Ayurveda Medicine: ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

ಬಾಳಂತಿಯರಿಗೆ, ಈ ಶತಾವರಿ ಗಿಡಮೂಲಿಕೆ ಬಿಟ್ಟರೆ ಇಷ್ಟು ಒಳ್ಳೆಯ ಮತ್ತು ಆರೋಗ್ಯಕ್ಕೆ ಪೂರಕವಾದ ಇನ್ನೊಂದು ಔಷಧ ಸಿಗುವುದಿಲ್ಲ. ಅಲ್ಲದೆ ಇದನ್ನು ತರಕಾರಿಯಾಗಿಯೂ ಬಳಸಲಾಗುತ್ತದೆ. ಏಕೆಂದರೆ ಇದು ತಾಯಿಯ ಎದೆ ಹಾಲು ಹೆಚ್ಚಿಸುವುದರೊಂದಿಗೆ, ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ. ಇದೆಲ್ಲದರ ಜೊತೆಗೆ ಈ ಗಿಡವನ್ನು ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ, ಗರ್ಭಕೋಶದ ಸಮಸ್ಯೆಗೆ, ಮಕ್ಕಳಾಗದಿರುವವರಿಗೆ ಮತ್ತು ಮಕ್ಕಳು ಆದ ಮೇಲೆ ಬಾಳಂತಿಯರಿಗೂ ಇದರ ಚೂರ್ಣವನ್ನು ತಿನ್ನಲು ಕೊಡುತ್ತಾರೆ.

Ayurveda Medicine: ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 28, 2024 | 4:06 PM

ಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ ಬಳಕೆ ಮಾಡುತ್ತಾರೆ. ಆಯುರ್ವೇದದ ಪ್ರಕಾರ, ಕೆಲವು ಗಿಡಮೂಲಿಕೆಗಳು ದೇಹದ ಪ್ರಮುಖ ಕಾಯಿಲೆಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿವೆ. ಅಂತಹ ಔಷಧೀಯ ಗುಣಗಳನ್ನು ಹೊಂದಿರುವ ‘ಶತಾವರಿ’ ಎಂಬ ಶಕ್ತಿಶಾಲಿ ಗಿಡಮೂಲಿಕೆ ಬಗ್ಗೆ ಕೇಳಿದ್ದೀರಾ? ಇದರಿಂದ ಉಪಯೋಗವೇನು? ಯಾವೆಲ್ಲಾ ಕಾಯಿಲೆಗಳನ್ನು ಗುಣಪಡಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ.

ತಾಯಿಯ ಎದೆ ಹಾಲನ್ನು ಹೆಚ್ಚಿಸುತ್ತದೆ

ಸಾಮಾನ್ಯವಾಗಿ ಹೆರಿಗೆ ಆದ ಬಳಿಕ ಕೆಲವು ತಾಯಂದಿರಲ್ಲಿ ಎದೆ ಹಾಲು ಕಡಿಮೆಯಾಗುತ್ತದೆ. ಈ ಸಮಸ್ಯೆಗೆ ಹಲವಾರು ರೀತಿಯ ಔಷಧಿಗಳನ್ನು ಮಾಡಲಾಗುತ್ತದೆ. ಆದರೆ ತಾಯಿ ಎದೆ ಹಾಲು ಕಡಿಮೆಯಾದಾಗ ಅದನ್ನು ಕ್ರಮೇಣವಾಗಿ ಹೆಚ್ಚಿಸಲು ಇರುವ ಅತ್ಯುತ್ತಮ ಗಿಡಮೂಲಿಕೆ ಎಂದರೆ ಅದು ಶತಾವರಿ ಅಥವಾ ಶತಮೂಲಿ. ಇದರ ಚೂರ್ಣ ಅಥವಾ ಪುಡಿಯನ್ನು ಹಾಲಿನೊಂದಿಗೆ ಬೆರೆಸಿಕೊಂಡು ಬೆಳಿಗ್ಗೆ ಮತ್ತು ಸಂಜೆ ಕುಡಿಯುವುದರಿಂದ ಮಗುವಿಗೆ ಎಷ್ಟು ಬೇಕೋ ಅಷ್ಟು ಹಾಲನ್ನು ಉತ್ಪತ್ತಿ ಮಾಡುತ್ತದೆ. ಬಾಳಂತಿಯರಿಗೆ, ಈ ಗಿಡಮೂಲಿಕೆ ಬಿಟ್ಟರೆ ಇಷ್ಟು ಒಳ್ಳೆಯ ಮತ್ತು ಆರೋಗ್ಯಕ್ಕೆ ಪೂರಕವಾದ ಇನ್ನೊಂದು ಔಷಧ ಸಿಗುವುದಿಲ್ಲ. ಇನ್ನು ಈ ಸೊಪ್ಪನ್ನು ದನಗಳಿಗೂ ಕೊಡಲಾಗುತ್ತದೆ. ಅಲ್ಲದೆ ಇದನ್ನು ತರಕಾರಿಯಾಗಿಯೂ ಬಳಸಲಾಗುತ್ತದೆ. ಏಕೆಂದರೆ ಇದು ತಾಯಿಯ ಎದೆ ಹಾಲು ಹೆಚ್ಚಿಸುವುದರೊಂದಿಗೆ, ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ. ಇದೆಲ್ಲದರ ಜೊತೆಗೆ ಈ ಗಿಡವನ್ನು ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ, ಗರ್ಭಕೋಶದ ಸಮಸ್ಯೆಗೆ, ಮಕ್ಕಳಾಗದಿರುವವರಿಗೆ ಮತ್ತು ಮಕ್ಕಳು ಆದ ಮೇಲೆ ಬಾಳಂತಿಯರಿಗೂ ಇದರ ಚೂರ್ಣವನ್ನು ತಿನ್ನಲು ಕೊಡುತ್ತಾರೆ.

ಇದನ್ನೂ ಓದಿ: ಪುರುಷರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಲು ಕಾರಣವೇನು? ಇಲ್ಲಿದೆ ಸರಳ ಸಲಹೆ

ವೀಡಿಯೋ ಇಲ್ಲಿದೆ:

ವೀರ್ಯದ ಗುಣಮಟ್ಟ ಹೆಚ್ಚಿಸುವ ಮೂಲಿಕೆ

ದೈಹಿಕ ಮತ್ತು ಮಾನಸಿಕ ಸೇರಿದಂತೆ ಲೈಂಗಿಕ ಸಮಸ್ಯೆಗಳಿಗೂ ಕೂಡ ಶತಾವರಿ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧ ನೀಡುವ ರೂಢಿ ಇದೆ. ಋತುಬಂಧ, ಹಾರ್ಮೋನುಗಳು, ಫಲವತ್ತತೆ ಮುಂತಾದ ಮಹಿಳೆಯರ ಸಮಸ್ಯೆಗಳಿಗೆ ಇದು ಪರಿಣಾಮಕಾರಿ ಚಿಕಿತ್ಸೆ ನೀಡಬಲ್ಲದು. ಜೊತೆಗೆ ಈ ಮೂಲಿಕೆಯು ವೀರ್ಯದ ಗುಣಮಟ್ಟದಿಂದ ಫಲವತ್ತತೆ ಹೆಚ್ಚಿಸುವವರೆಗೆ ಪುರುಷರಲ್ಲಿ ಅನೇಕ ಲೈಂಗಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?