AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಜೊತೆಗೆ ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳು ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 19, 2021 | 10:05 AM

Share

ಚಳಿಗಾಲದಲ್ಲಿ ಆರೋಗ್ಯ ಶೀತ, ನೆಗಡಿ, ಜ್ವರದಂತಹ ಕಾಯಿಲೆಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ನೀವು ನಿಮ್ಮ ಆರೋಗ್ಯದ ಬಗ್ಗೆ ಗಮನವಹಿಸಿ. ಅದರಲ್ಲಿಯೂ ಮುಖ್ಯವಾಗಿ ಅಸ್ತಮಾ ರೋಗಿಗಳು ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯವಿರಬೇಕು. ಜೊತೆಗೆ ನೀವು ಸೇವಿಸುವ ಆಹಾರದ ಬಗ್ಗೆ ಗಮನವಿರಲಿ. ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಶ್ವಾಸಕೋಶದಲ್ಲಿ ಕಟ್ಟುವ ಕಫ ಉಸಿರಾಟಕ್ಕೆ ಅಡ್ಡಿಯುಂಟು ಮಾಡುತ್ತದೆ. ಅದು ಚಳಿಗಾಲದ ಶೀತದ ಸಮಯದಲ್ಲಿ ಹೆಚ್ಚಾಗುವುದರಿಂದ ಮೈ ಬೆಚ್ಚಗಿರುವಂತೆ ನೋಡಿಕೊಳ್ಳಿ. ಯಾವಾಗಲೂ ನಿಮಗೆ ವೈದ್ಯರು ಸೂಚಿಸಿರುವ ಔಷಧವನ್ನು ಮತ್ತು ಇನ್ಹೇಲರ್ ಬಳಸಿ.

ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಬದಲಾಗುತ್ತಿರುವ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಆರೋಗ್ಯ ಹದಗೆಟ್ಟಿರಬಹುದು. ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ನೀವು ಸದೃಢರಾಗಿರಲು ವ್ಯಾಯಾಮ ಅವಶ್ಯಕವಾದರೆ ನೀವು ಸೇವಿಸುವ ಪೌಷ್ಟಿಕ ಆಹಾರದ ಮೂಲಕ ನಿಮ್ಮಲ್ಲಿ ಶಕ್ತಿ ಹೆಚ್ಚಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಆಸ್ತಮಾ ರೋಗಿಗಳು ಅನುಸಬೇಕಾದ ಕೆಲವು ಮಾರ್ಗಗಳು ಈ ಕೆಳಗಿನಂತಿದೆ;

*ತೀವ್ರ ಹೊಗೆಯಿಂದ ದೂರವಿರಿ *ಬೆಚ್ಚಗಿನ ಬಟ್ಟೆ ಧರಿಸಿ *ತೀವ್ರ ಚಳಿಯಿದ್ದಾಗ ಹೊರಗಡೆ ತಿರುಗಾಡುವುದನ್ನು ತಪ್ಪಿಸಿ *ಸೂರ್ಯ ಉದಯಿಸಿದ ಬಳಿಕ ಮನೆಯಿಂದ ಹೊರಡಿ, ಸೂರ್ಯ ಮುಳುಗುವ ಒಳಗೆ ನೀವು ಮನೆ ಸೇರಿ *ತುಂಬಾ ಕಠಿಣ ವ್ಯಾಯಾಮ ಬೇಡ. ನಿಯಮಿತ ವ್ಯಾಯಾಮದಲ್ಲಿ ತೊಡಗಿಕೊಳ್ಳಿ *ಇನ್ಹೇಲರ್​ಅನ್ನು ಯಾವಾಗಲೂ ನಿಮ್ಮ ಜೊತೆಯೇ ಇಟ್ಟುಕೊಳ್ಳಿ *ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ನಿಮ್ಮ ವೈದ್ಯರಲ್ಲಿ ಸಲಹೆ ಪಡೆಯಿರಿ

ಇದನ್ನೂ ಓದಿ:

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ