
ಯೋಗ ಗುರು ಮತ್ತು ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಬಹಳ ಹಿಂದಿನಿಂದಲೂ ಆಯುರ್ವೇದವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಸ್ಥಳೀಯ ಮತ್ತು ಆರೋಗ್ಯಕರ ಆಹಾರವನ್ನು ಸೇವಿಸುವಂತೆ ನಿರಂತರವಾಗಿ ಶಿಫಾರಸು ಮಾಡುತ್ತಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಫಿಟ್ನೆಸ್ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಪೋಸ್ಟ್ಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ರಾಮದೇವ್ ಸ್ವತಃ ಸೇವಿಸುವ ಅನೇಕ ಆರೋಗ್ಯಕರ ಆಹಾರಗಳ ಪಾಕವಿಧಾನಗಳನ್ನು ಸಹ ಅವರು ಹಂಚಿಕೊಳ್ಳುತ್ತಾರೆ. ಸಾಂಪ್ರದಾಯಿಕ ಚಳಿಗಾಲದ ಧಾನ್ಯಗಳು ಮತ್ತು ತರಕಾರಿಗಳು ದೇಹವನ್ನು ಒಳಗಿನಿಂದ ಬಲಪಡಿಸುತ್ತವೆ ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತವೆ ಎಂಬುದು ಅವರ ಅನಿಸಿಕೆ. ಈ ಬಾರಿ, ಬಾಬಾ ರಾಮದೇವ್ ಆರೋಗ್ಯಕರ ಪಿಜ್ಜಾ ತಯಾರಿಸಲು ಪಾಕವಿಧಾನವನ್ನು ಹಂಚಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ, ಫಾಸ್ಟ್ ಫುಡ್ ಮತ್ತು ಜಂಕ್ ಫುಡ್ ತಿನ್ನುವ ಪ್ರವೃತ್ತಿ ಸಾಕಷ್ಟು ವ್ಯಾಪಕವಾಗಿದೆ. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಪಿಜ್ಜಾವನ್ನು ಇಷ್ಟಪಡುತ್ತಾರೆ. ಆದಾಗ್ಯೂ, ಅದರಲ್ಲಿ ಬಳಸುವ ಹಿಟ್ಟು, ಸಾಸ್ ಮತ್ತು ಚೀಸ್ ನಿಧಾನವಾಗಿ ನಿಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಚಳಿಗಾಲದ ಸೂಪರ್ಫುಡ್ ಬಳಸಿ ನೀವು ಮನೆಯಲ್ಲಿ ರುಚಿಕರವಾದ ಮತ್ತು ಆರೋಗ್ಯಕರ ಪಿಜ್ಜಾವನ್ನು ತಯಾರಿಸಬಹುದು. ಅದರ ಪ್ರಯೋಜನಗಳೇನು ಮತ್ತು ಅದನ್ನು ಹೇಗೆ ತಯಾರಿಸಬೇಕೆಂಬುದರ ವಿವರ ಇಲ್ಲಿದೆ.
ಇದನ್ನೂ ಓದಿ: ಜ್ಞಾನ ಭಾರತಂ ಮಿಷನ್ನ ಕ್ಲಸ್ಟರ್ ಸೆಂಟರ್ ಆಗಿ ಪತಂಜಲಿ ವಿವಿಗೆ ಮಾನ್ಯತೆ
ಬಾಬಾ ರಾಮದೇವ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮಾರುಕಟ್ಟೆಯಲ್ಲಿ ಲಭ್ಯವಿರುವ ಪಿಜ್ಜಾ ಬಗ್ಗೆ ಮಾತನಾಡಿದ್ದಾರೆ. ಒಮ್ಮೆ ತಾನು ಅದನ್ನು ತಿನ್ನಲು ಪ್ರಯತ್ನಿಸಿದ್ಉದ, ಅದು ತನಗೆ ಇಷ್ಟವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಜನರು ಪಿಜ್ಜಾವನ್ನು ಜೀರ್ಣಿಸಿಕೊಳ್ಳಲು, ಅದರ ಜೊತೆಗೆ ಕೋಲ್ಡ್ ಡ್ರಿಂಕ್ಸ್ ಅನ್ನೂ ಕುಡಿಯುತ್ತಾರೆ. ಇದು ಹೊಟ್ಟೆಗೆ ಎಷ್ಟು ಹಾನಿಕಾರಕ ಎಂಬುದನ್ನು ಊಹಿಸಬಹುದು. ಇದಕ್ಕೆ ಬದಲಾಗಿ, ನೀವು ಮನೆಯಲ್ಲಿಯೇ ಆರೋಗ್ಯಕರ, ದೇಸಿ ಪಿಜ್ಜಾವನ್ನು ತಯಾರಿಸಬಹುದು. ಇದು ನಿಮ್ಮ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ.
ಬಾಬಾ ರಾಮದೇವ್ ಅವರು ಹಂಚಿಕೊಂಡ ಪೋಸ್ಟ್
ಈ ವಿಡಿಯೋದಲ್ಲಿ ಬಾಬಾ ರಾಮದೇವ್ ಅವರು ಸಿರಿಧಾನ್ಯಗಳಲ್ಲೊಂದಾದ ಬಾಜ್ರಾದ ರೋಟಿ ಬಳಸಿ ಪಿಜ್ಜಾ ತಯಾರಿಸುವುದು ಹೇಗೆ ಎಂದು ತೋರಿಸಿಕೊಟ್ಟಿದ್ದಾರೆ. ಇದು ದೇಹವನ್ನು ಬೆಚ್ಚಗಿಡಲು ಸಹಾಯವಾಗುತ್ತದಾದ್ದರಿಂದ ಇದನ್ನು ಚಳಿಗಾಲದ ಸೂಪರ್ಫುಡ್ ಎಂದು ಪರಿಗಣಿಸಲಾಗಿದೆ. ಈ ದೇಸಿ ಪಿಜ್ಜಾ ಮಾಡಲು, ಬಾಜರಾ ರೊಟ್ಟಿ ತಯಾರಿಸಿ, ಅದಕ್ಕೆ ಚೀಸ್ ಬದಲಿಗೆ ಮೇಲೆ ಬೆಣ್ಣೆಯನ್ನು ಹರಡಿ. ನಂತರ, ಮನೆಯಲ್ಲಿ ತಯಾರಿಸಿದ ಚಟ್ನಿಯನ್ನು ಹರಡಿ ಮತ್ತು ಅದರ ಮೇಲೆ ತರಕಾರಿಗಳನ್ನು ಹಾಕಿ. ಅಲ್ಲಿಗೆ, ನಿಮ್ಮ ದೇಸಿ ಮತ್ತು ಆರೋಗ್ಯಕರ ಪಿಜ್ಜಾ ಸಿದ್ಧವಾದಂತೆ.
ಇದನ್ನೂ ಓದಿ: ಚಳಿಗಾಲದಲ್ಲಿ ಆರೋಗ್ಯ ಕಾಪಾಡುವ ಆಹಾರ ಬಾಜ್ರಾ ಚುರ್ಮಾ: ಬಾಬಾ ರಾಮದೇವ್ಗೆ ಪ್ರಿಯವಾದ ತಿಂಡಿಯೂ ಇದು
ಬಾಜ್ರಾ ಧಾನ್ಯ ಪೋಷಕಾಂಶಗಳ ಉಗ್ರಾಣವಾಗಿದೆ. ಇದರಲ್ಲಿ ಫೈಬರ್, ಪ್ರೋಟೀನ್, ಕಬ್ಬಿಣ, ಮೆಗ್ನೀಸಿಯಮ್, ವೈಟಮಿನ್ ಮತ್ತು ಆ್ಯಂಟಿ ಆಕ್ಸಿಡೆಂಟ್ಸ್ ಸೇರಿದಂತೆ ಅನೇಕ ಅಗತ್ಯ ಪೋಷಕಾಂಶಗಳಿವೆ. ಇದು ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ರಕ್ತಹೀನತೆಯನ್ನು ಎದುರಿಸಲು ಸಹಾಯ ಮಾಡುತ್ತದೆ. ಇದು ಆರೋಗ್ಯಕ್ಕೆ, ಅದರಲ್ಲೂ ವಿಶೇಷವಾಗಿ ಚಳಿಗಾಲದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 9:23 pm, Thu, 18 December 25