ಡಯಾಬಿಟಿಸ್ ಇರುವವರು ಯಾಕೆ ಮೊಸರು, ಉಪ್ಪು ಸೇವಿಸಬಾರದು?

ಮಧುಮೇಹ ಇತ್ತೀಚೆಗೆ ಬಹಳ ಸಾಮಾನ್ಯವಾದ ಕಾಯಿಲೆಯಾಗಿದೆ. ಮೊದಲೆಲ್ಲ 50 ವರ್ಷ ಮೇಲ್ಪಟ್ಟವರಿಗೆ ಬಿಪಿ, ಶುಗರ್ ಸಮಸ್ಯೆ ಬರುತ್ತಿತ್ತು. ಆದರೆ, ಈಗ ಹದಿಹರೆಯದವರಿಗೆ ಕೂಡ ಮಧುಮೇಹ ಅಥವಾ ಡಯಾಬಿಟಿಸ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಮಧುಮೇಹಿಗಳು ಮೊಸರು ಮತ್ತು ಬಿಳಿ ಉಪ್ಪನ್ನು ಮಿತವಾಗಿ ಸೇವಿಸಬೇಕು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದಕ್ಕೆ ಕಾರಣವೇನು?

ಡಯಾಬಿಟಿಸ್ ಇರುವವರು ಯಾಕೆ ಮೊಸರು, ಉಪ್ಪು ಸೇವಿಸಬಾರದು?
ಮೊಸರುImage Credit source: iStock
Follow us
|

Updated on: Jan 29, 2024 | 11:43 AM

ಮಧುಮೇಹ ಹೊಂದಿರುವ ಜನರು ಸರಳವಾದ ಕಾರ್ಬೋಹೈಡ್ರೇಟ್‌ಗಳು, ಸಕ್ಕರೆ ಸೇರಿಸಿದ ಪಾನೀಯಗಳು, ಪ್ಯಾಕ್ ಮಾಡಿದ ಆಹಾರ ಮತ್ತು ಕರಿದ ಆಹಾರಗಳನ್ನು ಸೇವಿಸಬಾರದು ಎಂದು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ. ಏಕೆಂದರೆ ಅವುಗಳು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಅಪಾಯ ಹೊಂದಿರುತ್ತವೆ. ಇದು ದೀರ್ಘಾವಧಿಯಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಆದರೆ, ಸಕ್ಕರೆ ಮಟ್ಟವನ್ನು ಹೆಚ್ಚಿಸದ ಕೆಲವು ಆಹಾರಗಳನ್ನು ಕೂಡ ವೈದ್ಯರು ಮಧುಮೇಹಿಗಳಿಗೆ ಮಿತವಾಗಿ ಸೇವಿಸಲು ಸೂಚಿಸುತ್ತಾರೆ. ಅವುಗಳಲ್ಲಿ ಮೊಸರು ಮತ್ತು ಉಪ್ಪು ಕೂಡ ಸೇರಿದೆ.

ಮೊಸರು ಮತ್ತು ಬಿಳಿ ಉಪ್ಪು ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತವೆ. ಈ ಬಗ್ಗೆ ಆಯುರ್ವೇದ ತಜ್ಞರು ತಮ್ಮ ಇತ್ತೀಚಿನ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ದೀರ್ಘಾವಧಿಯ ತೊಡಕುಗಳನ್ನು ತಡೆಗಟ್ಟಲು ಮಧುಮೇಹ ಹೊಂದಿರುವವರು ಅವಾಯ್ಡ್ ಮಾಡಬೇಕಾದ 3 ಆಹಾರಗಳ ಬಗ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧುಮೇಹಿಗಳು ಹಸಿ ಪಾಲಕ್ ತಿನ್ನಬೇಕಾ? ಬೇಯಿಸಿ ಸೇವಿಸಬೇಕಾ?

ಈ ಆಹಾರಗಳು ಮಧುಮೇಹ ಸಮಸ್ಯೆ ಇರುವವರಿಗೆ ತೊಂದರೆ ನೀಡುವುದರಿಂದ ನೀವು ಅವುಗಳನ್ನು ಕಡಿಮೆ ಸೇವಿಸುವುದು ಉತ್ತಮ. ಹಾಗೆಂದು ಈ ಆಹಾರಗಳನ್ನು ಸೇವಿಸಲೇಬಾರದು ಎಂದರ್ಥವಲ್ಲ. ನೀವು ಅವುಗಳನ್ನು ಕೆಲವೊಮ್ಮೆ ಮಿತವಾಗಿ ಸೇವಿಸಬಹುದು. ಅಂತಹ 3 ಆಹಾರಗಳೆಂದರೆ,

1. ಮೊಸರು:

ಮೊಸರು ದೇಹದಲ್ಲಿ ಕಫ ದೋಷವನ್ನು ಹೆಚ್ಚಿಸುತ್ತದೆ. ಹಾಗೇ, ತೂಕವನ್ನು ಕೂಡ ಹೆಚ್ಚಿಸಬಹುದು ಮತ್ತು ಚಯಾಪಚಯವನ್ನು ನಿಧಾನಗೊಳಿಸಬಹುದು. ಆಯುರ್ವೇದ ತಜ್ಞರ ಪ್ರಕಾರ ಮೊಸರು ಪೋಷಕಾಂಶಗಳ ಹೀರಿಕೊಳ್ಳುವಿಕೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಮೊಸರು ನಾವೆಲ್ಲರೂ ಅಂದುಕೊಂಡಂತೆ ತಂಪಾದ ಪದಾರ್ಥವಲ್ಲ. ಅದು ಬಿಸಿ ಪ್ರಕೃತಿಯನ್ನು ಹೊಂದಿರುತ್ತದೆ. ಮೊಸರನ್ನು ಜೀರ್ಣಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಇದು ದೇಹದಲ್ಲಿ ಕಫ ದೋಷವನ್ನು ಹೆಚ್ಚಿಸುತ್ತದೆ. ಕಫ ಹೆಚ್ಚಾದಾಗ, ನೀವು ಹೆಚ್ಚು ತೂಕವನ್ನು ಪಡೆಯುತ್ತೀರಿ. ಆದ್ದರಿಂದ, ಮಧುಮೇಹ, ಸ್ಥೂಲಕಾಯತೆ, ಕೊಲೆಸ್ಟ್ರಾಲ್ ಇರುವವರು ಮೊಸರನ್ನು ಅವಾಯ್ಡ್ ಮಾಡುವುದು ಉತ್ತಮ. ಮೊಸರಿನ ಬದಲಿಗೆ, ಹೆಚ್ಚು ನೀರಿನಿಂದ ತಯಾರಿಸಿದ ಮಜ್ಜಿಗೆ ಸೇವಿಸಬಹುದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

2. ಬಿಳಿ ಉಪ್ಪು:

ಬಿಳಿ ಉಪ್ಪು ನೇರವಾಗಿ ಸಕ್ಕರೆಯ ಮಟ್ಟದ ಏರಿಕೆಗೆ ಕಾರಣವಾಗದಿದ್ದರೂ ಮಧುಮೇಹ ಇರುವವರಲ್ಲಿ ರಕ್ತದೊತ್ತಡದ ಅಪಾಯವನ್ನು ಹೆಚ್ಚಿಸಬಹುದು. ಇದು ಹೃದಯದ ತೊಂದರೆಗಳು, ಮೂತ್ರಪಿಂಡದ ಕಾಯಿಲೆ ಅಥವಾ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಮಧುಮೇಹ ಹೊಂದಿರುವ ಜನರು ಅಧಿಕ ರಕ್ತದೊತ್ತಡದಿಂದ ಪ್ರಭಾವಿತರಾಗುವ ಸಾಧ್ಯತೆಯಿದೆ. ಇದು ಹೃದ್ರೋಗ, ಪಾರ್ಶ್ವವಾಯು, ಮೂತ್ರಪಿಂಡ ಕಾಯಿಲೆ ಮತ್ತು ಇತರ ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಉಪ್ಪು ಸೇವನೆಯು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರುವುದಿಲ್ಲ. ಆದರೂ ಬಿಳಿ ಉಪ್ಪಿನ ಬದಲು ಕಲ್ಲು ಉಪ್ಪು ಅಥವಾ ಹಿಮಾಲಯನ್ ಗುಲಾಬಿ ಉಪ್ಪು ಸೇವಿಸುವುದರಿಂದ ಅಧಿಕ ರಕ್ತದೊತ್ತಡ, ಹೃದ್ರೋಗ ಮತ್ತು ಇತರ ಮಧುಮೇಹ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಧುಮೇಹ ಬಾರದಂತೆ ತಡೆಯಲು ಈ 10 ಆಹಾರ ಸೇವಿಸಿ

3. ಬೆಲ್ಲ:

ಮಧುಮೇಹಿಗಳಿಗೆ ಸಕ್ಕರೆಗೆ ಹೋಲಿಸಿದರೆ ಬೆಲ್ಲವನ್ನು ಸುರಕ್ಷಿತ ಪರ್ಯಾಯವೆಂದು ಪರಿಗಣಿಸಲಾಗಿದೆಯಾದರೂ ಇದು ಕೂಡ ಸಕ್ಕರೆಯ ಮಟ್ಟದ ಏರಿಕೆಗೆ ಕಾರಣವಾಗಬಹುದು. ಮಧುಮೇಹಿಗಳು ಆದಷ್ಟೂ ಸಕ್ಕರೆಯ ಸೆವನೆಯನ್ನು ತಪ್ಪಿಸಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಬೆಲ್ಲವನ್ನು ಸೇವಿಸುವುದರಿಂದ ಸಕ್ಕರೆಯ ಮಟ್ಟದ ಏರಿಕೆಯಾಗಿ ಸಮಸ್ಯೆ ಉಂಟಾಗಬಹುದು. ಬೆಲ್ಲವನ್ನು ರಾಸಾಯನಿಕಗಳಿಲ್ಲದೆ ನೈಸರ್ಗಿಕ ಪ್ರಕ್ರಿಯೆಯಿಂದ ತಯಾರಿಸುವುದರಿಂದ ಇದು ಪೌಷ್ಠಿಕಾಂಶದಿಂದ ಸಮೃದ್ಧವಾಗಿದೆ. ಆದರೆ, ಅದನ್ನು ಮಿತವಾಗಿ ಸೇವಿಸುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು