AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurveda: ಚಿಕನ್ ತಿಂದ ಬಳಿಕ ಹಾಲು ಕುಡಿಯಬಾರದು, ಆಯುರ್ವೇದ ಏನು ಹೇಳುತ್ತೆ?

ಸಾಮಾನ್ಯವಾಗಿ ಯಾವುದೇ ಆಹಾರವನ್ನು ಸೇವಿಸಿದ ಬಳಿಕ ಹಾಲು ಕುಡಿಯುವ ಅಭ್ಯಾಸ ಬಹುತೇಕರಿಗೆ ಇರುತ್ತದೆ. ಆದರೆ ಚಿಕನ್ ಅಥವಾ ಯಾವುದೇ ಮಾಂಸಾಹಾರವನ್ನು ಸೇವಿಸಿದ ಬಳಿಕ ಹಾಲನ್ನು ಕುಡಿಯಬಾರದು ಎಂದು ಆಯುರ್ವೇದ ಹೇಳುತ್ತೆ.

Ayurveda: ಚಿಕನ್ ತಿಂದ ಬಳಿಕ ಹಾಲು ಕುಡಿಯಬಾರದು, ಆಯುರ್ವೇದ ಏನು ಹೇಳುತ್ತೆ?
ChickenImage Credit source: Ang Sarap
TV9 Web
| Edited By: |

Updated on: Jul 04, 2022 | 8:30 AM

Share

ಸಾಮಾನ್ಯವಾಗಿ ಯಾವುದೇ ಆಹಾರವನ್ನು ಸೇವಿಸಿದ ಬಳಿಕ ಹಾಲು ಕುಡಿಯುವ ಅಭ್ಯಾಸ ಬಹುತೇಕರಿಗೆ ಇರುತ್ತದೆ. ಆದರೆ ಚಿಕನ್ ಅಥವಾ ಯಾವುದೇ ಮಾಂಸಾಹಾರವನ್ನು ಸೇವಿಸಿದ ಬಳಿಕ ಹಾಲನ್ನು ಕುಡಿಯಬಾರದು ಎಂದು ಆಯುರ್ವೇದ ಹೇಳುತ್ತೆ. ಹಾಲಿನ ಜತೆಗೆ ಉಪ್ಪು ಬೆರೆಸಿದ ಆಹಾರವು ಆರೋಗ್ಯದ ವಿರುದ್ಧ ಕೆಲಸ ಮಾಡುತ್ತದೆ. ಇದರಿಂದ ಚರ್ಮಕ್ಕೆ ಸಂಬಂಧಿಸಿದ ಸಂಸ್ಯೆಗಳು ನಿಮ್ಮನ್ನು ಕಾಡಬಹುದು.

ಒಂದೊಮ್ಮೆ ಆಹಾರವನ್ನು ಅಸಮತೋಲನವಾಗಿದ್ದರೆ, ವಾತ, ಪಿತ್ತ, ಕಫದ ದೋಷಗಳು ಉಂಟಾಗುತ್ತವೆ. ಚಿಕನ್ ಅಥವಾ ಇತರೆ ಮಾಂಸಾಹಾರದ ಜತೆಗೆ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಮಾಂಸಾಹಾರ ಹಾಗೂ ಹಾಲು ಜೀರ್ಣವಾಗಲು ಪ್ರತ್ಯೇಕ ಶಕ್ತಿಯ ಅಗತ್ಯವಿರುತ್ತದೆ. ಚಿಕನ್​ನಲ್ಲಿ ಪ್ರೊಟೀನ್ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಜೀರ್ಣಕ್ರಿಯೆ ತಡವಾಗುತ್ತದೆ.

ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ವಿಶ್ವದ ಎಲ್ಲೆಡೆ ನಾನ್ ವೆಜ್ ಸೇವಿಸುವ ಜನರು ಹೆಚ್ಚಾಗಿ ಇದ್ದಾರೆ. ಹೇಳುತ್ತಿರುವ ವಿಷಯ ರುಚಿಕರವಾದ ಚಿಕನ್ ಊಟವನ್ನು ಮಾಡಿ, ಕೊನೆಯಲ್ಲಿ ಹಾಲು ಸೇವಿಸುವ ಮಂದಿಗೆ ಹೆಚ್ಚು ಅನ್ವಯವಾಗುತ್ತದೆ. ಏಕೆಂದರೆ ಚಿಕನ್ ಮತ್ತು ಹಾಲನ್ನು ಒಟ್ಟಿಗೆ ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು.

ಹೌದು, ಆಯುರ್ವೇದದ ಪ್ರಕಾರ ಮಾಂಸ ಮತ್ತು ಹಾಲು ಅಥವಾ ಹಾಲಿನ ಉತ್ಪನ್ನಗಳು ಒಂದಕ್ಕೊಂದು ಭಿನ್ನವಾದ ಆಹಾರವಾಗಿದೆ. ಇವು ಹೊಟ್ಟೆಗೆ ಒಟ್ಟಿಗೆ ಸೇರಿದಾಗ ವಿಷಕಾರಿ ವಸ್ತುಗಳನ್ನು ಸೃಷ್ಟಿಸುತ್ತವೆ. ಇದು ಹೊಟ್ಟೆಯ ತೊಂದರೆಗಳಿಗೆ ಮಾತ್ರವಲ್ಲದೆ, ಚರ್ಮದ ಸಮಸ್ಯೆಗಳಿಗೂ ಕಾರಣವಾಗುತ್ತದೆ.

ಮಾಂಸ ಮತ್ತು ಹಾಲು ದೇಹಕ್ಕೆ ಆರೋಗ್ಯಕರ ಎಂದು ಹೇಳಲಾಗುತ್ತದೆಯಾದರೂ, ಅವುಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಆರೋಗ್ಯಕ್ಕೆ ಹಾನಿಕಾರಕ. ಮೊಸರನ್ನು ಚಿಕನ್ನಲ್ಲಿ ನೆನಸಿಟ್ಟಿ ಸೇವಿಸುವುದು ಸಹ ಒಳ್ಳೆಯದಲ್ಲ ಎನ್ನಲಾಗಿದೆ. ನೀವು ಈ ರೀತಿಯಾಗಿ ಆಹಾರವನ್ನು ಸೇವಿಸಿದರೆ, ನಿಮಗೆ ಚರ್ಮದ ಕಾಯಿಲೆಗಳು ಬರಬಹುದು ಎನ್ನುತ್ತಾರೆ ತಜ್ಞರು.

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು