು?

ಪೂರ್ವಜರು ಕೆಲವು ಪದ್ದತಿಗಳನ್ನು ಅನುಸರಿಸಿಕೊಂಡು ಬಂದಿರುತ್ತಾರೆ. ಕೆಲವೊಂದು ನಮಗೆ ಮೂಢನಂಬಿಕೆ ಎನಿಸಿದರೂ ಅದಕ್ಕೆ ಒಂದು ವೈಜ್ಞಾನಿಕ ಕಾರಣವಿರುತ್ತದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದಲ್ಲ ಎನ್ನುತ್ತಾರೆ. ಅದಕ್ಕಾಗಿಯೇ ಹೊಸದಾಗಿ ಮದುವೆಯಾದ ಜೋಡಿ ಮನೆಯಲ್ಲಿ ಇದ್ದರೆ ಹೆಣ್ಣನ್ನು ತವರು ಮನೆಗೆ ಕಳುಹಿಸುವ ಪದ್ದತಿಯಿದೆ. ಇದು ನಮಗೆ ಅರ್ಥವಿಲ್ಲದ ಆಚರಣೆ ಎನಿಸಬಹುದು. ಆದರೆ ಇದಕ್ಕೆ ಕಾರಣವಿದೆ. ಹಾಗಾದರೆ ಇದರ ಹಿಂದಿರುವ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

Ashada Masa 2024: ಆಷಾಢ ಮಾಸದಲ್ಲಿ ಗರ್ಭ ಧರಿಸಬಾರದು ಯಾಕೆ? ಡಾ. ಅಶೋಕ್ ಕೃಷ್ಣ ಭಟ್ ಹೇಳುವುದೇನು?
ಡಾ. ಅಶೋಕ್ ಕೃಷ್ಣ ಭಟ್
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 19, 2024 | 11:03 AM

Share

ನಮ್ಮ ಪೂರ್ವಜರು ಕೆಲವು ಪದ್ದತಿಗಳನ್ನು ಅನುಸರಿಸಿಕೊಂಡು ಬಂದಿರುತ್ತಾರೆ. ಕೆಲವೊಂದು ನಮಗೆ ಮೂಢನಂಬಿಕೆ ಎನಿಸಿದರೂ ಅದಕ್ಕೆ ಒಂದು ವೈಜ್ಞಾನಿಕ ಕಾರಣವಿರುತ್ತದೆ. ಸಾಮಾನ್ಯವಾಗಿ ಆಷಾಢ ಮಾಸದಲ್ಲಿ ಗರ್ಭ ಧರಿಸಬಾರದು ಒಳ್ಳೆಯದಲ್ಲ ಎನ್ನುತ್ತಾರೆ. ಅದಕ್ಕಾಗಿಯೇ ಹೊಸದಾಗಿ ಮದುವೆಯಾದ ಜೋಡಿ ಮನೆಯಲ್ಲಿ ಇದ್ದರೆ ಹೆಣ್ಣನ್ನು ತವರು ಮನೆಗೆ ಕಳುಹಿಸುವ ಪದ್ದತಿಯಿದೆ. ಇದು ನಮಗೆ ಅರ್ಥವಿಲ್ಲದ ಆಚರಣೆ ಎನಿಸಬಹುದು. ಆದರೆ ಇದಕ್ಕೆ ಕಾರಣವಿದೆ. ಹಾಗಾದರೆ ಇದರ ಹಿಂದಿರುವ ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು? ಇಲ್ಲಿದೆ ಮಾಹಿತಿ.

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು, ಅಥವಾ ಈ ಮಾಸದಲ್ಲಿ ಗರ್ಭ ಧರಿಸುವುದು ಒಳ್ಳೆಯದಲ್ಲ ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಡಾ। ಅಶೋಕ್ ಕೃಷ್ಣ ಭಟ್, ಹಳಕಾರ ಇವರು ಕೆಲವು ವಿಷಯಗಳನ್ನು ಟಿವಿ9 ಜೊತೆ ಹಂಚಿಕೊಂಡಿದ್ದು “ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಅಂದರೆ ಏಪ್ರಿಲ್ ತಿಂಗಳಿನಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಸಮಯದಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ಆರೋಗ್ಯವಾಗಿರಲು ದಿನಕ್ಕೆ ಎಷ್ಟು ಬಾರಿ ಮಲವಿಸರ್ಜನೆ ಮಾಡಬೇಕು? ಅಧ್ಯಯನ ಹೇಳಿದ್ದೇನು?

“ಈ ಆಚರಣೆ ನಮ್ಮಲ್ಲಿ ಅಷ್ಟಾಗಿ ರೂಢಿಯಲ್ಲಿ ಇಲ್ಲ. ಆದರೆ ಇದನ್ನು ಅನುಸರಿಸುವುದು ತುಂಬಾ ಒಳ್ಳೆಯದು. ಆದರೆ ಇದು ಕಡ್ಡಾಯವಲ್ಲ. ಏಪ್ರಿಲ್ ತಿಂಗಳಿನಲ್ಲಿ ಹೆರಿಗೆ ಆದಲ್ಲಿ ಮಗು ಮತ್ತು ತಾಯಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಚಿಕನ್‌ ಪಾಕ್ಸ್‌, ಚರ್ಮದ ಸಮಸ್ಯೆ, ಮಗುವಿನ ಚಟುವಟಿಕೆ ಮಂದವಾಗಿರುವುದು ಅಥವಾ ಮಗುವಿನಲ್ಲಿ ಯಾವುದಾದರೂ ನೂನ್ಯತೆ ಕಂಡು ಬರಬಹುದು. ಆದರೆ ಇದು ಎಲ್ಲರಲ್ಲಿಯೂ ಕಂಡು ಬರಬೇಕು ಎಂಬುದಿಲ್ಲ. ಅವರವರ ದೇಹದ ಪ್ರಕೃತಿ ಬದಲಾವಣೆ ಇರುವುದರಿಂದ ಕೆಲವರಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬರದಿರಬಹುದು. ಇನ್ನು ಬೇರೆ ತಿಂಗಳಿಗೆ ಹೋಲಿಕೆ ಮಾಡಿದರೆ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿಯೇ ಜನಿಸುವವರು ಹೆಚ್ಚಾಗಿರುತ್ತಾರೆ. ಹಾಗಾಗಿ ಈ ಆಚರಣೆ ಸರಿ ಅಥವಾ ತಪ್ಪು ಎನ್ನಲು ಸಾಧ್ಯವಿಲ್ಲ. ಬದಲಾಗಿ ನಂಬಿಕೆ ಇರುವವರು ಆಚರಣೆ ಮಾಡುತ್ತಾರೆ ಇಲ್ಲದವರು ಈ ರೀತಿಯ ಆಚರಣೆಯನ್ನು ಪಾಲನೆ ಮಾಡುವುದಿಲ್ಲ”.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ