AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ಆರೋಗ್ಯಕರ ತೂಕ ನಷ್ಟಕ್ಕೆ ತಜ್ಞರ ಸಲಹೆಗಳೇನು? ಇಲ್ಲಿದೆ ಮಾಹಿತಿ

ನೀವು ತೂಕ ಇಳಿಸಿಕೊಳ್ಳಲು ಬಯಸಿದ್ದರೆ ತಜ್ಞರು ಕೆಲವೊಂದಿಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಕೆಲವು ವಿಷಯಗಳು ನಿಮ್ಮ ಆರೋಗ್ಯಕರ ತೂಕ ಇಳಿಕೆಗೆ ಸಹಾಯ ಮಾಡುತ್ತವೆ.

Weight Loss: ಆರೋಗ್ಯಕರ ತೂಕ ನಷ್ಟಕ್ಕೆ ತಜ್ಞರ ಸಲಹೆಗಳೇನು? ಇಲ್ಲಿದೆ ಮಾಹಿತಿ
ತೂಕ ಇಳಿಕೆ
TV9 Web
| Edited By: |

Updated on: Nov 26, 2021 | 8:21 AM

Share

ಹೆಚ್ಚುವರಿ ತೂಕದಿಂದ ಫಿಟ್ ಆಗಿಲ್ಲ ಎಂಬುದು ಕೆಲವರಿಗೆ ಚಿಂತೆಯಾದರೆ, ಇನ್ನು ಕೆಲವರಿಗೆ ನೋಡಲು ಸುಂದರವಾಗಿ ಕಾಣಿಸುತ್ತಿಲ್ಲಾ ಎಂಬ ಚಿಂತೆ. ಹೀಗಿರುವಾಗ ಒಂದಲ್ಲಾ ಒಂದು ರೀತಿಯಲ್ಲಿ ದೇಹದ ತೂಕ ಇಳಿಸಿಕೊಳ್ಳಲು ಪ್ರಯತ್ನ ಪಡುತ್ತಲೇ ಇರುತ್ತಾರೆ. ಹೀಗಿರುವಾಗ ಜೀವನ ಶೈಲಿಯಲ್ಲಿ ಅಳವಡಿಸಿಕೊಳ್ಳಬೇಕಾದ ಕೆಲವು ಸರಳ ಕ್ರಮಗಳು ಮತ್ತು ಆಹಾರದಲ್ಲಿನ ಕೆಲವು ಬದಲಾವಣೆಗಳು ತೂಕ ನಷ್ಟಕ್ಕೆ ಸಹಾಯಕಾರಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ನೀವು ದೇಹದ ತೂಕ ಇಳಿಸಿಕೊಳ್ಳಲು ಬಯಸುತ್ತಿದ್ದರೆ, ಜೀವಶೈಲಿಯಲ್ಲಿ ಅಳವಡಿಕೊಳ್ಳಬೇಕಾದ ಈ ಕೆಲವು ವಿಷಯಗಳ ಬಗ್ಗೆ ಗಮನವಹಿಸಬೇಕು. ತಜ್ಞರು ಸೂಚಿಸಿರುವ ಕೆಲವು ವಿಷಯಗಳು ಈ ಕೆಳಗಿನಂತಿವೆ;

ಬೆಲ್ಲ- ಸಕ್ಕರೆ ಸಕ್ಕರೆಯು ಕೇವಲ ಖಾಲಿ ಕ್ಯಾಲೊರಿಗಳಿಂದ ತುಂಬಿದ್ದರೆ, ಬೆಲ್ಲ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತವೆ.

ಬೆಚ್ಚಗಿನ ನೀರು- ತಣ್ಣೀರು ಬೆಚ್ಚಗಿನ ನೀರು ಕುಡಿಯುವುದು ನಿಮ್ಮ ಹೆಚ್ಚುವರಿ ಕ್ಯಾಲೊರಿ ಸುಡಲು ಸಹಾಯಕವಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಜೊತೆಗೆ ಚಯಾಪಚಯವನ್ನು ಸುಧಾರಿಸುತ್ತದೆ.

ನಡೆಯುವ ಅಭ್ಯಾಸ ದಿನವಿಡಿ ಸಕ್ರಿಯರಾಗಿರುವುದು ನಿಮ್ಮ ದೇಹವು ಚಟುವಟಿಕೆಯಿಂದ ಕೂಡಿರಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಹಾಗಾಗಿ ಪ್ರತಿನಿತ್ಯ ನಡೆಯುವ ಅಭ್ಯಾಸ ಮಾಡಿ.

ಹಣ್ಣು ಮತ್ತು ಹಣ್ಣಿನ ರಸ ಹಣ್ಣಿನ ರಸ ಸೇವನೆಯಿಂದ ನೀವು ಫೈಬರ್ ಅಂಶವನ್ನು ಹೆಚ್ಚು ಪಡೆಯುವುದಿಲ್ಲ. ಅದು ದ್ರವವಾಗಿರುವುದರಿಂದ ನೇರವಾಗಿ ಹೊಟ್ಟೆಯನ್ನು ತಲುಪುತ್ತದೆ. ಆದರೆ ಹಣ್ಣುಗಳನ್ನು ನೀವು ಜಗಿಯುವುದರಿಂದ ಫೈಬರ್ ಅಂಶ ಸಿಗುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆ ಸುಧಾರಣೆಗೆ ಸಹಾಯವಾಗುತ್ತದೆ.

ಊಟ ಮಾಡುವುದು – ಊಟ ಬಿಡುವುದು ಮಧ್ಯಾಹ್ನ 10ರ ನಂತರ ಮತ್ತು 2 ಗಂಟೆಯ ಒಳಗೆ ಎಂದಿಗೂ ಊಟವನ್ನು ಬಿಡಬೇಡಿ. ಆ ಸಮಯದಲ್ಲಿ ಚಯಾಪಚಯವು ಉತ್ತಮವಾಗಿರುವುದರಿಂದ ನಿಮ್ಮ ಆರೋಗ್ಯ ಸುಧಾರಣೆಗೆ ಮತ್ತು ಪೌಷ್ಟಿಕಾಂಶಗಳನ್ನು ಪಡೆಯಲು ಸಹಾಯಕ.

ಬೇಗನೆ ಊಟ – ತಡವಾದ ಊಟ ಸೂರ್ಯಾಸ್ತದ ನಂತರ ಚಯಾಪಚಯವು ಕಡಿಮೆಯಾಗುತ್ತದೆ. ಹಾಗಾಗಿ ಊಟವನ್ನು ಬೇಗ ಮಾಡಬೇಕು. (ರಾತ್ರಿ 8 ಗಂಟೆಯ ಮೊದಲು)

ಹೆಚ್ಚಿನ ನಿದ್ರೆ- ಕಡಿಮೆ ನಿದ್ರೆ ಉತ್ತಮ ನಿದ್ರೆಯನ್ನು ನಿರ್ಲಕ್ಷಿಸುವುದರಿಂದ ತೂಕ ನಷ್ಟ ವಿಳಂಬವಾಗುತ್ತದೆ. ತೂಕ ನಷ್ಟದಲ್ಲಿ ತ್ವರಿತ ಫಲಿತಾಂಶವನ್ನು ನೋಡಬೇಕು ನೀವು ಬಯಸುವುದಾದರೆ ರಾತ್ರಿ 10 ಗಂಟೆಗೆ ಮೊದಲು ಮಲಗುವ ಅಭ್ಯಾಸ ಮಾಡಿ.

ದೈನಂದಿನ ವ್ಯಾಯಾಮ ಮಾಡುವುದು ಸರಿಯಾದ ನಿದ್ರೆ, ಒತ್ತಡವನ್ನು ನಿರ್ವಹಿಸುವುದು ಮತ್ತು ಆರೋಗ್ಯಕರ ಆಹಾರದ ಆಯ್ಕೆಗಳೊಂದಿಗೆ ತೂಕ ನಷ್ಟದಲ್ಲಿ ವ್ಯಾಯಾಮವು ಮುಖ್ಯವಾಗಿರುತ್ತದೆ. ಆದ್ದರಿಂದ ನೀವು ವ್ಯಾಯಾಮದಲ್ಲಿ ಯಾವುದನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದು; ಯೋಗ, ನಡಿಗೆ, ಸೈಕ್ಲಿಂಗ್, ಜಿಮ್, ಸ್ವಿಮ್ಮಿಂಗ್ ಇತ್ಯಾದಿ.

ಇದನ್ನೂ ಓದಿ:

Eye Health: ನಿಮ್ಮ ದೃಷ್ಟಿ ಕ್ಷೀಣಿಸುತ್ತಿದೆಯೇ? ಕಣ್ಣುಗಳ ಆರೋಗ್ಯ ಸುರಕ್ಷತೆಗೆ ಇಲ್ಲಿವೆ ಸಲಹೆಗಳು

Child Health: ಮಕ್ಕಳಲ್ಲಿ ತಲೆನೋವಿನ ಸಮಸ್ಯೆ ನಿರ್ಲಕ್ಷ್ಯಿಸಬೇಡಿ; ಮಾನಸಿಕ ಅಸ್ವಸ್ಥತೆಯ ಲಕ್ಷಣವೂ ಆಗಿರಬಹುದು ಎಚ್ಚರ!

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು