AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayurvedic Home remedies: ದೇಹದ ನೋವು, ಒತ್ತಡವನ್ನು ನಿವಾರಿಸಲು ಈ ಆಯುರ್ವೇದ ಮನೆಮದ್ದುಗಳು

ನಿರಂತರವಾಗಿ ದೇಹ ನೋವು ನಿಮಗೆ ಕಾಡುತ್ತಿದ್ದೆಯೇ? ಈ ಆಯುರ್ವೇದ ಮನೆಮದ್ದಿನ ಚಿಕಿತ್ಸೆಯ ಮೂಲಕ ದೇಹ ನೋವು ಹಾಗೂ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.

Ayurvedic Home remedies: ದೇಹದ ನೋವು, ಒತ್ತಡವನ್ನು ನಿವಾರಿಸಲು ಈ ಆಯುರ್ವೇದ ಮನೆಮದ್ದುಗಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 29, 2023 | 5:22 PM

Share

ದೀರ್ಘ ಕಾಲದವರೆಗೆ ಕೆಲಸ ಮಾಡುವುದರಿಂದ ಹಾಗೂ ಹೊರಗಡೆ ಎಲ್ಲಾದರೂ ಹೋಗಿ ಬಂದಾಗ ಹೆಚ್ಚಾಗಿ ದಣಿವು, ದೇಹ ನೋವು ಕಾಣಿಸಿಕೊಳ್ಳುತ್ತದೆ. ನೈಸರ್ಗಿಕವಾಗಿ ದೊರೆಯುವಂತಹ ಕೆಲವೊಂದು ಮನೆಮದ್ದುಗಳು ಈ ದೇಹ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ದಣಿವಿನ ಪರಿಣಾಮಕಾರಿ ನಿರ್ವಹಣೆಗೆ ಸಹಾಯ ಮಾಡುತ್ತದೆ ಎಂದು ಆಯುರ್ವೇದ ಮತ್ತು ಕರುಳಿನ ಆರೋಗ್ಯ ತರಬೇತುದಾರರಾದ ಡಾ. ಡಿಂಪಲ್ ಜಂಗ್ಲಾ ಅವರು ತಮ್ಮ ಇತ್ತೀಚಿನ ಇನ್ಟಾಗ್ರಾಮ್ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ. ಹಾಗೂ ಅವರು ದೇಹದ ನೋವಿಗೆ ಕೆಲವು ಪರಿಣಾಮಕಾರಿ ಆಯುರ್ವೇದ ಪರಿಹಾರಗಳನ್ನು ಹಂಚಿಕೊಂಡಿದ್ದಾರೆ.

ಅರಶಿನ: ಅರಶಿನವು ಉರಿಯೂತ ಮತ್ತು ನೋವನ್ನು ನಿವಾರಿಸುವ ಗುಣವನ್ನು ಹೊಂದಿದ್ದು, ಅದು ದೇಹದ ನೋವಿನ ವಿರುದ್ಧ ಹೋರಾಡಲು ಮತ್ತು ಒಟ್ಟಾರೆ ಆರೋಗ್ಯ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಒಂದು ಲೋಟ ಬಿಸಿ ಹಾಲಿಗೆ ಚಮಚ ಅರಶಿನ ಸೇರಿಸಿ ಚೆನ್ನಾಗಿ ಬೆರೆಸಿ ಕುಡಿಯಿರಿ.

ಅಭ್ಯಂಗ ಮಸಾಜ್: ಅಭ್ಯಂಗ ಎಂದರೆ ಆಯುರ್ವೇದ ದೇಹದ ಮಸಾಜ್. ಇದು ಸ್ನಾಯುಗಳ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಿಂದ ಸ್ನಾಯುಗಳು ಸಡಿಲಗೊಂಡು ದೇಹದ ರಕ್ತ ಪರಿಚಲನೆಯು ಸುಧಾರಿಸುತ್ತದೆ. ಇದಕ್ಕಾಗಿ ಸಾಸಿವೆ ಎಣ್ಣೆ ಅಥವಾ ಎಳ್ಳೆಣ್ಣೆಯನ್ನು ಬಿಸಿ ಮಾಡಿ ಸಂಪೂರ್ಣ ದೇಹಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ.

ಇದನ್ನೂ ಓದಿ: Ayurveda beauty: ನಿಮ್ಮ ತ್ವಚೆ, ಕೂದಲಿಗೆ ರಕ್ಷಣೆ ನೀಡುತ್ತದೆ ಈ ಆಯುರ್ವೇದ ಉತ್ಪನ್ನಗಳು

ಶುಂಠಿ: ಶುಂಠಿಯು ಫೈಟೊಕೆಮಿಸ್ಟಿ ಅಂಶವನ್ನು ಹೊಂದಿದೆ. ಮತ್ತು ಇದು ಉರಿಯೂತ ವಿರೋಧಿ ಗುಣಲಕ್ಷಣವನ್ನು ಹೊಂದಿದೆ. ಇವುಗಳು ದೇಹದ ನೋವನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. 1 ಅಥವಾ 2 ಇಂಚು ಕತ್ತರಿಸಿದ ಶುಂಠಿಯನ್ನು ಒಂದು ಕಪ್ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ, ಆ ನೀರನ್ನು ಸೇವಿಸಿ.

ಸಾಸಿವೆ ಎಣ್ಣೆ: ಸಾಸಿವೆ ಎಣ್ಣೆಯಲ್ಲಿ ಅಲೈಲ್ ಐಸೋಥಿಯೋಸೈನೇಟ್ ಎಂಬ ಸಂಯುಕ್ತವಿದ್ದು, ಇದು ದೇಹದಲ್ಲಿ ಉರಿಯೂತದಿಂದ ಉಂಟಾಗುವ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹಕ್ಕೆ ಸಾಸಿವೆ ಎಣ್ಣೆಯನ್ನು ಹಚ್ಚಿ ಮಸಾಜ್ ಚೆನ್ನಾಗಿ ಮಾಡಿ ಹಾಗೂ 30 ನಿಮಿಷಗಳ ಬಳಿಕ ಸ್ನಾನ ಮಾಡಿ. ಈ ಮೂಲಕ ದೇಹದ ನೋವನ್ನು ನಿವಾರಿಸಿಕೊಳ್ಳಬಹುದು.

Published On - 5:21 pm, Wed, 29 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ