AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ

ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ಜೊತೆಗೆ ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳು ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.

Asthma: ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳೇ ಎಚ್ಚರ! ನಿಮ್ಮ ಆರೋಗ್ಯಕ್ಕಾಗಿ ಈ ಕೆಲವು ಸಲಹೆಗಳು ನೆನಪಿನಲ್ಲಿರಲಿ
ಸಂಗ್ರಹ ಚಿತ್ರ
TV9 Web
| Edited By: |

Updated on: Nov 19, 2021 | 10:05 AM

Share

ಚಳಿಗಾಲದಲ್ಲಿ ಆರೋಗ್ಯ ಶೀತ, ನೆಗಡಿ, ಜ್ವರದಂತಹ ಕಾಯಿಲೆಗಳು ಆಗಾಗ ಕಾಣಿಸಿಕೊಳ್ಳುತ್ತವೆ. ಹೀಗಿರುವಾಗ ನೀವು ನಿಮ್ಮ ಆರೋಗ್ಯದ ಬಗ್ಗೆ ಗಮನವಹಿಸಿ. ಅದರಲ್ಲಿಯೂ ಮುಖ್ಯವಾಗಿ ಅಸ್ತಮಾ ರೋಗಿಗಳು ಈ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯವಿರಬೇಕು. ಜೊತೆಗೆ ನೀವು ಸೇವಿಸುವ ಆಹಾರದ ಬಗ್ಗೆ ಗಮನವಿರಲಿ. ಚಳಿಗಾಲದ ಸಮಯದಲ್ಲಿ ಅಸ್ತಮಾ ರೋಗಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ಶ್ವಾಸಕೋಶದಲ್ಲಿ ಕಟ್ಟುವ ಕಫ ಉಸಿರಾಟಕ್ಕೆ ಅಡ್ಡಿಯುಂಟು ಮಾಡುತ್ತದೆ. ಅದು ಚಳಿಗಾಲದ ಶೀತದ ಸಮಯದಲ್ಲಿ ಹೆಚ್ಚಾಗುವುದರಿಂದ ಮೈ ಬೆಚ್ಚಗಿರುವಂತೆ ನೋಡಿಕೊಳ್ಳಿ. ಯಾವಾಗಲೂ ನಿಮಗೆ ವೈದ್ಯರು ಸೂಚಿಸಿರುವ ಔಷಧವನ್ನು ಮತ್ತು ಇನ್ಹೇಲರ್ ಬಳಸಿ.

ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ಬದಲಾಗುತ್ತಿರುವ ಆಹಾರ ಪದ್ಧತಿಯಲ್ಲಿ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಯ ಮೂಲಕ ಆರೋಗ್ಯ ಹದಗೆಟ್ಟಿರಬಹುದು. ಆರೋಗ್ಯವನ್ನು ಸುಧಾರಿಸಿಕೊಳ್ಳಲು ನೀವು ಪೌಷ್ಟಿಕಾಂಶಯುಕ್ತ ಆಹಾರ ಮತ್ತು ಪ್ರತಿನಿತ್ಯ ನಿಯಮಿತವಾದ ವ್ಯಾಯಾಮ ಅಭ್ಯಾಸ ಮಾಡಿಕೊಳ್ಳುವುದು ಮುಖ್ಯ. ನೀವು ಸದೃಢರಾಗಿರಲು ವ್ಯಾಯಾಮ ಅವಶ್ಯಕವಾದರೆ ನೀವು ಸೇವಿಸುವ ಪೌಷ್ಟಿಕ ಆಹಾರದ ಮೂಲಕ ನಿಮ್ಮಲ್ಲಿ ಶಕ್ತಿ ಹೆಚ್ಚಾಗುತ್ತದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಆಸ್ತಮಾ ರೋಗಿಗಳು ಅನುಸಬೇಕಾದ ಕೆಲವು ಮಾರ್ಗಗಳು ಈ ಕೆಳಗಿನಂತಿದೆ;

*ತೀವ್ರ ಹೊಗೆಯಿಂದ ದೂರವಿರಿ *ಬೆಚ್ಚಗಿನ ಬಟ್ಟೆ ಧರಿಸಿ *ತೀವ್ರ ಚಳಿಯಿದ್ದಾಗ ಹೊರಗಡೆ ತಿರುಗಾಡುವುದನ್ನು ತಪ್ಪಿಸಿ *ಸೂರ್ಯ ಉದಯಿಸಿದ ಬಳಿಕ ಮನೆಯಿಂದ ಹೊರಡಿ, ಸೂರ್ಯ ಮುಳುಗುವ ಒಳಗೆ ನೀವು ಮನೆ ಸೇರಿ *ತುಂಬಾ ಕಠಿಣ ವ್ಯಾಯಾಮ ಬೇಡ. ನಿಯಮಿತ ವ್ಯಾಯಾಮದಲ್ಲಿ ತೊಡಗಿಕೊಳ್ಳಿ *ಇನ್ಹೇಲರ್​ಅನ್ನು ಯಾವಾಗಲೂ ನಿಮ್ಮ ಜೊತೆಯೇ ಇಟ್ಟುಕೊಳ್ಳಿ *ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದರೆ ನಿಮ್ಮ ವೈದ್ಯರಲ್ಲಿ ಸಲಹೆ ಪಡೆಯಿರಿ

ಇದನ್ನೂ ಓದಿ:

Health Tips: ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ? ಇಲ್ಲಿವೆ ಸಲಹೆಗಳು

Health Tips: ವಿಪರೀತ ಬೆನ್ನು ನೋವಿನ ಸಮಸ್ಯೆಯೇ? ಪರಿಹಾರಕ್ಕಾಗಿ ಇಲ್ಲಿದೆ ತಜ್ಞರ ಸಲಹೆಗಳು

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ