AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಬಾಯಿಯ ದುರ್ವಾಸನೆ ನಿವಾರಣೆಗೆ 5 ಪದಾರ್ಥಗಳು

ಸಾಮಾನ್ಯವಾಗಿ, ಅಜೀರ್ಣದಿಂದ ಹೊಟ್ಟೆ ಸ್ವಚ್ಛವಾಗಿಲ್ಲದಿದ್ದರೂ ಮತ್ತು ಹಾಲಿನಿಂದ ತಯಾರಿಸಿದ ಆಹಾರವನ್ನು ಸೇವಿಸಿದ ನಂತರ ಸರಿಯಾಗಿ ಬಾಯಿ ತೊಳೆಯದಿದ್ದರೂ ಬಾಯಿಯ ದುರ್ವಾಸನೆ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ ಹಲ್ಲು ಹಾಗೂ ನಾಲಿಗೆಯನ್ನು ಶುಚಿಗೊಳಿಸಿದರೂ ಬಾಯಿ ದುರ್ವಾಸನೆ ಬರುತ್ತಿದ್ದರೆ ಎಚ್ಚರಿಕೆ ವಹಿಸಬೇಕು.

Health News: ಬಾಯಿಯ ದುರ್ವಾಸನೆ ನಿವಾರಣೆಗೆ 5 ಪದಾರ್ಥಗಳು
ಅಕ್ಷತಾ ವರ್ಕಾಡಿ
|

Updated on: Aug 21, 2024 | 6:23 PM

Share

ಬಾಯಿಯ ದುರ್ವಾಸನೆಯಿಂದಾಗಿ ಹೆಚ್ಚಿನ ಜನರು ತಮ್ಮ ಪ್ರೀತಿಪಾತ್ರರ ಜೊತೆ ಮಾತನಾಡಲು ಮತ್ತು ಬೆರೆಯಲು ಹಿಂಜರಿಯುತ್ತಾರೆ. ರಾತ್ರಿ ಮಲಗುವ ಮುನ್ನ ಹಲ್ಲುಜ್ಜಿದರೂ ಬೆಳಗ್ಗೆ ಬಾಯಿ ಕೆಟ್ಟ ವಾಸನೆ ಬರುತ್ತದೆ. ಏಕೆಂದರೆ ಬಾಯಿಯಲ್ಲಿ ಯಾವಾಗಲೂ ಬ್ಯಾಕ್ಟೀರಿಯಾ ಇರುತ್ತದೆ. ರಾತ್ರಿಯಲ್ಲಿ ಬಾಯಿಯಲ್ಲಿ ಲಾಲಾರಸದ ಪ್ರಮಾಣವು ಸಾಮಾನ್ಯಕ್ಕಿಂತ ಕಡಿಮೆಯಿರುವುದರಿಂದ, ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತವೆ ಮತ್ತು ದುರ್ವಾಸನೆ ಉಂಟುಮಾಡುತ್ತವೆ. ಬಾಯಿಯ ಸೋಂಕು ಹೆಚ್ಚಾಗಿ ಬಾಯಿಯ ದುರ್ವಾಸನೆ ಉಂಟಾಗುತ್ತದೆ.

ಸಾಮಾನ್ಯವಾಗಿ, ಅಜೀರ್ಣದಿಂದ ಹೊಟ್ಟೆ ಸ್ವಚ್ಛವಾಗಿಲ್ಲದಿದ್ದರೂ ಮತ್ತು ಡೈರಿ ಆಹಾರವನ್ನು ಸೇವಿಸಿದ ನಂತರ ಸರಿಯಾಗಿ ಬಾಯಿ ತೊಳೆಯದಿದ್ದರೂ ಈ ಸಮಸ್ಯೆ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ ಹಲ್ಲು ಹಾಗೂ ನಾಲಿಗೆಯನ್ನು ಶುಚಿಗೊಳಿಸಿದರೂ ಬಾಯಿ ದುರ್ವಾಸನೆ ಬರುತ್ತಿದ್ದರೆ ಎಚ್ಚರಿಕೆ ವಹಿಸಬೇಕು. ಇದು ಗಂಭೀರ ಕಾಯಿಲೆಗಳ ಸಂಕೇತವಾಗಿರಬಹುದು. ನಂತರ ನೀವು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಮನೆಯಲ್ಲಿಯೇ ಈ ಸಮಸ್ಯೆಯನ್ನು ನಿವಾರಿಸುವುದು ಹೇಗೆ..?

ನಿಂಬೆ:

ಬಾಯಿಯ ದುರ್ವಾಸನೆ ಹೋಗಲಾಡಿಸುವಲ್ಲಿ ನಿಂಬೆ ರಸ ಉತ್ತಮ ಅಂಶವಾಗಿದೆ. ತಿಂದ ನಂತರ ಒಂದು ಲೋಟ ನೀರಿಗೆ ನಿಂಬೆರಸ ಬೆರೆಸಿ ಕುಡಿಯುವುದರಿಂದ ಬಾಯಿ ದುರ್ವಾಸನೆ ಹೋಗಲಾಡಿಸುತ್ತದೆ. ಅಲ್ಲದೆ ತಿಂದ ಆಹಾರ ಜೀರ್ಣವಾಗಲು ಸಹಕಾರಿ.

ವೀಳ್ಯದೆಲೆ:

ಹಿರಿಯರಿಗೆ ಊಟವಾದ ಮೇಲೆ ವೀಳ್ಯದೆಲೆ ಹಾಕುವ ಅಭ್ಯಾಸವಿತ್ತು. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಮಾತ್ರವಲ್ಲದೆ ಬಾಯಿಯ ದುರ್ವಾಸನೆ ಹೋಗಲಾಡಿಸುವ ಶಕ್ತಿಯನ್ನೂ ಹೊಂದಿದೆ.

ಏಲಕ್ಕಿ:

ಮಸಾಲೆಯಾಗಿ ಬಳಸಲಾಗುವ ಏಲಕ್ಕಿಯನ್ನು ಚಹಾಗಳಲ್ಲಿ ಮತ್ತು ಅದರ ಸುಂದರವಾದ ಪರಿಮಳಕ್ಕಾಗಿ ಅಡುಗೆಗಳಲ್ಲಿ ಬಳಸಲಾಗುತ್ತದೆ. ತಿಂದ ನಂತರ ಅಥವಾ ಯಾರೊಂದಿಗಾದರೂ ಮಾತನಾಡಿದ ನಂತರ ನಿಮಗೆ ಬಾಯಿಯ ದುರ್ವಾಸನೆ ಇದ್ದರೆ, ನೀವು ಏಲಕ್ಕಿಯನ್ನು ಅಗಿಯಬಹುದು.

ಇದನ್ನೂ ಓದಿ: ಚಾಕೊಲೇಟ್​, ಚೂಯಿಂಗ್ ಗಮ್ ಬದಲಿಗೆ ಪ್ರತಿದಿನ ಒಂದೆರಡು ಲವಂಗ ಜಗಿಯಿರಿ

ಲವಂಗ:

ಲವಂಗವು ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಹಲ್ಲಿನ ಸಮಸ್ಯೆಗಳಲ್ಲಿ ನೋವನ್ನು ನಿವಾರಿಸಲು ಲವಂಗವನ್ನು ಸಹ ಬಳಸಲಾಗುತ್ತದೆ. ಇದರಲ್ಲಿರುವ ಯುಜೆನಾಲ್ ಬಾಯಿಯ ದುರ್ವಾಸನೆ ಹೋಗಲಾಡಿಸಲು ತುಂಬಾ ಸಹಕಾರಿ.

ಸೋಂಪು:

ದೊಡ್ಡ 5 ಸ್ಟಾರ್ ಹೋಟೆಲ್‌ಗಳಿಂದ ಹಿಡಿದು ಸಣ್ಣ ಬಿರಿಯಾನಿ ಅಂಗಡಿಯವರೆಗೂ ಅವರು ಊಟದ ನಂತರ ತಿನ್ನಲು ಸೋಂಪು ನೀಡುತ್ತಾರೆ. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುವುದು ಮಾತ್ರವಲ್ಲದೆ, ಬಾಯಿಯ ದುರ್ವಾಸನೆಯನ್ನೂ ಹೋಗಲಾಡಿಸುತ್ತದೆ. ಬೆಳ್ಳುಳ್ಳಿಯ ವಾಸನೆಯನ್ನು ತೆಗೆದುಹಾಕುವಲ್ಲಿ ಸೋಂಪು ವಿಶೇಷವಾಗಿ ಪರಿಣಾಮಕಾರಿಯಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ